AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ವಿಷಕಾರಿ ಹಾವು ಕಚ್ಚಿ ಆಸ್ಪತ್ರೆಯಲ್ಲಿ ಹೋರಾಟ; ಸಾವನ್ನಪ್ಪಿದ ಎನ್ನುವಾಗಲೇ ಬದುಕಿಸಿದ ಗರುಡರೇಖೆ!

ಅಂತೂ ಸಿದ್ದಪ್ಪ ನಂಬಿದ ಕೈ ಮೇಲಿನ ಗರುಡರೇಖೆ ಸಿದ್ದಪ್ಪನನ್ನು ಬದುಕಿಸಿದ್ದು ಒಂದು ಪವಾಡವೇ ಸರಿ ಎಂದು ಗ್ರಾಮಸ್ಥರು ನಂಬಿದ್ದಾರೆ.

ಗದಗ: ವಿಷಕಾರಿ ಹಾವು ಕಚ್ಚಿ ಆಸ್ಪತ್ರೆಯಲ್ಲಿ ಹೋರಾಟ; ಸಾವನ್ನಪ್ಪಿದ ಎನ್ನುವಾಗಲೇ ಬದುಕಿಸಿದ ಗರುಡರೇಖೆ!
ಗದಗ: ವಿಷಕಾರಿ ಹಾವು ಕಚ್ಚಿ ಆಸ್ಪತ್ರೆಯಲ್ಲಿ ಹೋರಾಟ
ಸಂಜಯ್ಯಾ ಚಿಕ್ಕಮಠ
| Edited By: |

Updated on:Jul 01, 2023 | 2:51 PM

Share

ಗದಗ: ವಿಷಕಾರಿ ಹಾವೊಂದನ್ನು ಹಿಡಿದು ಅದರ ಜೊತೆಗೆ ಹುಚ್ಚಾಟ ಆಡಿದ ವ್ಯಕ್ತಿಯನ್ನು ರೋಷಗೊಂಡ ಆ ವಿಷಕಾರಿ ಹಾವು ಆ ವ್ಯಕ್ತಿಗೆ ನಾಲ್ಕು ಬಾರಿ ಕಚ್ಚಿದರೂ ಪವಾಡ ಸದೃಶ ರೀತಿಯಲ್ಲಿ ಬದುಕುಳಿದ ಅಪರೂಪದ ಘಟನೆ ಜರುಗಿದೆ. ಗದಗ (gadag) ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ಸಿದ್ದಪ್ಪ ಎಂಬ ವ್ಯಕ್ತಿಯೇ ಹಾವು ಕಚ್ಚಿದರೂ (Snake bite) ಬದುಕುಳಿದಿರುವ ವ್ಯಕ್ತಿ.

ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವಿಗೀಡಾದ ಸಂದರ್ಭದಲ್ಲಿ ಏರಿಯಾದಲ್ಲಿ ಈ ಹಾವು ಕಾಣಿಸಿಕೊಂಡಿದೆ. ತಕ್ಷಣವೇ ಸಿದ್ದಪ್ಪ ಬರಿಗೈಯಲ್ಲಿಯೇ ಹಾವು ಹಿಡಿದಿದ್ದಾನೆ. ಗ್ರಾಮಸ್ಥರು ಎಷ್ಟೇ ಹೇಳಿದರೂ ಕೇಳದ ಸಿದ್ದಪ್ಪ, ನನ್ನ ಕೈಮೇಲೆ ಗರುಡರೇಖೆ ಇದೆ,‌ ನನಗೇನೂ ಆಗಲ್ಲ ಎಂದು ಅದರೊಂದಿಗೆ ಆಟ ಆಡಿದ್ದಾನೆ.

ಇದರಿಂದಾಗಿ ಆಕ್ರೋಶಗೊಂಡ ಹಾವು ನಾಲ್ಕು ಬಾರಿ ಕಚ್ಚಿದೆ. ಇದರಿಂದ ಗಾಬರಿಗೊಂಡ ಸ್ಥಳೀಯರು ತಕ್ಷಣವೇ ನರಗುಂದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಷ್ಟರಲ್ಲಿಯೇ ಹಿರೇಕೊಪ್ಪ ಗ್ರಾಮದಲ್ಲಿ ಹಾವು ಕಚ್ಚಿದ ಸಿದ್ದಪ್ಪ ಮೃತಪಟ್ಟಿದ್ದಾನೆ ಎಂದು ವದಂತಿ ಹಬ್ಬಿದೆ. ಅಷ್ಟರೊಳಗೆ ಆಸ್ಪತ್ರೆಯ ಬೆಡ್ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಪ್ಪ ಎದ್ದು ಕುಳಿತಿದ್ದಾನೆ ಎನ್ನಲಾಗಿದೆ. ಸದ್ಯಕ್ಕೆ ಸಿದ್ದಪ್ಪ ಸಾವಿನ ದವಡೆಯಿಂದ ಪಾರಾದ ಸುದ್ದಿ ಗ್ರಾಮದಲ್ಲಿ ಹಬ್ಬಿದ ನಂತರ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಅಂತೂ ಸಿದ್ದಪ್ಪ ನಂಬಿದ ಕೈ ಮೇಲಿನ ಗರುಡರೇಖೆ ಸಿದ್ದಪ್ಪನನ್ನು ಬದುಕಿಸಿದ್ದು ಒಂದು ಪವಾಡವೇ ಸರಿ ಎಂದು ಗ್ರಾಮಸ್ಥರು ನಂಬಿದ್ದಾರೆ.

ಗದಗ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Sat, 1 July 23

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು