AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ರಾಜ್ಯದಲ್ಲಿ ಪವನ ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಮುದ್ರಣಕಾಶಿ ಫಸ್ಟ್! ಪ್ರತಿ ತಿಂಗಳಿಗೆ ಎಷ್ಟು ವಿದ್ಯುತ್​ ಉತ್ಪಾದನೆಯಾಗುತ್ತದೆ ಗೊತ್ತಾ?

ಅದು ಏಷ್ಯಾ ಖಂಡದಲ್ಲೇ ಅತೀ ಹೆಚ್ಚು ಗಾಳಿ ಬೀಸುವ ಪ್ರದೇಶ. ಹೀಗಾಗಿ ಆ ಜಿಲ್ಲೆಯಲ್ಲಿ ಎಲ್ಲಿ ನೋಡಿದ್ರೂ ಪವನ ವಿದ್ಯುತ್ ಯಂತ್ರಗಳು ತಲೆ ಎತ್ತಿವೆ. ಈ ಮೂಲಕ ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು ಮುದ್ರಣ ಕಾಶಿ ಗದಗ ಜಿಲ್ಲೆ ಇಡೀ ರಾಜ್ಯಕ್ಕೆ ಹೆಚ್ಚು ಪವನ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಮೈಲಿಗಲ್ಲು ಸಾಧಿಸಿದೆ.

ಇಡೀ ರಾಜ್ಯದಲ್ಲಿ ಪವನ ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಮುದ್ರಣಕಾಶಿ ಫಸ್ಟ್! ಪ್ರತಿ ತಿಂಗಳಿಗೆ ಎಷ್ಟು ವಿದ್ಯುತ್​ ಉತ್ಪಾದನೆಯಾಗುತ್ತದೆ ಗೊತ್ತಾ?
ಪವನ ವಿದ್ಯುತ್​​ ಶಕ್ತಿ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 11, 2023 | 3:58 PM

ಗದಗ: ಜಿಲ್ಲೆಯು ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯುತ್  ಉತ್ಪಾದನೆ(Power Generation) ಮಾಡುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದಲ್ಲಿ ಪವರ್ ಉತ್ಪಾದನೆಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ ಪಡೆದರೇ, ರಾಜ್ಯದಲ್ಲಿ ಗದಗ ಜಿಲ್ಲೆ ಮೊದಲಿದೆ. ಎಲ್ಲಿ ಕಣ್ಣು ಹಾಯಿಸಿದರೂ ಪವನ ಯಂತ್ರಗಳ ಕಲರವ. ಭರ್ ಭರ್ ಎಂದು ಸದ್ದು ಮಾಡಿ ಭರ್ಜರಿ ವಿದ್ಯುತ್ ಉತ್ಪಾದನೆ ಮಾಡುತ್ತಿರುವ ಯಂತ್ರಗಳು. ಹೌದು ಮುದ್ರಣ ಕಾಶಿ ಗದಗ ಜಿಲ್ಲೆ ಇಡೀ ಏಷ್ಯಾ ಖಂಡದಲ್ಲೇ ಅತೀ ಹೆಚ್ಚು ಗಾಳಿ ಬಿಸುವ ಪ್ರದೇಶ. ಈ ಗಾಳಿ ಇವಾಗ ಜಿಲ್ಲೆಗೆ ಭಾರಿ ವರದಾನವಾಗಿದೆ. ಗದಗ ಜಿಲ್ಲೆಯಲ್ಲಿ ಅತೀ ಹೆಚ್ಚು ಪವನ್ ಯಂತ್ರಗಳನ್ನು ಆಳವಡಿಸಲಾಗಿದೆ. ಹೀಗಾಗಿ ಇಡೀ ರಾಜ್ಯದಲ್ಲಿ ಅತೀ ಹೆಚ್ಚು ಪವನ್ ವಿದ್ಯುತ್ ಉತ್ಪಾದನೆಯನ್ನ ಮಾಡಲಾಗುತ್ತಿದೆ.

