AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyena: ಗದಗಿನ ಗಜೇಂದ್ರಗಡದಲ್ಲಿ ಹೈನಾ ಶವ ಪತ್ತೆ; ರೇಬಿಸ್​ ರೋಗ ಅಂಟಿರುವ ಶಂಕೆ

ರೇಬಿಸ್ ಅಥವಾ ಇತರ ಶಿಲೀಂಧ್ರಗಳ ಸೋಂಕಿನಿಂದ ಬಳಲುತ್ತಿರುವ ಪ್ರಾಣಿಗಳನ್ನು ತಿಂದಾಗ ಹೈನಾಗೆ ರೇಬೀಸ್ ವೈರಸ್ ಹರಡುವ ಸಾಧ್ಯತೆ ಇದೆ ಎಂದು ಜೀವವೈವಿಧ್ಯ ತಜ್ಞ ಮಂಜುನಾಥ ನಾಯಕ್ ಹೇಳಿದರು.

Hyena: ಗದಗಿನ ಗಜೇಂದ್ರಗಡದಲ್ಲಿ ಹೈನಾ ಶವ ಪತ್ತೆ; ರೇಬಿಸ್​ ರೋಗ ಅಂಟಿರುವ ಶಂಕೆ
ಕತ್ತೆಕಿರುಬ (ಹೈನಾ)
ವಿವೇಕ ಬಿರಾದಾರ
|

Updated on:Oct 19, 2023 | 12:52 PM

Share

ಗದಗ ಅ.19: ಮಂಗಳವಾರ ಗಜೇಂದ್ರಗಡದ (Gajendragad) ಅರಣ್ಯದ ಬಳಿ ಅಳಿವಿನಂಚಿನಲ್ಲಿರುವ ಕತ್ತೆ ಕಿರುಬ (ಹೈನಾ) ಶವ ಪತ್ತೆಯಾಗಿದೆ. ಕತ್ತೆ ಕಿರುಬ (Hyena) ರೋಗಕ್ಕೆ ತುಕ್ಕಾಗಿ ಮೃತಪಟ್ಟಿದೆ ಎಂಬುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಇದು ಪ್ರಾಣಿ ಪ್ರೀಯರಲ್ಲಿ ಸಂಶಯ ಮೂಡಿಸಿದೆ. ಏಕೆಂದರೆ ಈ ಪ್ರಾಣಿಯಲ್ಲಿ ರೋಗನಿರೋಧಕ ಶಕ್ತಿ ಅಧಿಕವಾಗಿರುತ್ತದೆ.

ಗ್ರಾಮಸ್ಥರು ಅರಣ್ಯ ಪ್ರದೇಶದಿಂದ ದೂರವಿರಬೇಕು. ಮತ್ತು ಪ್ರಾಣಿಗಳನ್ನು ಕೊಲ್ಲಲು ಗುಡ್ಡಗಳಿಗೆ ಅಥವಾ ಅರಣ್ಯ ವಲಯಗಳಿಗೆ ಪ್ರವೇಶಿಸುವವರ ಮೇಲೆ ನಿಗಾ ಇಡುವಂತೆ ಸಿಬ್ಬಂದಿಗಳಿಗೆ ಅರಣ್ಯಾಧಿಕಾರಿಗಳು ಸೂಚಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ಬೇಟೆಯಾಡುವವರ ಸಂಖ್ಯೆ ಕಡಿಮೆಯಾಗಿದೆ.

ಕತ್ತೆ ಕಿರುಬ ಸಾವನ್ನಪ್ಪಿರುವ ಬಗ್ಗೆ ಜೀವವೈವಿಧ್ಯ ತಜ್ಞ ಮಂಜುನಾಥ ನಾಯಕ್ ಮಾತನಾಡಿ, ರೇಬಿಸ್ ಅಥವಾ ಇತರ ಶಿಲೀಂಧ್ರಗಳ ಸೋಂಕಿನಿಂದ ಬಳಲುತ್ತಿರುವ ಪ್ರಾಣಿಗಳನ್ನು ತಿಂದಾಗ ಕತ್ತೆಕಿರುಬಗಳಿಗೆ ರೇಬೀಸ್ ವೈರಸ್ ಹರಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ರೇಬಿಸ್​ ರೋಗ ಬೀದಿ ನಾಯಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ನಾಯಿ, ನರಿ, ತೋಳ ಮತ್ತು ಬೆಕ್ಕು ಹಾಗೆಯೇ ಕೆಲವು ಸಸ್ತನಿಗಳು ಸೇರಿದಂತೆ ದೇಶೀಯ ಮತ್ತು ಕಾಡು ಜಾತಿಯ ಸಸ್ತನಿಗಳಿಗೆ ರೇಬಿಸ್​​ ರೋಗ ಅಂಟುತ್ತದೆ.

ಇದನ್ನೂ ಓದಿ: ಮಾನವ-ಕಾಡು ಪ್ರಾಣಿ ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಅರಣ್ಯಾಧಿಕಾರಿಗಳು: ರೈಲ್ವೆ ಬ್ಯಾರಿಕೇಡ್​​​ ಪ್ರಾಜೆಕ್ಟ್ ಸಕ್ಸಸ್! 

ಗದಗಗಿನ ಪಶುವೈದ್ಯಕೀಯ ಮಹಾವಿದ್ಯಾಲಯದ ಸಿಬ್ಬಂದಿ ನಿಖಿಲ್ ಕುಲಕರ್ಣಿ ಮಾತನಾಡಿ, ಶವಪರೀಕ್ಷೆಯ ನಂತರ ಕತ್ತೆಕಿರುಬ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಶವಪರೀಕ್ಷೆ ವರದಿಯ ವಿವರಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಹಂಚಿಕೊಳ್ಳುತ್ತಾರೆ.

ಏತನ್ಮಧ್ಯೆ, ಗದಗ ಡಿಸಿಎಫ್ ದೀಪಿಕಾ ಬಾಜಪೈ ಅವರು, ಕತ್ತೆಕಿರುಬ ಸಾವು ಸಾಮಾನ್ಯ ಸಾವಿನಂತೆ ಕಂಡುಬರುತ್ತಿದ್ದು ಭಯಪಡುವ ಅಗತ್ಯವಿಲ್ಲ. ರೇಬೀಸ್ ವೈರಸ್ ಇರುವಿಕೆಯು ಅಸಂಭವವಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:14 am, Thu, 19 October 23

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