AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುದಾನ ಕೊರತೆ: ಹೆಸ್ಕಾಂಗೆ ವಿದ್ಯುತ್ ಬಿಲ್ ಪಾವತಿಸಲಾಗದೇ ಸರ್ಕಾರಿ ಇಲಾಖೆಗಳ ಪರದಾಟ, 72 ಕೋಟಿ ರೂ. ಬಾಕಿ

ಗದಗ ಹೆಸ್ಕಾಂ ಇಲಾಖೆ ಆರ್ಥಿಕವಾಗಿ ಒದ್ದಾಡುತ್ತಿದೆ. ಸರ್ಕಾರಿ ಇಲಾಖೆಗಳು ಕೋಟ್ಯಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಹೆಸ್ಕಾಂಗೆ ಭಾರಿ ಹೊಡೆತ ನೀಡಿದೆ. ಒಂದೂವರೆ ವರ್ಷಗಳಿಂದ ಅನುದಾನ ಇಲ್ಲದೇ ಬಹುತೇಕ ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಕಟ್ಟದಾಗದೇ ಪರದಾಡುತ್ತಿವೆ. ಆದ್ರೆ, ಹೆಸ್ಕಾಂ ಇಲಾಖೆ ಮಾತ್ರ ಆರ್ಥಿಕವಾಗಿ ಕುಸಿದು ಹೋಗಿದೆ.

ಅನುದಾನ ಕೊರತೆ: ಹೆಸ್ಕಾಂಗೆ ವಿದ್ಯುತ್ ಬಿಲ್ ಪಾವತಿಸಲಾಗದೇ ಸರ್ಕಾರಿ ಇಲಾಖೆಗಳ ಪರದಾಟ, 72 ಕೋಟಿ ರೂ. ಬಾಕಿ
ಹೆಸ್ಕಾಂ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Dec 18, 2024 | 11:26 AM

Share

ಗದಗ, ಡಿಸೆಂಬರ್ 18: ಗದಗ ಹೆಸ್ಕಾಂ ಆರ್ಥಿಕ ಪರಿಸ್ಥಿತಿ ಕುಸಿದು ಹೋಗಿದೆ. ಸರ್ಕಾರಿ ಕಚೇರಿಗಳು ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಬಿಲ್ ವಸೂಲಿಗೆ ಹೆಣಗಾಡುವ ಸ್ಥಿತಿ ಬಂದಿದೆ. ಒಂದು ವರ್ಷದಿಂದ ಬಹುತೇಕ ಇಲಾಖೆಗಳಿಂದ ವಿದ್ಯುತ್ ಬಿಲ್ ಪಾವತಿಯಾಗಿಲ್ಲ. ಹೀಗಾಗಿ ಕೇವಲ ಸರ್ಕಾರಿ ಕಚೇರಿಗಳಿಂದಲೇ ಬರೊಬ್ಬರಿ ಸುಮಾರು 72 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿದಿದೆ.

ಅನುದಾನ ಕೊರತೆಯೇ ಕಾರಣ

ಸರ್ಕಾರಿ ಇಲಾಖೆಗಳ ವಿದ್ಯುತ್ ಬಿಲ್ ಬಾಕಿಗೆ ಪ್ರಮುಖ ಕಾರಣ ಅನುದಾನ ಕೊರತೆ ಎನ್ನಲಾಗಿದೆ. ಒಂದೂವರೆ ವರ್ಷದಿಂದ ನೀರಾವರಿ ನಿಗಮ, ಸ್ಥಳೀಯ ಸಂಸ್ಥೆ, ಜಿಲ್ಲಾ ಪಂಚಾಯತ್ ಸೇರಿದಂತೆ ಬಹುತೇಕ ಇಲಾಖೆಗಳಿಗೆ ಸಮರ್ಪಕ ಅನುದಾನ ಬಂದಿಲ್ಲ. ಹೀಗಾಗಿ ವಿದ್ಯುತ್ ಬಿಲ್ ಪಾವತಿಸಲು ಹಣವಿಲ್ಲದೇ ಸರ್ಕಾರಿ ಇಲಾಖೆಗಳು ಅಂತ ಒದ್ದಾಡುತ್ತಿವೆ. ಈ ಮಧ್ಯೆ ಹೆಸ್ಕಾಂ ಅಧಿಕಾರಿಗಳು ಬಿಲ್ ವಸೂಲಿಗೆ ಪರದಾಡುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ. ಮತ್ತೊಂದೆಡೆ ಹೆಸ್ಕಾಂನಲ್ಲಿ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದೆ. ಗದಗ ಜಿಲ್ಲೆಯಲ್ಲಿ ಎರಡು ಹೆಸ್ಕಾಂ ವಿಭಾಗಗಳು ಇವೆ. ಗದಗ ವಿಭಾಗ 70 ಕೋಟಿ ರೂ. ಮತ್ತೊಂದು ರೋಣ ವಿಭಾಗದಲ್ಲಿ 11.68 ಕೋಟಿ ರೂ. ಸೇರಿ ಒಟ್ಟು 82ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿಯಿದೆ.

ಸಾರ್ವಜನಿಕರಿಂದ ವಿದ್ಯುತ್ ಹೆಚ್ಚೇನೂ ಬಾಕಿ ಇಲ್ಲ. ಸರ್ಕಾರಿ ಇಲಾಖೆಗಳಿಂದಲೇ ಕೋಟಿ ಕೋಟಿ ವಿದ್ಯುತ್ ಬಿಲ್ ಬರಬೇಕಿದೆ. ಗದಗ ಜಿಲ್ಲೆಯ ಗದಗ-ಬೆಟಗೇರಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳು ಸೇರಿದಂತೆ ಕುಡಿಯುವ ನೀರು ಯೋಜನೆ, ಬೀದಿ ದೀಪಗಳ ಕೋಟಿ ಕೋಟಿ ಬಿಲ್ ಬಾಕಿ ಇದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್​​ ಕೊರೆಸಿದ ಅತ್ತೆ-ಸೊಸೆಗೆ ಡಿಕೆ ಶಿವಕುಮಾರ್​ ಶ್ಲಾಘನೆ

ಯಾವ ಇಲಾಖೆಯಿಂದ ಎಷ್ಟು ಬಿಲ್ ಬಾಕಿ?

ಗ್ರಾಮ ಪಂಚಾಯತ್ ಗಳಿಂದ 27.60 ಕೋಟಿ ರೂ. ಬಾಕಿ ಇದೆ. 3.69 ಕೋಟಿ ಪಟ್ಟಣ ಪಂಚಾಯತ್​​ಗಳಿಂದ ಬರಬೇಕಿದೆ. ನೀರಾವರಿ ನಿಗಮದಿಂದ ಬರೊಬ್ಬರಿ 37.54 ಕೋಟಿ ರೂ. ಬರಬೇಕಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ 1.72 ಕೋಟಿ ರೂ, ಆರೋಗ್ಯ ಇಲಾಖೆ 20 ಲಕ್ಷ ರೂ, ಅರಣ್ಯ ಇಲಾಖೆ 9 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ವಸೂಲಿಗಾಗಿ ಹೆಸ್ಕಾಂ ನೋಟಿಸ್ ನೀಡಿದೆ ಎಂದು ಹೆಸ್ಕಾಂ ಗದಗ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