AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್ ಆದೇಶ ಉಲ್ಲಂಘಿಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ; ಆಡಳಿತ ಮಂಡಳಿ ವಿರುದ್ಧ ಎಬಿವಿಪಿ ಆಕ್ರೋಶ

ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಬಿವಿಪಿ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲಾ ಎಂದು ಆರೋಪ ಮಾಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಶಿವಾನಂದ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಕೋರ್ಟ್ ಆದೇಶ ಉಲ್ಲಂಘಿಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ; ಆಡಳಿತ ಮಂಡಳಿ ವಿರುದ್ಧ ಎಬಿವಿಪಿ ಆಕ್ರೋಶ
ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ
Follow us
TV9 Web
| Updated By: preethi shettigar

Updated on:Mar 16, 2022 | 3:23 PM

ಗದಗ: ಶಾಲಾ- ಕಾಲೇಜಿಗಳಲ್ಲಿ ಹಿಜಾಬ್(Hijab)​ ಧರಿಸುವಂತಿಲ್ಲ ಎಂಬ ಕೋರ್ಟ್ ಆದೇಶ ಉಲ್ಲಂಘಿಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಘಟನೆ ನಗರದ ಕೆಎಲ್‌ಇ ಸಂಸ್ಥೆಯ ಜೆ.ಟಿ.ಕಾಲೇಜಿನಲ್ಲಿ ನಡೆದಿದೆ. ಕಾಲೇಜು(College) ಕೊಠಡಿ, ಲ್ಯಾಬ್‌ನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಾಗಿದೆ. ನಿನ್ನೆ ಹೈಕೋರ್ಟ್​(High court) ಮಹತ್ವದ ತೀರ್ಪಿನ ನಂತರವು ಇಂದು ಹಿಜಾಬ್, ಬುರ್ಕಾ ಧರಿಸಿ ಕಾಲೇಜಿಗೆ ಹಲವರು ಬಂದಿದ್ದರು. ಹೀಗಾಗಿ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಬಿವಿಪಿ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲಾ ಎಂದು ಆರೋಪ ಮಾಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಶಿವಾನಂದ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಉಡುಪಿ: ಹೈಕೋರ್ಟ್​ ಆದೇಶದ ನಂತರವೂ ಹಿಜಾಬ್​ಗಾಗಿ ಬೇಡಿಕೆ

ಹೈಕೋರ್ಟ್ ಆದೇಶದ ಬಳಿಕವೂ ಹಿಜಾಬ್​ಗಾಗಿ ಬೇಡಿಕೆ ಮುಂದುವರಿದಿದೆ. ಉಡುಪಿ ಜಿಲ್ಲೆಯ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 11 ಮಂದಿ ವಿದ್ಯಾರ್ಥಿನಿಯರು ಬೇಡಿಕೆ ಇಟ್ಟಿದ್ದಾರೆ.  ಈ ವೇಳೆ ತರಗತಿ ಪ್ರವೇಶಿಸಲು ಅವಕಾಶವಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದ್ದು, ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿರಿಸಿ ತರಗತಿಗೆ ಹಾಜರಾಗಿದ್ದಾರೆ. ಆದರೆ ಇನ್ನೂಳಿದ ಒಂಬತ್ತು ಮಂದಿ ವಿದ್ಯಾರ್ಥಿನಿಯರು ಮನೆಗೆ ವಾಪಸ್ ಆಗಿದ್ದಾರೆ.

ಹಿಜಬ್ ನಮ್ಮ ಜೀವನದ ಅವಿಭಾಜ್ಯ ಅಂಗ. ಪರೀಕ್ಷೆಯು ಬೇಕು. ಹಿಜಾಬ್ ಕೂಡ ಬೇಕು. ಈ ಹಿಂದೆ ಇಲ್ಲದ ಸಮಸ್ಯೆ ಈಗ ತಲೆದೋರಿದೆ. ಇದರಿಂದ ನಮಗೆ ಬೇಸರವಾಗಿದೆ. ಪ್ರಾಂಶುಪಾಲರು ನಮಗೆ ನ್ಯಾಯ ದೊರಕಿಸಿಕೊಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಆದರೆ ಅದು ಆಗಲಿಲ್ಲ ಹೀಗಾಗಿ ತರಗತಿ ಬಹಿಷ್ಕರಿಸಿದ್ದೇವೆ ಎಂದು ಹಿಜಾಬ್​ ಧರಿಸಲು ಅವಕಾಶಕೋರಿದ ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Karnataka Bandh: ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ನಾಳೆ ಕರ್ನಾಟಕ ಬಂದ್‌

ಶಾಲೆ-ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶವಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ: ಹೈಕೋರ್ಟ್​

Published On - 3:13 pm, Wed, 16 March 22

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್