AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೊತ್ತದ ಜಮೀನು ಲೂಟಿಗೆ ಪ್ಲಾನ್! ಆರು ಮಂದಿ ಅರೆಸ್ಟ್

ಕೋಟ್ಯಾಧಿಪತಿಗಳೇ ಹುಷಾರ್. ನಿಮ್ಮ ಕೋಟಿ ಕೋಟಿ ಮೊತ್ತದ ಆಸ್ತಿ ನಿಮ್ಮ ಹೆಸರಿನಲ್ಲೇ ಇವೆಯೋ ಅಂತ ಒಮ್ಮೆ ಚೆಕ್ ಮಾಡಿಕೊಳ್ಳಿ. ಏಕೆಂದರೆ, ನಕಲಿ ದಾಖಲೆ ಸೃಷ್ಟಿಸಿ ಜಮೀನು ಲೂಟಿ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಸದ್ಯ ಗ್ಯಾಂಗ್​ನ ಆರು ಮಂದಿಯನ್ನು ಬಂಧಿಸಲಾಗಿದೆ.

ಗದಗ: ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೊತ್ತದ ಜಮೀನು ಲೂಟಿಗೆ ಪ್ಲಾನ್! ಆರು ಮಂದಿ ಅರೆಸ್ಟ್
ಜಮೀನು ಲೂಟಿ ಮಾಡಲು ಮುಂದಾಗಿ ಬಂಧಿತರಾದ ಆರೋಪಿಗಳು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: Rakesh Nayak Manchi|

Updated on: Aug 06, 2023 | 4:19 PM

Share

ಗದಗ, ಆಗಸ್ಟ್ 6: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಠಿ ಮಾಡಿ ಕೋಟಿ ಕೋಟಿ ಆಸ್ತಿ ಲಪಟಾಯಿಸುವ ಗ್ಯಾಂಗ್ ತಲೆಎತ್ತಿದೆ. ಈಗಾಗಲೇ ಎರಡರಿಂದ ಮೂರು ಆಸ್ತಿ ನುಂಗಿದ ಗ್ಯಾಂಗ್ ಈಗ 40 ಕೋಟಿಗೂ ಅಧಿಕ ಮೊತ್ತದ ಜಮೀನು ಲೂಟಿ ಮಾಡಿಲು ಹೋಗಿ ತಗಲಾಕಿಕೊಂಡಿದೆ. ಈ ಗ್ಯಾಂಗ್​ನ ಕೃತ್ಯಕ್ಕೆ ಇಡೀ ಗದಗ (Gadag) ಜಿಲ್ಲೆಯ ಜನರೇ ದಂಗಾಗಿ ಹೋಗಿದ್ದಾರೆ.

ಗದಗ ನಗರದ ಜಿಲ್ಲಾಡಳಿತ ಭವನದ ಹಿಂದೆ ಕೇಶವದಾಸ್ ಸಹುಕಾರ್ ಫ್ಯಾಮಿಲಿಗೆ ಸೇರಿದ ಸರ್ವೇ ನಂಬರ್ 298, 20 ಎಕರೆ 34ಗುಂಟೆ ಜಮೀನು ಇದೆ. ಗದಗ ನಗರಕ್ಕೆ ಹೊಂದಿಕೊಂಡು ಇರುವುದರಿಂದ ರೀಯಲ್ ಎಸ್ಟೇಟ್ ವ್ಯವಹಾರ ಮಾಡಲು ಈ ಜಮೀನು ಹಾಗೇ ಇಟ್ಟಿದ್ದಾರೆ. ಇಲ್ಲಿ ಫ್ಲಾಟ್​ಗಳನ್ನು ನಿರ್ಮಿಸಿ ಮಾರಾಟ ಮಾಡಿದರೆ ಸುಮಾರು 100 ಕೋಟಿಗೂ ಅಧಿಕ ಮೌಲ್ಯ ಆಗುತ್ತಂತೆ.

ಇಂಥ ದೊಡ್ಡ ಆಸ್ತಿ ಲೂಟಿಗೆ ಪ್ಲಾನ್ ಮಾಡಿದ್ದ ಖತರ್ನಾಕ ಗ್ಯಾಂಗ್​ನ ಆರು ಸದಸದ್ಯರನ್ನು ಗದಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾತಲಗೇರಿ ಗ್ರಾಮದ ರಂಗನಗೌಡ ಪಾಟೀಲ್, ಲಕ್ಷ್ಮೀಬಾಯಿ ರಂಗನಗೌಡ ಪಾಟೀಲ್, ಗಂಗಮ್ಮ ಕರಿಯಣ್ಣವರ, ಸವಿತಾ ಮೇಲ್ಮನಿ, ಕದಡಿ ಗ್ರಾಮದ ಈಶ್ವರ ಪೂಜಾರ, ಗದಗನ ಬೆಟಗೇರಿಯ ಸುಲೇಮಾನ ಮಾಳೆಕೊಪ್ಪ ಬಂಧಿತ ಆರೋಪಿಗಳಾಗಿದ್ದಾರೆ. ಆದರೆ, ಕಿಂಗ್ ಪಿನ್ ಎನ್ನಲಾದ ಕೃಷ್ಣಗೌಡ ಪಾಟೀಲ್ ಹಾಗೂ ಬಸವರಾಜ್ ಮೇಲ್ಮನಿ ಈ ಇಬ್ಬರು ನಾಪತ್ತೆಯಾಗಿದ್ದಾರೆ ಎಂದರು ಎಸ್​ಪಿ ಬಿ.ಎಸ್.ನೇಮಗೌಡ ಹೇಳಿದ್ದಾರೆ.

