AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ-ಕಿರಿಯ ಶ್ರೀಗಳ ಗುದ್ದಾಟಕ್ಕೆ ಶಿವಾನಂದ ಮಠದ ಅಡ್ಡ ಪಲ್ಲಕ್ಕಿ ಉತ್ಸವ, ರಥೋತ್ಸವ ಸ್ಥಗಿತ

ಗದಗ ನಗರದ ಶಿವಾನಂದ ಮಠದಲ್ಲಿ ಉಭಯ ಶ್ರೀಗಳ ಪೀಠ ಗುದ್ದಾಟಕ್ಕೆ ಜಾತ್ರೆಯೇ ಸ್ಥಗಿತಗೊಂಡಿದೆ. ಇಂದು ಸಂಜೆ ನಡೆಯಬೇಕಿದ್ದ ರಥೋತ್ಸವ, ಅಡ್ಡ ಪಲ್ಲಕ್ಕಿ ಉತ್ಸವ ಸ್ಥಗಿತಗೊಂಡಿದ್ದು, ಗದಗ ತಹಶೀಲ್ದಾರ್ ಅವರು ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಉಭಯ ಶ್ರೀಗಳ ವರ್ತನೆಗೆ ಭಕ್ತರು ಆಕ್ರೋಶ ಹೊರಹಾಕಿದ್ದಾರೆ.

ಹಿರಿಯ-ಕಿರಿಯ ಶ್ರೀಗಳ ಗುದ್ದಾಟಕ್ಕೆ ಶಿವಾನಂದ ಮಠದ ಅಡ್ಡ ಪಲ್ಲಕ್ಕಿ ಉತ್ಸವ, ರಥೋತ್ಸವ ಸ್ಥಗಿತ
ಹಿರಿಯ-ಕಿರಿಯ ಶ್ರೀಗಳ ಗುದ್ದಾಟಕ್ಕೆ ಶಿವಾನಂದ ಮಠದ ಅಡ್ಡ ಪಲ್ಲಕ್ಕಿ ಉತ್ಸವ, ರಥೋತ್ಸವ ಸ್ಥಗಿತ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Rakesh Nayak Manchi|

Updated on: Mar 09, 2024 | 5:06 PM

Share

ಗದಗ, ಮಾ.9: ನಗರದ (Gadag) ಶಿವಾನಂದ ಮಠದಲ್ಲಿ (Shivanand Math) ಉಭಯ ಶ್ರೀಗಳ ಪೀಠ ಗುದ್ದಾಟಕ್ಕೆ ಜಾತ್ರೆಯೇ ಸ್ಥಗಿತಗೊಂಡಿದೆ. ಇಂದು ಸಂಜೆ ನಡೆಯಬೇಕಿದ್ದ ರಥೋತ್ಸವ, ಅಡ್ಡ ಪಲ್ಲಕ್ಕಿ ಉತ್ಸವ ಸ್ಥಗಿತಗೊಂಡಿದ್ದು, ಗದಗ ತಹಶೀಲ್ದಾರ್ ಅವರು ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಹಿರಿಯ ಸ್ವಾಮೀಜಿ ಅಭಿನವ ಶಿವಾನಂದ ಶ್ರೀ ಮತ್ತು ಕಿರಿಯ ಸ್ವಾಮೀಜಿ ಸದಾಶಿವಾನಂದ ಭಾರತಿ‌ ಶ್ರೀ ನಡುವಿನ ಗುದ್ದಾಟಕ್ಕೆ ಭಕ್ತರು ಆಕ್ರೋಶ ಹೊರಹಾಕಿದ್ದಾರೆ.

ಶಿವರಾತ್ರಿ ಮರುದಿನ ಅಂದರೆ ಇಂದು ಗದಗ ಶಿವಾನಂದ ಮಠದ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿತ್ತು. ಕಳೆದ 104 ವರ್ಷಗಳಿಂದ ಅದ್ದೂರಿಯಾಗಿ ಅಡ್ಡ ಪಲ್ಲಕ್ಕಿ, ರಥೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಾ ಬಂದಿವೆ. ಮಾಹಾಮಾರಿ ಕೋವಿಡ್ ಸಮಯದಲ್ಲಿ ಕೂಡಾ ಈ ಜಾತ್ರಾ ಮಹೋತ್ಸವ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಉಭಯ ಶ್ರೀಗಳ ಪೀಠಕ್ಕಾಗಿ ನಡೆಯುತ್ತಿರುವ ಹಗ್ಗ ಜಗ್ಗಾಟಕ್ಕೆ ಅಡ್ಡ ಪಲ್ಲಕ್ಕಿ, ರಥೋತ್ಸವವೇ ರದ್ದಾಗಿದೆ.

