AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು. ಅವೆಲ್ಲ ಅವೈಜ್ಞಾನಿಕವಾದದ್ದು, ಅವರು ಶುದ್ಧವಾಗಿ ಕೈತೊಳೆಯಲ್ಲ ಎಂದು ನಗರದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ
ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 06, 2022 | 2:56 PM

Share

ಗದಗ: ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು (tirtha) ಕುಡಿಯಬಾರದು. ಅವೆಲ್ಲ ಅವೈಜ್ಞಾನಿಕವಾದದ್ದು (unscientific), ಅವರು ಶುದ್ಧವಾಗಿ ಕೈತೊಳೆಯಲ್ಲ ಎಂದು ನಗರದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ (Bt Lalitha Nayak) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮ್ಮ ಮನೆಯಲ್ಲಿ ನೀರು ಇಲ್ವಾ? ಕೃಷ್ಣಯ್ಯ ಶೆಟ್ಟಿ ಗಂಗಾಜಲ ತಂದು ಕೊಟ್ಟರು, ಅಲ್ಲಿ ಹೆಣ ತೇಲುತ್ತೆ. ಅಲ್ಲಿ ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಮಂಗಳ ಮುಖಿಯರು ದೇವರು ಅಂತೆ? ಅದು ತಪ್ಪು. ಯಾರಾದರೂ ಒಂಟಿಯಾಗಿ ಸಿಕ್ಕರೆ ಎತ್ತಿಹಾಕಿಕೊಂಡು ಹೋಗಿ ಕೊಂದು ಬಿಡುತ್ತಾರೆ. ಅಷ್ಟೊಂದು ಹಿಂಸೆಯನ್ನು ನೀಡುತ್ತಾರೆ. ಸಾಕಷ್ಟು ಉದಾಹರಣೆ ಇವೆ. ಗಂಡಸರು ಕೂಡಾ ಆ ವೇಷವನ್ನು ಹಾಕಿಕೊಂಡು ಮಂಗಳಮುಖಿ ಅಂತಾರೆ. ಅವರನ್ನು ದುಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಲಲಿತಾ ನಾಯಕ್ ಹೇಳಿದರು.

ದೈವ ನರ್ತಕರ ಮಾಸಾಶನಕ್ಕೆ ಬಿ.ಟಿ.ಲಲಿತಾ ನಾಯಕ್ ವಿರೋಧ

ರಾಜ್ಯ ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡಬಾರದು. ಯಾರೋ ನೋವಿನಿಂದ ಕೂಗಿದವರನ್ನು ದೇವರು ಎಂದರು. ಈಗಿರುವ ಎಲ್ಲಾ ದೇವರು ಮನುಷ್ಯರೇ. ಇದೊಂದು ಸುಳ್ಳು ಸತ್ಯವನ್ನು ಜನರ ಮುಂದೆ ಇಡುವ ಕೆಲಸ ಮಾಡಬೇಕು. 2 ಸಾವಿರ ರೂ. ಮಾಸಾಶನ ನೀಡುವ ಬದಲು ಉದ್ಯೋಗ ನೀಡಿ. ಮಾನವ ಶ್ರಮವನ್ನು ಸರ್ಕಾರ ಬಳಸಿಕೊಳ್ಳಬೇಕು. ಅದನ್ನು ಬಿಟ್ಟು ದೇವರು ನಾನು ಅಂತಾ ಕುಣಿದಾಗ, ಅದಕ್ಕೆ ಎರಡು ಸಾವಿರ ಕೊಟ್ಟರೆ ಅದು ಸಾಲಲ್ಲ ಮುಂದೆ ಆತ ಮೌಡ್ಯವನ್ನು ಬಿತ್ತುತ್ತಾನೆ. ಸಾರ್ವಜನಿಕ ಹಣವನ್ನು ಪೋಲು ಮಾಡಬಾರದು. ಅರ್ಚಕರು ಹಾಗೂ ಮೌಲ್ವಿಗಳಿಗೂ ಮಾಸಾಶನ ನೀಡಬಾರದು. ದೇವಸ್ಥಾನದಲ್ಲಿ ನಮಗೆ ಜ್ಞಾನ ಸಿಗಲ್ಲ. ಗ್ರಂಥಾಲಯ, ಶಾಲೆಗಳಲ್ಲಿ ಮಾತ್ರ ನಮಗೆ ಜ್ಞಾನ ಸಿಗುವುದು ಎಂದು ಹೇಳಿದರು.

ಬಿ.ಟಿ.ಲಲಿತಾ ನಾಯಕ್ ಹೇಳಿಕೆಗೆ ಯು.ಟಿ ಖಾದರ್ ವಿರೋಧ

ಇನ್ನು ದೈವ ನರ್ತಕರಿಗೆ ಮಾಸಾಶನ ನೀಡಬಾರದು ಎಂಬ ಹೇಳಿಕೆಗೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಯು. ಟಿ ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಡಿರುವ ಅವರು, ಮಾನ್ಯ ಬಿ.ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ ಎಂದು ಖಾರವಾಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:43 pm, Sun, 6 November 22

VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