ಇದನ್ನೂ ಓದಿ: ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?

ಶ್ರೀಮಂತರ ಆಸ್ತಿಗಳನ್ನೇ ಟಾರ್ಗೆಟ್ ಮಾಡುವ ಈ ಗ್ಯಾಂಗ್ ಈಗಾಗಲೇ ಕೋಟ್ಯಾಂತರ ಮೊತ್ತದ ಎರಡು ಆಸ್ತಿಗಳನ್ನು ಈಗಾಗಲೇ ನಕಲಿ ದಾಖಲೆ ಸೃಷ್ಠಿಸಿ ಲೂಟಿ ಮಾಡಿದೆ. ಈಗ ಮೂರನೇ ಜಮೀನನ್ನು ಲೂಟಿ ಮಾಡಲು ಹೋಗಿ ಸಬ್ ರಜಿಸ್ಟ್ರಾರ್ ಕಚೇರಿಯಲ್ಲಿ ಸಿಕ್ಕಾಕಿಕೊಂಡಿದೆ. ಗದಗನ ಕೇಶವ ದಾಸ್ ಸಾಹುಕಾರ್ ಫ್ಯಾಮಿಲಿ ಸದಸ್ಯರ ಆಸ್ತಿ ನಾವೇ ಒರಿಜಿನಲ್ ಮಾಲೀಕರು ಅಂತ ತೋರಿಸಲು ನಕಲಿ ಆಧಾರ್ ಕಾರ್ಡ್​​ ಸೃಷ್ಟಿಸಿದ್ದಾರೆ. ಇದರಲ್ಲಿ ಹೆಸರು ಮೂಲ ಮಾಲೀಕರದ್ದೇ ಆಗಿದ್ದು, ಫೋಟೋ ಮಾತ್ರ ಆರೋಪಿಗಳದ್ದಾಗಿದೆ.

ಕಾಗದ ಪತ್ರ ಇತ್ಯಾದಿಗಳನ್ನು ಸಿದ್ಧಪಡಿಸಿದ ಆರೋಪಿಗಳು ಇನ್ನೇನೂ ಸಬ್ ರಜಿಸ್ಟ್ರಾರ್ ಕಚೇರಿಯಲ್ಲಿ ಕಂಪ್ಯೂಟರ್​ನಲ್ಲಿ ಮಾಲೀಕರ ಫೋಟು ತೆಗೆಯುವಾಗ ಗದಗ ರಜಿಸ್ಟ್ರಾರ್ ಪಂಚಾಕ್ಷರಿ ಅವರಿಗೆ ಅನುಮಾನ ಬಂದಿದೆ. ಆಗ ಕೆಲವರನ್ನು ಕರೆದು ವಿಚಾರಿಸಿದ್ದಾರೆ. ಆಗ ಇವರು ಮೂಲ ಮಾಲೀಕರು ಅಲ್ಲ ಅಂತ ಗೋತ್ತಾಗಿದೆ. ಆಗ ಜಾಣತನ ತೋರಿದ ಅಧಿಕಾರಿ ಪಂಚಾಕ್ಷರಿ ತಕ್ಷಣ ಮೂಲ ಮಾಲೀಕರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅದರಂತೆ, ಜಮೀನಿನ ಮೂಲ ಮಾಲಕರು ಹಾಗೂ ಪೊಲೀಸರು ಕಚೇರಿಗೆ ಆಗಮಿಸಿ ನಕಲಿ ಗ್ಯಾಂಗ್​ನ ಆರು ಜನರನ್ನು ಬಂಧಿಸಿದ್ದಾರೆ. ಸಬ್ ರಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಸಮಯ ಪ್ರಜ್ನೆ, ಪ್ರಾಮಾಣಿಕತೆಗೆ ಕೋಟ್ಯಾಂತರ ಮೌಲ್ಯದ ಆಸ್ತಿ ಮೂಲ ಮಾಲೀಕರ ಬಳಿಯೇ ಉಳಿಯುವಂತಾಗಿದೆ. ಸಬ್ ರೆಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಕಾರ್ಯಕ್ಕೆ ಗದಗ ಜಿಲ್ಲೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಈ ಖತರ್ನಾಕ್ ಜಾಲದ ಕೃತ್ಯಕ್ಕೆ ಇಡೀ ಗದಗ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಈಗಾಗಲೇ ಆರು ಜನರನ್ನು ಅರೆಸ್ಟ್ ಮಾಡಿದ ಗದಗ ಶಹರ ಠಾಣಾ ಪೊಲೀಸರು, ಪ್ರಮುಖ ಆರೋಪಿ ಕಿಂಗ್ ಪಿನ್ ಕೃಷ್ಣಗೌಡ ಪಾಟೀಲ್, ಬಸವರಾಜ್ ಮೇಲ್ಮನಿ ಬಂಧನಕ್ಕೆ ಜಾಲ ಬೀಸಿದ್ದಾರೆ. ಇನ್ನೂ ಈ ನಕಲಿ ಗ್ಯಾಂಗ್​ನಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?