AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುದಾನ ಕೊರತೆ: ಹೆಸ್ಕಾಂಗೆ ವಿದ್ಯುತ್ ಬಿಲ್ ಪಾವತಿಸಲಾಗದೇ ಸರ್ಕಾರಿ ಇಲಾಖೆಗಳ ಪರದಾಟ, 72 ಕೋಟಿ ರೂ. ಬಾಕಿ

ಗದಗ ಹೆಸ್ಕಾಂ ಇಲಾಖೆ ಆರ್ಥಿಕವಾಗಿ ಒದ್ದಾಡುತ್ತಿದೆ. ಸರ್ಕಾರಿ ಇಲಾಖೆಗಳು ಕೋಟ್ಯಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಹೆಸ್ಕಾಂಗೆ ಭಾರಿ ಹೊಡೆತ ನೀಡಿದೆ. ಒಂದೂವರೆ ವರ್ಷಗಳಿಂದ ಅನುದಾನ ಇಲ್ಲದೇ ಬಹುತೇಕ ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಕಟ್ಟದಾಗದೇ ಪರದಾಡುತ್ತಿವೆ. ಆದ್ರೆ, ಹೆಸ್ಕಾಂ ಇಲಾಖೆ ಮಾತ್ರ ಆರ್ಥಿಕವಾಗಿ ಕುಸಿದು ಹೋಗಿದೆ.

ಅನುದಾನ ಕೊರತೆ: ಹೆಸ್ಕಾಂಗೆ ವಿದ್ಯುತ್ ಬಿಲ್ ಪಾವತಿಸಲಾಗದೇ ಸರ್ಕಾರಿ ಇಲಾಖೆಗಳ ಪರದಾಟ, 72 ಕೋಟಿ ರೂ. ಬಾಕಿ
ಹೆಸ್ಕಾಂ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Dec 18, 2024 | 11:26 AM

Share

ಗದಗ, ಡಿಸೆಂಬರ್ 18: ಗದಗ ಹೆಸ್ಕಾಂ ಆರ್ಥಿಕ ಪರಿಸ್ಥಿತಿ ಕುಸಿದು ಹೋಗಿದೆ. ಸರ್ಕಾರಿ ಕಚೇರಿಗಳು ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಬಿಲ್ ವಸೂಲಿಗೆ ಹೆಣಗಾಡುವ ಸ್ಥಿತಿ ಬಂದಿದೆ. ಒಂದು ವರ್ಷದಿಂದ ಬಹುತೇಕ ಇಲಾಖೆಗಳಿಂದ ವಿದ್ಯುತ್ ಬಿಲ್ ಪಾವತಿಯಾಗಿಲ್ಲ. ಹೀಗಾಗಿ ಕೇವಲ ಸರ್ಕಾರಿ ಕಚೇರಿಗಳಿಂದಲೇ ಬರೊಬ್ಬರಿ ಸುಮಾರು 72 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿದಿದೆ.

ಅನುದಾನ ಕೊರತೆಯೇ ಕಾರಣ

ಸರ್ಕಾರಿ ಇಲಾಖೆಗಳ ವಿದ್ಯುತ್ ಬಿಲ್ ಬಾಕಿಗೆ ಪ್ರಮುಖ ಕಾರಣ ಅನುದಾನ ಕೊರತೆ ಎನ್ನಲಾಗಿದೆ. ಒಂದೂವರೆ ವರ್ಷದಿಂದ ನೀರಾವರಿ ನಿಗಮ, ಸ್ಥಳೀಯ ಸಂಸ್ಥೆ, ಜಿಲ್ಲಾ ಪಂಚಾಯತ್ ಸೇರಿದಂತೆ ಬಹುತೇಕ ಇಲಾಖೆಗಳಿಗೆ ಸಮರ್ಪಕ ಅನುದಾನ ಬಂದಿಲ್ಲ. ಹೀಗಾಗಿ ವಿದ್ಯುತ್ ಬಿಲ್ ಪಾವತಿಸಲು ಹಣವಿಲ್ಲದೇ ಸರ್ಕಾರಿ ಇಲಾಖೆಗಳು ಅಂತ ಒದ್ದಾಡುತ್ತಿವೆ. ಈ ಮಧ್ಯೆ ಹೆಸ್ಕಾಂ ಅಧಿಕಾರಿಗಳು ಬಿಲ್ ವಸೂಲಿಗೆ ಪರದಾಡುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ. ಮತ್ತೊಂದೆಡೆ ಹೆಸ್ಕಾಂನಲ್ಲಿ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದೆ. ಗದಗ ಜಿಲ್ಲೆಯಲ್ಲಿ ಎರಡು ಹೆಸ್ಕಾಂ ವಿಭಾಗಗಳು ಇವೆ. ಗದಗ ವಿಭಾಗ 70 ಕೋಟಿ ರೂ. ಮತ್ತೊಂದು ರೋಣ ವಿಭಾಗದಲ್ಲಿ 11.68 ಕೋಟಿ ರೂ. ಸೇರಿ ಒಟ್ಟು 82ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿಯಿದೆ.

ಸಾರ್ವಜನಿಕರಿಂದ ವಿದ್ಯುತ್ ಹೆಚ್ಚೇನೂ ಬಾಕಿ ಇಲ್ಲ. ಸರ್ಕಾರಿ ಇಲಾಖೆಗಳಿಂದಲೇ ಕೋಟಿ ಕೋಟಿ ವಿದ್ಯುತ್ ಬಿಲ್ ಬರಬೇಕಿದೆ. ಗದಗ ಜಿಲ್ಲೆಯ ಗದಗ-ಬೆಟಗೇರಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳು ಸೇರಿದಂತೆ ಕುಡಿಯುವ ನೀರು ಯೋಜನೆ, ಬೀದಿ ದೀಪಗಳ ಕೋಟಿ ಕೋಟಿ ಬಿಲ್ ಬಾಕಿ ಇದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್​​ ಕೊರೆಸಿದ ಅತ್ತೆ-ಸೊಸೆಗೆ ಡಿಕೆ ಶಿವಕುಮಾರ್​ ಶ್ಲಾಘನೆ

ಯಾವ ಇಲಾಖೆಯಿಂದ ಎಷ್ಟು ಬಿಲ್ ಬಾಕಿ?

ಗ್ರಾಮ ಪಂಚಾಯತ್ ಗಳಿಂದ 27.60 ಕೋಟಿ ರೂ. ಬಾಕಿ ಇದೆ. 3.69 ಕೋಟಿ ಪಟ್ಟಣ ಪಂಚಾಯತ್​​ಗಳಿಂದ ಬರಬೇಕಿದೆ. ನೀರಾವರಿ ನಿಗಮದಿಂದ ಬರೊಬ್ಬರಿ 37.54 ಕೋಟಿ ರೂ. ಬರಬೇಕಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ 1.72 ಕೋಟಿ ರೂ, ಆರೋಗ್ಯ ಇಲಾಖೆ 20 ಲಕ್ಷ ರೂ, ಅರಣ್ಯ ಇಲಾಖೆ 9 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ವಸೂಲಿಗಾಗಿ ಹೆಸ್ಕಾಂ ನೋಟಿಸ್ ನೀಡಿದೆ ಎಂದು ಹೆಸ್ಕಾಂ ಗದಗ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್