ಜಿಲ್ಲೆಯಾದ್ಯಂತ 687 ಕ್ಕೂ ಹೆಚ್ಚು ಪವನ ಯಂತ್ರಗಳ ಅಳವಡಿಕೆ; ತಿಂಗಳಿಗೆ 50 ರಿಂದ 60 ಮಿಲಿಯನ್​ ಯೂನಿಟ್​ ವಿದ್ಯುತ್ ​ಉತ್ಪಾದನೆ

ಗದಗ ಜಿಲ್ಲೆಯ ಕಪ್ಪತ್ತಗುಡ್ಡ ಹಾಗೂ ಗಜೇಂದ್ರಗಡ ಬೆಟ್ಟ, ಲಕ್ಕುಂಡಿ, ಹರ್ತಿ, ನರೇಗಲ್, ಸೇರಿದಂತೆ ಜಿಲ್ಲೆಯಾದ್ಯಂತ 687 ಕ್ಕೂ ಹೆಚ್ಚು ಪವನ ಯಂತ್ರಗಳನ್ನು ಅಳವಡಿಸಲಾಗಿದೆ. ಇನ್ನೂ ಅಳವಡಿಸುವ ಕಾರ್ಯವೂ ನಡೆದಿದೆ. ಹೀಗಾಗಿ ರಾಜ್ಯದಲ್ಲೇ ಅತೀ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುವ ಜಿಲ್ಲೆಯ ಹೆಗ್ಗಳಿಕೆಗೆ ಗದಗ ಜಿಲ್ಲೆ ಪಾತ್ರವಾಗಿದೆ. ಪ್ರತಿ ತಿಂಗಳು 50 ರಿಂದ‌ 60 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. 50 ರಿಂದ 60 ಮಿಲಿಯನ್ ಯೂನಿಟ್ ವಿದ್ಯುತ್ ರಾಜ್ಯಕ್ಕೆ ಸರಬರಾಜು ಮಾಡಲಾಗುತ್ತಿದೆ. ಭಾರತ ದೇಶದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ರೆ, ರಾಜ್ಯದಲ್ಲಿ ಗದಗ ಜಿಲ್ಲೆ ಅತೀ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುತ್ತಿದೆ.‌

ಇದನ್ನೂ ಓದಿ:Fire Accident: ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತ

ಇನ್ನು ಈ ಕುರಿತು ಗದಗ ಹೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನೀಯರ್ ರಾಜೇಶ್ ಕಲ್ಯಾಣಶೆಟ್ಟಿ ‘ ಜಿಲ್ಲೆಯಲ್ಲಿ ಇನ್ನೂ ಹೆಚ್ವಿನ ವಿದ್ಯುತ್ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಗದಗ ಜಿಲ್ಲೆ ಪವನ ಯಂತ್ರಗಳ ಅಳವಡಿಕೆಗೆ ಹೇಳಿ ಮಾಡಿಸಿದ ಪ್ರದೇಶವಾಗಿದೆ. ಉತ್ತಮವಾದ ಗಾಳಿ ಇರೋದರಿಂದ ಪವನ್ ಯಂತ್ರಗಳಿಂದ ವಿದ್ಯುತ್ ಉತ್ಪಾದನೆ ಮಾಡಲು ಸಹಕಾರಿಯಾಗಿದೆ ಎಂದರು.

ಗದಗ ಜಿಲ್ಲೆಯಲ್ಲಿ ಸರ್ಕಾರದ ಹಾಗೂ ಖಾಸಗಿ ಮಾಲಿಕತ್ವದ ನೂರಾರು ವಿಂಡ್ ಫ್ಯಾನ್ ‌ಗಳಿವೆ. ಸರ್ಕಾರಕ್ಕೆ ಹಾಗೂ ಖಾಸಗಿಯಾಗಿ ಕೂಡ ವಿದ್ಯುತ್ ಮಾರಾಟ ಮಾಡಲಾಗುತ್ತಿದೆ. ವಿಂಡ ಫ್ಯಾನ್ ನಿಂದ ವಿದ್ಯುತ್ ಉತ್ಪಾದನೆ ಮಾಡಲು ಸಾಕಷ್ಟು ಅನುಕೂಲತೆ ಇರೋದರಿಂದ ವಿಂಡ್ ಕಂಪನಿಗಳು ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಪವನ ವಿದ್ಯುಂತ್ ಯಂತ್ರಗಳು ಅಳವಡಿಸುತ್ತಿವೆ. ಈ ಮೂಲಕ ಭರ್ಜರಿ ವಿದ್ಯುತ್ ಉತ್ಪಾದನೆ ‌ಮಾಡುತ್ತಿವೆ. ಇದರಿಂದ ಕೆಲ ಸ್ಥಳೀಯ ರೈತರಿಗೆ ಅನುಕೂಲವಾದ್ರೆ, ಇನ್ನೂ ಕೆಲ ರೈತರಿಗೆ ಅನಾನಕೂಲವೂ ಆಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್