AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ-ಬೆಂಗಳೂರು ವೋಲ್ವೋ ಬಸ್​ಗಾಗಿ ಮಾಜಿ ಕ್ರಿಕೆಟಿಗ ಇಟ್ಟ ಬೇಡಿಕೆಗೆ ಸಾರಿಗೆ ನಿಯಂತ್ರಣಾಧಿಕಾರಿ ಹೇಳಿದ್ದಿಷ್ಟು

ಬೆಂಗಳೂರು ನಿಂದ ಗದಗ ಜಿಲ್ಲೆಗೆ ವೋಲ್ವೊ ಬಸ್ ಸೇವೆ ಬಂದ್ ಆಗಿದ್ದು, ಪುನಾರಂಭಗೊಳಿಸಿ ಎಂದು ಸರ್ಕಾರಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಮನವಿ ಮಾಡಿದ್ದಾರೆ. ಈ ಹಿಂದೆ 2023 ರಲ್ಲೂ ಕೂಡ ಜೋಶಿ ಮನವಿ ಮೇರೆಗೆ ವೋಲ್ವೊ ಬಸ್ ಸೇವೆ ಸಾರಿಗೆ ಇಲಾಖೆ ಆರಂಭಿಸಿತ್ತು. ಆದ್ರೆ, ಕೆಲ ತಿಂಗಳ ದಿನಗಳ ನಂತರ ಸಾರಿಗೆ ಇಲಾಖೆ ಸೇವೆ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ಮನವಿ ಮಾಡಿದ್ದು, ಸಾರಿಗೆ ನಿಯಂತ್ರಣಾಧಿಕಾರಿ ಈ ಕುರಿತು ಏನಂದ್ರು ಗೊತ್ತಾ? ಈ ಸ್ಟೋರಿ ಓದಿ.

ಗದಗ-ಬೆಂಗಳೂರು  ವೋಲ್ವೋ  ಬಸ್​ಗಾಗಿ ಮಾಜಿ ಕ್ರಿಕೆಟಿಗ ಇಟ್ಟ ಬೇಡಿಕೆಗೆ ಸಾರಿಗೆ ನಿಯಂತ್ರಣಾಧಿಕಾರಿ ಹೇಳಿದ್ದಿಷ್ಟು
ಸಾರಿಗೆ ನಿಯಂತ್ರಣಾಧಿಕಾರಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Aug 21, 2024 | 4:07 PM

Share

ಗದಗ, ಆ.21: ಗದಗ ಟು ಬೆಂಗಳೂರು ಮಧ್ಯೆ ವೋಲ್ವೋ ಬಸ್(Volvo bus)​ಗಾಗಿ ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಸಾರಿಗೆ ನಿಯಂತ್ರಣಾಧಿಕಾರಿ ಡಿ.ಎಂ ದೇವರಾಜು, ‘ಗದಗ- ಬೆಂಗಳೂರು ವೋಲ್ವೋ ಬಸ್ ಸಂಚಾರ ನಮ್ಮ ವ್ಯಾಪ್ತಿಯಲ್ಲಿ ಇಲ್ಲ, ನಮ್ಮಲ್ಲಿ ವೋಲ್ವೋ ಬಸ್ ಕೂಡ ಇಲ್ಲ. ಅದನ್ನು KSRTC ವೋಲ್ವೋ ಬಸ್ ಓಡಿಸಬೇಕು ಎಂದರು.

ಇನ್ನು ಕ್ರಿಕೆಟಿಗ ಸುನೀಲ್ ಜೋಶಿ ಅವರು ಹೇಳಿದ್ದಾರೆ. ‘ಈ ಮೊದಲು ಬೆಂಗಳೂರು ಕೆಎಸ್​ಆರ್​ಟಿಸಿ ಅವರು ಗದಗಗೆ ವೋಲ್ವೋ ಬಸ್ ಓಡಿಸಿದ್ದರು. ಆಗ ಆದಾಯ ಪ್ರಮಾಣ ಬಂದಿಲ್ಲ ಎಂದು ಸ್ಥಗಿತ ಮಾಡಿದ್ದಾರೆ. ಬಳಿಕ ಗದಗದಿಂದ ಎಸಿ ರಹಿತ ಸ್ಲೀಪರ್ ಓಡಿಸುತ್ತಿದ್ದೇವು. ಎರಡು ತಿಂಗಳಿಂದ ಬಸ್ ಸೋರುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಸ್ಥಗಿತ ಮಾಡಲಾಗಿದೆ. ಕೇಂದ್ರ ಕಚೇರಿ ಅನುಮತಿ ಪಡೆದು ರಿಪೇರಿಗೆ ಕಳಿಸಲಾಗಿದೆ. ಈಗ ರಿಪೇರಿ ಆಗಿ ಬಂದಿದೆ ಎಂದು ಹೇಳಿದರು.

ನಾನ್ ಎಸಿ ಸ್ಲೀಪರ್ ಬಸ್

ಇದನ್ನೂ ಓದಿ:ಗದಗ ಟು ಬೆಂಗಳೂರು ವೋಲ್ವೋ ಬಸ್ ಸೇವೆ ಪುನಾರಂಭಗೊಳಿಸುವಂತೆ ಸರ್ಕಾರಕ್ಕೆ ಸುನೀಲ್ ಜೋಶಿ ಮನವಿ

ಪಲ್ಲಕ್ಕಿ ಬಸ್ ನೀಡುವಂತೆ ಮನವಿ

ಇನ್ನು ಪಲ್ಲಕ್ಕಿ ಬಸ್ ನೀಡುವಂತೆ ಮನವಿ ಮಾಡಿದ್ದೇವೆ. ಎರಡು ಬಸ್ ನೀಡುವುದಾಗಿ ಹೇಳಿದ್ದಾರೆ.  ಎಸಿ ರಹಿತ ಬಸ್ 10 ಲಕ್ಷ ಕಿಲೋಮೀಟರ್ ಓಡಿವೆ. ಬೆಂಗಳೂರು ಟು ಗದಗ ವೋಲ್ವೋ ಬಸ್ ಓಡಿಸಲು ಕೇಂದ್ರ ಕಚೇರಿಗೆ ಮನವಿ ಮಾಡುತ್ತೆವೆ. ಆದರೆ, ಗದಗ ಡಿಪೋದಿಂದ ವೋಲ್ವೋ ವ್ಯವಸ್ಥೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದೀಗ 10 ಲಕ್ಷ ಕಿಲೋಮೀಟರ್ ಓಡಿದ ನಾನ್ ಎಸಿ ಸ್ಲೀಪರ್ ಬಸ್ ಓಡಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Wed, 21 August 24

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್