AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಮಳೆ ಬಂದರೆ ಹಳ್ಳದ ದಡದ ಮೇಲೆ ವಿದ್ಯಾರ್ಥಿಗಳು ಕಾಯಬೇಕು! ಬಸ್ ಸೌಲಭ್ಯ ಕಲ್ಪಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ಸರ್ಕಾರ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದೆ. ಆದರೆ ಬಸ್ ಸೌಲಭ್ಯವಿಲ್ಲದೆ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮದ ಮಕ್ಕಳ ಶಿಕ್ಷಣ ಈಗ ಅಯೋಮಯವಾಗಿದೆ.

ಗದಗ: ಮಳೆ ಬಂದರೆ ಹಳ್ಳದ ದಡದ ಮೇಲೆ ವಿದ್ಯಾರ್ಥಿಗಳು ಕಾಯಬೇಕು! ಬಸ್ ಸೌಲಭ್ಯ ಕಲ್ಪಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು
ಹಳ್ಳದಲ್ಲಿ ನಡೆದು ಬರುತ್ತಿರುವ ವಿದ್ಯಾರ್ಥಿಗಳು
TV9 Web
| Edited By: |

Updated on: Sep 12, 2021 | 5:41 PM

Share

ಗದಗ: ಜೀವದ ಹಂಗು ತೊರೆದು ಶಾಲೆ, ಕಾಲೇಜಿಗೆ ಹೋಗುವ ಪರಿಸ್ಥಿತಿ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ವಿದ್ಯಾರ್ಥಿಗಳಿಗೆ ಇದೆ. ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ತುಂಬಿ ಹರಿಯುವ ಹಳ್ಳವನ್ನು ದಾಟುವಾಗ ಸ್ವಲ್ಪ ಜಾಗ್ರತೆ ತಪ್ಪಿದ್ದರೂ ಮಕ್ಕಳ ಜೀವಕ್ಕೆ ಅಪಾಯವಿದೆ. ಗ್ರಾಮಕ್ಕೊಂದು ಬಸ್ ಸೌಲಭ್ಯ ಮಾಡಿಕೊಡಿ ಅಂತ ಕ್ಷೇತ್ರ ಶಾಸಕರು, ಡಿಸಿ, ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಪರಿ ಪರಿಯಾಗಿ ಬೇಡಿಕೊಂಡರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಂತ ಗ್ರಾಮಸ್ಥರು, ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಸರ್ಕಾರ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದೆ. ಆದರೆ ಬಸ್ ಸೌಲಭ್ಯವಿಲ್ಲದೆ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮದ ಮಕ್ಕಳ ಶಿಕ್ಷಣ ಈಗ ಅಯೋಮಯವಾಗಿದೆ. ಕೊಕ್ಕರಗುಂದಿ ವಿದ್ಯಾರ್ಥಿಗಳ ಗೋಳು ಕೇಳುವವರೆ ಇಲ್ಲದಂತಾಗಿದೆ. ಬಸ್ ಸೌಕರ್ಯ ಇಲ್ಲದೆ ವಿದ್ಯಾರ್ಥಿಗಳು ಎರಡು ಹರಿಯುವ ಹಳ್ಳ ದಾಟಿಕೊಂಡು ಶಾಲೆಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ. ಕೊಕ್ಕರಗುಂದಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಮಾತ್ರವಿದೆ. ಪ್ರಾಥಮಿಕ ಶಿಕ್ಷಣ ಮುಗಿದ ಬಳಿಕ ಪ್ರೌಢ ಶಿಕ್ಷಣಕ್ಕೆ ಮತ್ತು ಕಾಲೇಜಿಗೆ ಬೆಳ್ಳಟ್ಟಿ ಗ್ರಾಮ ಹಾಗೂ ಶಿರಹಟ್ಟಿ ಪಟ್ಟಣಕ್ಕೆ ಹೋಗಬೇಕು. ಆದರೆ ಬಸ್ ಸೌಕರ್ಯ ಇಲ್ಲದೇ ವಿದ್ಯಾರ್ಥಿಳು ಪರದಾಡುತ್ತಿದ್ದಾರೆ.

