AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೊತ್ತದ ಜಮೀನು ಲೂಟಿಗೆ ಪ್ಲಾನ್! ಆರು ಮಂದಿ ಅರೆಸ್ಟ್

ಕೋಟ್ಯಾಧಿಪತಿಗಳೇ ಹುಷಾರ್. ನಿಮ್ಮ ಕೋಟಿ ಕೋಟಿ ಮೊತ್ತದ ಆಸ್ತಿ ನಿಮ್ಮ ಹೆಸರಿನಲ್ಲೇ ಇವೆಯೋ ಅಂತ ಒಮ್ಮೆ ಚೆಕ್ ಮಾಡಿಕೊಳ್ಳಿ. ಏಕೆಂದರೆ, ನಕಲಿ ದಾಖಲೆ ಸೃಷ್ಟಿಸಿ ಜಮೀನು ಲೂಟಿ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಸದ್ಯ ಗ್ಯಾಂಗ್​ನ ಆರು ಮಂದಿಯನ್ನು ಬಂಧಿಸಲಾಗಿದೆ.

ಗದಗ: ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೊತ್ತದ ಜಮೀನು ಲೂಟಿಗೆ ಪ್ಲಾನ್! ಆರು ಮಂದಿ ಅರೆಸ್ಟ್
ಜಮೀನು ಲೂಟಿ ಮಾಡಲು ಮುಂದಾಗಿ ಬಂಧಿತರಾದ ಆರೋಪಿಗಳು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Rakesh Nayak Manchi|

Updated on: Aug 06, 2023 | 4:19 PM

Share

ಗದಗ, ಆಗಸ್ಟ್ 6: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಠಿ ಮಾಡಿ ಕೋಟಿ ಕೋಟಿ ಆಸ್ತಿ ಲಪಟಾಯಿಸುವ ಗ್ಯಾಂಗ್ ತಲೆಎತ್ತಿದೆ. ಈಗಾಗಲೇ ಎರಡರಿಂದ ಮೂರು ಆಸ್ತಿ ನುಂಗಿದ ಗ್ಯಾಂಗ್ ಈಗ 40 ಕೋಟಿಗೂ ಅಧಿಕ ಮೊತ್ತದ ಜಮೀನು ಲೂಟಿ ಮಾಡಿಲು ಹೋಗಿ ತಗಲಾಕಿಕೊಂಡಿದೆ. ಈ ಗ್ಯಾಂಗ್​ನ ಕೃತ್ಯಕ್ಕೆ ಇಡೀ ಗದಗ (Gadag) ಜಿಲ್ಲೆಯ ಜನರೇ ದಂಗಾಗಿ ಹೋಗಿದ್ದಾರೆ.

ಗದಗ ನಗರದ ಜಿಲ್ಲಾಡಳಿತ ಭವನದ ಹಿಂದೆ ಕೇಶವದಾಸ್ ಸಹುಕಾರ್ ಫ್ಯಾಮಿಲಿಗೆ ಸೇರಿದ ಸರ್ವೇ ನಂಬರ್ 298, 20 ಎಕರೆ 34ಗುಂಟೆ ಜಮೀನು ಇದೆ. ಗದಗ ನಗರಕ್ಕೆ ಹೊಂದಿಕೊಂಡು ಇರುವುದರಿಂದ ರೀಯಲ್ ಎಸ್ಟೇಟ್ ವ್ಯವಹಾರ ಮಾಡಲು ಈ ಜಮೀನು ಹಾಗೇ ಇಟ್ಟಿದ್ದಾರೆ. ಇಲ್ಲಿ ಫ್ಲಾಟ್​ಗಳನ್ನು ನಿರ್ಮಿಸಿ ಮಾರಾಟ ಮಾಡಿದರೆ ಸುಮಾರು 100 ಕೋಟಿಗೂ ಅಧಿಕ ಮೌಲ್ಯ ಆಗುತ್ತಂತೆ.

ಇಂಥ ದೊಡ್ಡ ಆಸ್ತಿ ಲೂಟಿಗೆ ಪ್ಲಾನ್ ಮಾಡಿದ್ದ ಖತರ್ನಾಕ ಗ್ಯಾಂಗ್​ನ ಆರು ಸದಸದ್ಯರನ್ನು ಗದಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾತಲಗೇರಿ ಗ್ರಾಮದ ರಂಗನಗೌಡ ಪಾಟೀಲ್, ಲಕ್ಷ್ಮೀಬಾಯಿ ರಂಗನಗೌಡ ಪಾಟೀಲ್, ಗಂಗಮ್ಮ ಕರಿಯಣ್ಣವರ, ಸವಿತಾ ಮೇಲ್ಮನಿ, ಕದಡಿ ಗ್ರಾಮದ ಈಶ್ವರ ಪೂಜಾರ, ಗದಗನ ಬೆಟಗೇರಿಯ ಸುಲೇಮಾನ ಮಾಳೆಕೊಪ್ಪ ಬಂಧಿತ ಆರೋಪಿಗಳಾಗಿದ್ದಾರೆ. ಆದರೆ, ಕಿಂಗ್ ಪಿನ್ ಎನ್ನಲಾದ ಕೃಷ್ಣಗೌಡ ಪಾಟೀಲ್ ಹಾಗೂ ಬಸವರಾಜ್ ಮೇಲ್ಮನಿ ಈ ಇಬ್ಬರು ನಾಪತ್ತೆಯಾಗಿದ್ದಾರೆ ಎಂದರು ಎಸ್​ಪಿ ಬಿ.ಎಸ್.ನೇಮಗೌಡ ಹೇಳಿದ್ದಾರೆ.

