ಗದಗ: ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೊತ್ತದ ಜಮೀನು ಲೂಟಿಗೆ ಪ್ಲಾನ್! ಆರು ಮಂದಿ ಅರೆಸ್ಟ್

ಕೋಟ್ಯಾಧಿಪತಿಗಳೇ ಹುಷಾರ್. ನಿಮ್ಮ ಕೋಟಿ ಕೋಟಿ ಮೊತ್ತದ ಆಸ್ತಿ ನಿಮ್ಮ ಹೆಸರಿನಲ್ಲೇ ಇವೆಯೋ ಅಂತ ಒಮ್ಮೆ ಚೆಕ್ ಮಾಡಿಕೊಳ್ಳಿ. ಏಕೆಂದರೆ, ನಕಲಿ ದಾಖಲೆ ಸೃಷ್ಟಿಸಿ ಜಮೀನು ಲೂಟಿ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಸದ್ಯ ಗ್ಯಾಂಗ್​ನ ಆರು ಮಂದಿಯನ್ನು ಬಂಧಿಸಲಾಗಿದೆ.

ಗದಗ: ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೊತ್ತದ ಜಮೀನು ಲೂಟಿಗೆ ಪ್ಲಾನ್! ಆರು ಮಂದಿ ಅರೆಸ್ಟ್
ಜಮೀನು ಲೂಟಿ ಮಾಡಲು ಮುಂದಾಗಿ ಬಂಧಿತರಾದ ಆರೋಪಿಗಳು
Follow us
| Updated By: Rakesh Nayak Manchi

Updated on: Aug 06, 2023 | 4:19 PM

ಗದಗ, ಆಗಸ್ಟ್ 6: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಠಿ ಮಾಡಿ ಕೋಟಿ ಕೋಟಿ ಆಸ್ತಿ ಲಪಟಾಯಿಸುವ ಗ್ಯಾಂಗ್ ತಲೆಎತ್ತಿದೆ. ಈಗಾಗಲೇ ಎರಡರಿಂದ ಮೂರು ಆಸ್ತಿ ನುಂಗಿದ ಗ್ಯಾಂಗ್ ಈಗ 40 ಕೋಟಿಗೂ ಅಧಿಕ ಮೊತ್ತದ ಜಮೀನು ಲೂಟಿ ಮಾಡಿಲು ಹೋಗಿ ತಗಲಾಕಿಕೊಂಡಿದೆ. ಈ ಗ್ಯಾಂಗ್​ನ ಕೃತ್ಯಕ್ಕೆ ಇಡೀ ಗದಗ (Gadag) ಜಿಲ್ಲೆಯ ಜನರೇ ದಂಗಾಗಿ ಹೋಗಿದ್ದಾರೆ.

ಗದಗ ನಗರದ ಜಿಲ್ಲಾಡಳಿತ ಭವನದ ಹಿಂದೆ ಕೇಶವದಾಸ್ ಸಹುಕಾರ್ ಫ್ಯಾಮಿಲಿಗೆ ಸೇರಿದ ಸರ್ವೇ ನಂಬರ್ 298, 20 ಎಕರೆ 34ಗುಂಟೆ ಜಮೀನು ಇದೆ. ಗದಗ ನಗರಕ್ಕೆ ಹೊಂದಿಕೊಂಡು ಇರುವುದರಿಂದ ರೀಯಲ್ ಎಸ್ಟೇಟ್ ವ್ಯವಹಾರ ಮಾಡಲು ಈ ಜಮೀನು ಹಾಗೇ ಇಟ್ಟಿದ್ದಾರೆ. ಇಲ್ಲಿ ಫ್ಲಾಟ್​ಗಳನ್ನು ನಿರ್ಮಿಸಿ ಮಾರಾಟ ಮಾಡಿದರೆ ಸುಮಾರು 100 ಕೋಟಿಗೂ ಅಧಿಕ ಮೌಲ್ಯ ಆಗುತ್ತಂತೆ.

ಇಂಥ ದೊಡ್ಡ ಆಸ್ತಿ ಲೂಟಿಗೆ ಪ್ಲಾನ್ ಮಾಡಿದ್ದ ಖತರ್ನಾಕ ಗ್ಯಾಂಗ್​ನ ಆರು ಸದಸದ್ಯರನ್ನು ಗದಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾತಲಗೇರಿ ಗ್ರಾಮದ ರಂಗನಗೌಡ ಪಾಟೀಲ್, ಲಕ್ಷ್ಮೀಬಾಯಿ ರಂಗನಗೌಡ ಪಾಟೀಲ್, ಗಂಗಮ್ಮ ಕರಿಯಣ್ಣವರ, ಸವಿತಾ ಮೇಲ್ಮನಿ, ಕದಡಿ ಗ್ರಾಮದ ಈಶ್ವರ ಪೂಜಾರ, ಗದಗನ ಬೆಟಗೇರಿಯ ಸುಲೇಮಾನ ಮಾಳೆಕೊಪ್ಪ ಬಂಧಿತ ಆರೋಪಿಗಳಾಗಿದ್ದಾರೆ. ಆದರೆ, ಕಿಂಗ್ ಪಿನ್ ಎನ್ನಲಾದ ಕೃಷ್ಣಗೌಡ ಪಾಟೀಲ್ ಹಾಗೂ ಬಸವರಾಜ್ ಮೇಲ್ಮನಿ ಈ ಇಬ್ಬರು ನಾಪತ್ತೆಯಾಗಿದ್ದಾರೆ ಎಂದರು ಎಸ್​ಪಿ ಬಿ.ಎಸ್.ನೇಮಗೌಡ ಹೇಳಿದ್ದಾರೆ.