ಮಳೆ, ಚಳಿಯಲ್ಲಿ ವಿದ್ಯಾರ್ಥಿಗಳು ಹೈರಾಣು ಕೊಕ್ಕರಗುಂದಿ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೈಸ್ಕೂಲ್, ಕಾಲೇಜಿಗೆ ಹೋಗುತ್ತಾರೆ. ಬಸ್ ಇಲ್ಲದ ಕಾರಣ ಏಳೆಂಟು ಕಿಲೋಮೀಟರ್ ಬೆಳ್ಳಟ್ಟಿಗೆ ನಡೆದುಕೊಂಡು ಹೋಗಬೇಕು. ಅಲ್ಲಿಂದ ಶಿರಹಟ್ಟಿ ಕಾಲೇಜು ವಿದ್ಯಾರ್ಥಿಗಳು ಬಸ್ ಮೂಲಕ ಹೋಗಬೇಕಾದ ಅನಿವಾರ್ಯತೆ ಇದೆ. ಶಾಲೆ, ಕಾಲೇಜಿಗೆ ಹೋದಾಗ ಮಳೆ ಬಂದರೆ ತುಂಬಿ ಹರಿಯವ ಹಳ್ಳಗಳು ಶಾಂತವಾಗುವವರೆಗೂ ಹಳ್ಳದ ದಡದಲ್ಲೇ ಮಕ್ಕಳು ಕಾಯಬೇಕು. ಇಷ್ಟು ಗಂಭೀರ ಸಮಸ್ಯೆ ಇದ್ದರೂ ಜಿಲ್ಲಾಡಳಿತ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಯತ್ನ ಮಾಡದಿರುವುದು ವಿಪರ್ಯಾಸವಾಗಿದೆ. ಹೀಗಾಗಿ ಕ್ಷೇತ್ರದ ಶಾಸಕರು, ಉಸ್ತುವಾರಿ ಸಚಿವರು, ಜಿಲ್ಲಾಡಳಿತದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಕೊಕ್ಕರಗುಂದಿ ಮಳೆಗಾಲದಲ್ಲಿ ನಡುಗಡ್ಡೆಯಾಗಿದೆ. ಮೂಲಭೂತ ಸೌಕರ್ಯ ಯಾವ ಜನಪ್ರತಿನಿಧಿಗಳು ಕೊಡ್ತಾಯಿಲ್ಲ. ಹೈಸ್ಕೂಲ್, ಕಾಲೇಜಿಗೆ ಹೋಗುವ ಮಕ್ಕಳು ಇದ್ದಾರೆ. ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸಾಕಷ್ಟು ತೊಂದರೆ ಆಗುತ್ತಿದೆ. ಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ, ಸಂಸದ ಶಿವಕುಮಾರ ಉದಾಸಿ, ಎಲ್ಲ ಅಧಿಕಾರಿಗಳಿಗೆ ಮನವಿ ಮಾಡಿದ್ರು ಕೇವಲ ಭರವಸೆ ನೀಡುತ್ತಿದ್ದಾರೆ. ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗಲು ಕಾರಣ ಅಂತ ಗ್ರಾಮಸ್ಥ ಚೆನ್ನಬಸವಗೌಡ ಪಾಟೀಲ್ ಆರೋಪಿಸಿದ್ದಾರೆ.

ನಮ್ಮೂರಿಗೆ ಬಸ್ ಸೌಕರ್ಯ ಇಲ್ಲ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿದರೆ ಆ ಕಡೆ ಇದ್ದವರು ಆ ಕಡೆ ಇರಬೇಕು. ಮಳೆ ಬಂದರೆ ಮನೆಯಲ್ಲಿ ಶಾಲೆಗೆ ಹೋಗಬೇಡ ಅಂತಾರೆ. ಹೊಲಕ್ಕೆ ಕರೆದುಕೊಂಡು ಹೋಗುತ್ತಾರೆ. ವಿದ್ಯಾರ್ಥಿಗಳ ಜೀವನ ಹಾಳಾಗುತ್ತದೆ. ವಿದ್ಯಾರ್ಥಿಗಳಿಗೆ ಹತ್ತಾರು ಕನಸು ಇರುತ್ತವೆ. ಓದುವ ವಿದ್ಯಾರ್ಥಿಗಳ ಜೀವನ ಹಾಳಾಗುತ್ತಿದೆ. ದಯವಿಟ್ಟು ಸರ್ಕಾರ ಬಸ್ ಸೌಕರ್ಯ ಮಾಡಿಕೊಡಬೇಕು ಅಂತ ವಿದ್ಯಾರ್ಥಿನಿ ಪೂಜಾ ಸರ್ಕಾರಕ್ಕೆ ಮನವಿ ಮಾಡಿದ್ದಾಳೆ.

ಬಸ್ ಸೌಕರ್ಯ ಕಲ್ಪಿಸಿದರೆ ಮಕ್ಕಳ ಬದುಕಿಗೆ ದಾರಿಯಾಗುತ್ತದೆ. ಇಲ್ಲವಾದರೆ ಶಿರಹಟ್ಟಿ ತಹಶೀಲ್ದಾರ್ ಕಚೇರಿ ಎದುರು ಹೋರಾಟ ಮಾಡುವುದಾಗಿ ಗ್ರಾಮಸ್ಥರು, ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ

ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು

ಕೂಡು ಒಕ್ಕಲಿಗ ಎಂಬುದು ಲಿಂಗಾಯತ ಸಮುದಾಯದ ಉಪಪಂಗಡ: ಎಂ.ಬಿ. ಪಾಟೀಲ್ ಸ್ಪಷ್ಟನೆ

(Students are struggling without a bus to go to college and school in gadag)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್