ಗದಗದ ಶ್ರೀ ಶಿವಾನಂದ ಮಠದ ಜಾತ್ರೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಹಿರಿಯ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹಾಗೂ ಕಿರಿಯ ಶ್ರೀ ಸದಾಶಿವಾನಂದ ಭಾರತಿ ಸ್ವಾಮೀಜಿಗಳ ನಡುವೆ ಪೀಠಕ್ಕಾಗಿ ಸಮರವೇ ಆರಂಭವಾಗಿತ್ತು. ನಿನ್ನೆಯವರಿಗೆ ಹತ್ತಾರು ಸಭೆಗಳನ್ನು ಮಾಡಿ, ಮನವೊಲಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಉಭಯ ಶ್ರೀಗಳು ತಮ್ಮ ಹಠವನ್ನು ಸಾಧಿಸಿದ್ದಾರೆ. ಹೀಗಾಗಿ ತಹಶೀಲ್ದಾರ್ ಅವರು 144 ಕಲಂ ಜಾರಿ ಮಾಡಿದ್ದಾರೆ. ಹೀಗಾಗಿ ಕಿರೀಟ ಪೂಜೆ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ರದ್ದು ಮಾಡಲಾಗಿದೆ. ಜಾತ್ರೆ ಇದೇ ಎಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಉಭಯ ಶ್ರೀಗಳ ನಡೆಯಿಂದ ಜಾತ್ರೆ ರದ್ದು ಆಗಿರುವುದು ಬೇಸರವಾಗುತ್ತಿದೆ ಎಂದು ಭಕ್ತರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೊ ಕೇಸ್​ನಡಿ ಕುಣಿಗಲ್ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ, ಆಪ್ತ ಸಹಾಯಕ ಅರೆಸ್ಟ್​

ಶಿವಾನಂದ ಮಠಕ್ಕೆ ತನ್ನದೆಯಾದ ಇತಿಹಾಸಯಿದೆ. ನೂರಾರು ವರ್ಷಗಳಿಂದ ಜಾತ್ರಾ ಮಹೋತ್ಸವ ನಡೆದುಕೊಂಡು ಬಂದಿದೆ.‌ ಈ ಭಾರಿಯೂ ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ನಾನಾ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಆದರೆ, 144 ಕಲಂ ಜಾರಿ ಮಾಡಿ, ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಹೀಗಾಗಿ ಶ್ರೀ ನಡೆಯ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.

ಮಠದ ಆವರಣದಲ್ಲಿ ಭಕ್ತರ ಸಂಖ್ಯೆ ವಿರಳವಾಗಿದೆ. ಗುರುಗಳ ಸ್ಥಾನದಲ್ಲಿ ಇರಬೇಕಾದ ಸ್ವಾಮೀಜಿಗಳು ಹೀಗೆ ಜಗಳ ಮಾಡಿದರೆ ಹೇಗೆ ಎಂದು ಭಕ್ತರು ಪ್ರಶ್ನಿಸುತ್ತಿದ್ದಾರೆ. ಜಾತ್ರೆಯನ್ನು ರದ್ದು ಮಾಡಿದ್ದಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಸ್ಥಳೀಯ ಭಕ್ತರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಬಂದ ಭಕ್ತರಿಗೆ ಯಾವುದೇ ವಿಷಯ ಹೇಳದೆ ಜಾತ್ರೆ ರದ್ದು ಮಾಡಲಾಗಿದೆ. ಮಠದ ಒಳಗೆ ರಾಜಕೀಯ ಬಂದು, ಐತಿಹಾಸಿಕ ಹಿನ್ನಲೆ ಇರುವ ಜಾತ್ರೆಯನ್ನು ರದ್ದು ಮಾಡಿರುವುದು ಭಕ್ತರಿಗೆ ಬಹಳ ನಿರಾಸೆಯಾಗಿದೆ.

ಶಿವಾನಂದ ಮಠದ ಕೋಟ್ಯಾಂತರ ರೂಪಾಯಿ ಆಸ್ತಿಯಿದೆ. ಹೀಗಾಗಿ ಮಠದ ಒಳಗಡೆ ರಾಜಕೀಯ ಎಂಟ್ರಿ ಆಗಿದ್ದಕ್ಕೆ ಜಾತ್ರೆ ರದ್ದಾಗಿದೆ ಎಂದು ಭಕ್ತರು ಕಿಡಿಕಾರಿದರು. ಒಟ್ಟಾರೆಯಾಗಿ, ಉಭಯ ಶ್ರೀಗಳ ಪೀಠ ಕಿತ್ತಾಟಕ್ಕೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯ, ರಥೋತ್ಸವ ರದ್ದಾಗಿದೆ. ಹೀಗಾಗಿ ಅಸಂಖ್ಯಾತ ಭಕ್ತರಿಗೆ ಸಾಕಷ್ಟು ನೋವು, ನಿರಾಸೆಯಾಗಿದೆ. ಇನಾದರೂ ಲಿಂಗೈಕ್ಯ ಶ್ರೀ ಶಿವಾನಂದ ಸ್ವಾಮೀಜಿ, ಉಭಯ ಶ್ರೀಗಳಿಗೆ ಒಳ್ಳೆಯ ಬುದ್ದಿ ನೀಡಲಿ ಎಂದು ಭಕ್ತರೆ ಪ್ರಾರ್ಥನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