ಇದನ್ನೂ ಓದಿ: ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?

ಶ್ರೀಮಂತರ ಆಸ್ತಿಗಳನ್ನೇ ಟಾರ್ಗೆಟ್ ಮಾಡುವ ಈ ಗ್ಯಾಂಗ್ ಈಗಾಗಲೇ ಕೋಟ್ಯಾಂತರ ಮೊತ್ತದ ಎರಡು ಆಸ್ತಿಗಳನ್ನು ಈಗಾಗಲೇ ನಕಲಿ ದಾಖಲೆ ಸೃಷ್ಠಿಸಿ ಲೂಟಿ ಮಾಡಿದೆ. ಈಗ ಮೂರನೇ ಜಮೀನನ್ನು ಲೂಟಿ ಮಾಡಲು ಹೋಗಿ ಸಬ್ ರಜಿಸ್ಟ್ರಾರ್ ಕಚೇರಿಯಲ್ಲಿ ಸಿಕ್ಕಾಕಿಕೊಂಡಿದೆ. ಗದಗನ ಕೇಶವ ದಾಸ್ ಸಾಹುಕಾರ್ ಫ್ಯಾಮಿಲಿ ಸದಸ್ಯರ ಆಸ್ತಿ ನಾವೇ ಒರಿಜಿನಲ್ ಮಾಲೀಕರು ಅಂತ ತೋರಿಸಲು ನಕಲಿ ಆಧಾರ್ ಕಾರ್ಡ್​​ ಸೃಷ್ಟಿಸಿದ್ದಾರೆ. ಇದರಲ್ಲಿ ಹೆಸರು ಮೂಲ ಮಾಲೀಕರದ್ದೇ ಆಗಿದ್ದು, ಫೋಟೋ ಮಾತ್ರ ಆರೋಪಿಗಳದ್ದಾಗಿದೆ.

ಕಾಗದ ಪತ್ರ ಇತ್ಯಾದಿಗಳನ್ನು ಸಿದ್ಧಪಡಿಸಿದ ಆರೋಪಿಗಳು ಇನ್ನೇನೂ ಸಬ್ ರಜಿಸ್ಟ್ರಾರ್ ಕಚೇರಿಯಲ್ಲಿ ಕಂಪ್ಯೂಟರ್​ನಲ್ಲಿ ಮಾಲೀಕರ ಫೋಟು ತೆಗೆಯುವಾಗ ಗದಗ ರಜಿಸ್ಟ್ರಾರ್ ಪಂಚಾಕ್ಷರಿ ಅವರಿಗೆ ಅನುಮಾನ ಬಂದಿದೆ. ಆಗ ಕೆಲವರನ್ನು ಕರೆದು ವಿಚಾರಿಸಿದ್ದಾರೆ. ಆಗ ಇವರು ಮೂಲ ಮಾಲೀಕರು ಅಲ್ಲ ಅಂತ ಗೋತ್ತಾಗಿದೆ. ಆಗ ಜಾಣತನ ತೋರಿದ ಅಧಿಕಾರಿ ಪಂಚಾಕ್ಷರಿ ತಕ್ಷಣ ಮೂಲ ಮಾಲೀಕರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅದರಂತೆ, ಜಮೀನಿನ ಮೂಲ ಮಾಲಕರು ಹಾಗೂ ಪೊಲೀಸರು ಕಚೇರಿಗೆ ಆಗಮಿಸಿ ನಕಲಿ ಗ್ಯಾಂಗ್​ನ ಆರು ಜನರನ್ನು ಬಂಧಿಸಿದ್ದಾರೆ. ಸಬ್ ರಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಸಮಯ ಪ್ರಜ್ನೆ, ಪ್ರಾಮಾಣಿಕತೆಗೆ ಕೋಟ್ಯಾಂತರ ಮೌಲ್ಯದ ಆಸ್ತಿ ಮೂಲ ಮಾಲೀಕರ ಬಳಿಯೇ ಉಳಿಯುವಂತಾಗಿದೆ. ಸಬ್ ರೆಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಕಾರ್ಯಕ್ಕೆ ಗದಗ ಜಿಲ್ಲೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಈ ಖತರ್ನಾಕ್ ಜಾಲದ ಕೃತ್ಯಕ್ಕೆ ಇಡೀ ಗದಗ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಈಗಾಗಲೇ ಆರು ಜನರನ್ನು ಅರೆಸ್ಟ್ ಮಾಡಿದ ಗದಗ ಶಹರ ಠಾಣಾ ಪೊಲೀಸರು, ಪ್ರಮುಖ ಆರೋಪಿ ಕಿಂಗ್ ಪಿನ್ ಕೃಷ್ಣಗೌಡ ಪಾಟೀಲ್, ಬಸವರಾಜ್ ಮೇಲ್ಮನಿ ಬಂಧನಕ್ಕೆ ಜಾಲ ಬೀಸಿದ್ದಾರೆ. ಇನ್ನೂ ಈ ನಕಲಿ ಗ್ಯಾಂಗ್​ನಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!