AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುದಾನ ಕೊರತೆ: ಹೆಸ್ಕಾಂಗೆ ವಿದ್ಯುತ್ ಬಿಲ್ ಪಾವತಿಸಲಾಗದೇ ಸರ್ಕಾರಿ ಇಲಾಖೆಗಳ ಪರದಾಟ, 72 ಕೋಟಿ ರೂ. ಬಾಕಿ

ಗದಗ ಹೆಸ್ಕಾಂ ಇಲಾಖೆ ಆರ್ಥಿಕವಾಗಿ ಒದ್ದಾಡುತ್ತಿದೆ. ಸರ್ಕಾರಿ ಇಲಾಖೆಗಳು ಕೋಟ್ಯಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಹೆಸ್ಕಾಂಗೆ ಭಾರಿ ಹೊಡೆತ ನೀಡಿದೆ. ಒಂದೂವರೆ ವರ್ಷಗಳಿಂದ ಅನುದಾನ ಇಲ್ಲದೇ ಬಹುತೇಕ ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಕಟ್ಟದಾಗದೇ ಪರದಾಡುತ್ತಿವೆ. ಆದ್ರೆ, ಹೆಸ್ಕಾಂ ಇಲಾಖೆ ಮಾತ್ರ ಆರ್ಥಿಕವಾಗಿ ಕುಸಿದು ಹೋಗಿದೆ.

ಅನುದಾನ ಕೊರತೆ: ಹೆಸ್ಕಾಂಗೆ ವಿದ್ಯುತ್ ಬಿಲ್ ಪಾವತಿಸಲಾಗದೇ ಸರ್ಕಾರಿ ಇಲಾಖೆಗಳ ಪರದಾಟ, 72 ಕೋಟಿ ರೂ. ಬಾಕಿ
ಹೆಸ್ಕಾಂ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Dec 18, 2024 | 11:26 AM

Share

ಗದಗ, ಡಿಸೆಂಬರ್ 18: ಗದಗ ಹೆಸ್ಕಾಂ ಆರ್ಥಿಕ ಪರಿಸ್ಥಿತಿ ಕುಸಿದು ಹೋಗಿದೆ. ಸರ್ಕಾರಿ ಕಚೇರಿಗಳು ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಬಿಲ್ ವಸೂಲಿಗೆ ಹೆಣಗಾಡುವ ಸ್ಥಿತಿ ಬಂದಿದೆ. ಒಂದು ವರ್ಷದಿಂದ ಬಹುತೇಕ ಇಲಾಖೆಗಳಿಂದ ವಿದ್ಯುತ್ ಬಿಲ್ ಪಾವತಿಯಾಗಿಲ್ಲ. ಹೀಗಾಗಿ ಕೇವಲ ಸರ್ಕಾರಿ ಕಚೇರಿಗಳಿಂದಲೇ ಬರೊಬ್ಬರಿ ಸುಮಾರು 72 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿದಿದೆ.

ಅನುದಾನ ಕೊರತೆಯೇ ಕಾರಣ

ಸರ್ಕಾರಿ ಇಲಾಖೆಗಳ ವಿದ್ಯುತ್ ಬಿಲ್ ಬಾಕಿಗೆ ಪ್ರಮುಖ ಕಾರಣ ಅನುದಾನ ಕೊರತೆ ಎನ್ನಲಾಗಿದೆ. ಒಂದೂವರೆ ವರ್ಷದಿಂದ ನೀರಾವರಿ ನಿಗಮ, ಸ್ಥಳೀಯ ಸಂಸ್ಥೆ, ಜಿಲ್ಲಾ ಪಂಚಾಯತ್ ಸೇರಿದಂತೆ ಬಹುತೇಕ ಇಲಾಖೆಗಳಿಗೆ ಸಮರ್ಪಕ ಅನುದಾನ ಬಂದಿಲ್ಲ. ಹೀಗಾಗಿ ವಿದ್ಯುತ್ ಬಿಲ್ ಪಾವತಿಸಲು ಹಣವಿಲ್ಲದೇ ಸರ್ಕಾರಿ ಇಲಾಖೆಗಳು ಅಂತ ಒದ್ದಾಡುತ್ತಿವೆ. ಈ ಮಧ್ಯೆ ಹೆಸ್ಕಾಂ ಅಧಿಕಾರಿಗಳು ಬಿಲ್ ವಸೂಲಿಗೆ ಪರದಾಡುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ. ಮತ್ತೊಂದೆಡೆ ಹೆಸ್ಕಾಂನಲ್ಲಿ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದೆ. ಗದಗ ಜಿಲ್ಲೆಯಲ್ಲಿ ಎರಡು ಹೆಸ್ಕಾಂ ವಿಭಾಗಗಳು ಇವೆ. ಗದಗ ವಿಭಾಗ 70 ಕೋಟಿ ರೂ. ಮತ್ತೊಂದು ರೋಣ ವಿಭಾಗದಲ್ಲಿ 11.68 ಕೋಟಿ ರೂ. ಸೇರಿ ಒಟ್ಟು 82ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿಯಿದೆ.

ಸಾರ್ವಜನಿಕರಿಂದ ವಿದ್ಯುತ್ ಹೆಚ್ಚೇನೂ ಬಾಕಿ ಇಲ್ಲ. ಸರ್ಕಾರಿ ಇಲಾಖೆಗಳಿಂದಲೇ ಕೋಟಿ ಕೋಟಿ ವಿದ್ಯುತ್ ಬಿಲ್ ಬರಬೇಕಿದೆ. ಗದಗ ಜಿಲ್ಲೆಯ ಗದಗ-ಬೆಟಗೇರಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳು ಸೇರಿದಂತೆ ಕುಡಿಯುವ ನೀರು ಯೋಜನೆ, ಬೀದಿ ದೀಪಗಳ ಕೋಟಿ ಕೋಟಿ ಬಿಲ್ ಬಾಕಿ ಇದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್​​ ಕೊರೆಸಿದ ಅತ್ತೆ-ಸೊಸೆಗೆ ಡಿಕೆ ಶಿವಕುಮಾರ್​ ಶ್ಲಾಘನೆ

ಯಾವ ಇಲಾಖೆಯಿಂದ ಎಷ್ಟು ಬಿಲ್ ಬಾಕಿ?

ಗ್ರಾಮ ಪಂಚಾಯತ್ ಗಳಿಂದ 27.60 ಕೋಟಿ ರೂ. ಬಾಕಿ ಇದೆ. 3.69 ಕೋಟಿ ಪಟ್ಟಣ ಪಂಚಾಯತ್​​ಗಳಿಂದ ಬರಬೇಕಿದೆ. ನೀರಾವರಿ ನಿಗಮದಿಂದ ಬರೊಬ್ಬರಿ 37.54 ಕೋಟಿ ರೂ. ಬರಬೇಕಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ 1.72 ಕೋಟಿ ರೂ, ಆರೋಗ್ಯ ಇಲಾಖೆ 20 ಲಕ್ಷ ರೂ, ಅರಣ್ಯ ಇಲಾಖೆ 9 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ವಸೂಲಿಗಾಗಿ ಹೆಸ್ಕಾಂ ನೋಟಿಸ್ ನೀಡಿದೆ ಎಂದು ಹೆಸ್ಕಾಂ ಗದಗ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್