ಇದನ್ನೂ ಓದಿ: ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?

ಶ್ರೀಮಂತರ ಆಸ್ತಿಗಳನ್ನೇ ಟಾರ್ಗೆಟ್ ಮಾಡುವ ಈ ಗ್ಯಾಂಗ್ ಈಗಾಗಲೇ ಕೋಟ್ಯಾಂತರ ಮೊತ್ತದ ಎರಡು ಆಸ್ತಿಗಳನ್ನು ಈಗಾಗಲೇ ನಕಲಿ ದಾಖಲೆ ಸೃಷ್ಠಿಸಿ ಲೂಟಿ ಮಾಡಿದೆ. ಈಗ ಮೂರನೇ ಜಮೀನನ್ನು ಲೂಟಿ ಮಾಡಲು ಹೋಗಿ ಸಬ್ ರಜಿಸ್ಟ್ರಾರ್ ಕಚೇರಿಯಲ್ಲಿ ಸಿಕ್ಕಾಕಿಕೊಂಡಿದೆ. ಗದಗನ ಕೇಶವ ದಾಸ್ ಸಾಹುಕಾರ್ ಫ್ಯಾಮಿಲಿ ಸದಸ್ಯರ ಆಸ್ತಿ ನಾವೇ ಒರಿಜಿನಲ್ ಮಾಲೀಕರು ಅಂತ ತೋರಿಸಲು ನಕಲಿ ಆಧಾರ್ ಕಾರ್ಡ್​​ ಸೃಷ್ಟಿಸಿದ್ದಾರೆ. ಇದರಲ್ಲಿ ಹೆಸರು ಮೂಲ ಮಾಲೀಕರದ್ದೇ ಆಗಿದ್ದು, ಫೋಟೋ ಮಾತ್ರ ಆರೋಪಿಗಳದ್ದಾಗಿದೆ.

ಕಾಗದ ಪತ್ರ ಇತ್ಯಾದಿಗಳನ್ನು ಸಿದ್ಧಪಡಿಸಿದ ಆರೋಪಿಗಳು ಇನ್ನೇನೂ ಸಬ್ ರಜಿಸ್ಟ್ರಾರ್ ಕಚೇರಿಯಲ್ಲಿ ಕಂಪ್ಯೂಟರ್​ನಲ್ಲಿ ಮಾಲೀಕರ ಫೋಟು ತೆಗೆಯುವಾಗ ಗದಗ ರಜಿಸ್ಟ್ರಾರ್ ಪಂಚಾಕ್ಷರಿ ಅವರಿಗೆ ಅನುಮಾನ ಬಂದಿದೆ. ಆಗ ಕೆಲವರನ್ನು ಕರೆದು ವಿಚಾರಿಸಿದ್ದಾರೆ. ಆಗ ಇವರು ಮೂಲ ಮಾಲೀಕರು ಅಲ್ಲ ಅಂತ ಗೋತ್ತಾಗಿದೆ. ಆಗ ಜಾಣತನ ತೋರಿದ ಅಧಿಕಾರಿ ಪಂಚಾಕ್ಷರಿ ತಕ್ಷಣ ಮೂಲ ಮಾಲೀಕರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅದರಂತೆ, ಜಮೀನಿನ ಮೂಲ ಮಾಲಕರು ಹಾಗೂ ಪೊಲೀಸರು ಕಚೇರಿಗೆ ಆಗಮಿಸಿ ನಕಲಿ ಗ್ಯಾಂಗ್​ನ ಆರು ಜನರನ್ನು ಬಂಧಿಸಿದ್ದಾರೆ. ಸಬ್ ರಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಸಮಯ ಪ್ರಜ್ನೆ, ಪ್ರಾಮಾಣಿಕತೆಗೆ ಕೋಟ್ಯಾಂತರ ಮೌಲ್ಯದ ಆಸ್ತಿ ಮೂಲ ಮಾಲೀಕರ ಬಳಿಯೇ ಉಳಿಯುವಂತಾಗಿದೆ. ಸಬ್ ರೆಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಕಾರ್ಯಕ್ಕೆ ಗದಗ ಜಿಲ್ಲೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಈ ಖತರ್ನಾಕ್ ಜಾಲದ ಕೃತ್ಯಕ್ಕೆ ಇಡೀ ಗದಗ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಈಗಾಗಲೇ ಆರು ಜನರನ್ನು ಅರೆಸ್ಟ್ ಮಾಡಿದ ಗದಗ ಶಹರ ಠಾಣಾ ಪೊಲೀಸರು, ಪ್ರಮುಖ ಆರೋಪಿ ಕಿಂಗ್ ಪಿನ್ ಕೃಷ್ಣಗೌಡ ಪಾಟೀಲ್, ಬಸವರಾಜ್ ಮೇಲ್ಮನಿ ಬಂಧನಕ್ಕೆ ಜಾಲ ಬೀಸಿದ್ದಾರೆ. ಇನ್ನೂ ಈ ನಕಲಿ ಗ್ಯಾಂಗ್​ನಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಅನಿಲ್ ಚೌಹಾಣ್
ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಅನಿಲ್ ಚೌಹಾಣ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು