AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಕ್ಯಾಂಟರ್ ಪಲ್ಟಿ, ಮೂವರು ದುರ್ಮರಣ, ಇನ್ನೂ ಮೂವರಿಗೆ ಗಾಯ

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಕ್ಯಾಂಟರ್ ವಾಹನ​ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದು, ಇನ್ನೂ ಮೂವರಿಗೆ ಗಾಯಗಳಾಗಿವೆ. ಕುಂದಗೋಳದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿ ಹೋಗುತ್ತಿದ್ದಾಗ ಈ ದುರ್ಘಟನ ಸಂಭವಿಸಿದ್ದು, ಮೃತರು ಧಾರವಾಡ ಮೂಲದವರು ಎಂದು ತಿಳಿದುಬಂದಿದೆ.

ಗದಗ: ಕ್ಯಾಂಟರ್ ಪಲ್ಟಿ, ಮೂವರು ದುರ್ಮರಣ, ಇನ್ನೂ ಮೂವರಿಗೆ ಗಾಯ
ಕ್ಯಾಂಟರ್ ಪಲ್ಟಿ
TV9 Web
| Edited By: |

Updated on: Mar 06, 2024 | 5:23 PM

Share

ಗದಗ, (ಮಾರ್ಚ್ 06): ಕ್ಯಾಂಟರ್ ಪಲ್ಟಿಯಾಗಿ ( canter overturned) ಮೂವರು ಸಾವನ್ನಪ್ಪಿರುವ ಘಟನೆ ಗದಗ (Gadag) ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನವೀನ್ ಕುಂಬಾರ್ 23 ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ (22) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದವರು ಎಂದು ತಿಳಿದುಬಂದಿದೆ. ಕುಂದಗೋಳದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿ ಹೋಗುತ್ತಿದ್ದಾಗ ಈ ದುರ್ಘಟನ ನಡೆದಿದ್ದು, ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ.

ಕಾರು ಪಲ್ಟಿಯಾಗಿ ವಕೀಲ ಮುಬಾರಕ್ ಪಾಷಾ ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಅವಗಾನಪಲ್ಲಿ ಬಳಿ ತಿರುವಿನಲ್ಲಿ ಚರಂಡಿಗೆ ಕಾರು ಪಲ್ಟಿಯಾಗಿ ವಕೀಲರೊಬ್ಬರು ಕೊನೆಯುಸಿರೆಳೆದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದ ನಿವಾಸಿಯಾಗಿದ್ದ ವಕೀಲ ಮುಬಾರಕ್ ಪಾಷಾ(40) ಮೃತ ರ್ದುದೈವಿ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಕಾರು ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆ ಫಲಿಸಿದೇ ಸಾವನ್ನಪ್ಪಿದ್ದಾರೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಟಿಪ್ಪರ್‌ ಚಕ್ರದಡಿ ಸಿಲುಕಿ 4 ವರ್ಷದ ಮಗು ಸಾವು

ಚಿಕ್ಕೋಡಿ: ನಾಲ್ಕು ವರ್ಷದ ಪುಟ್ಟ ಮಗುವೊಂದು (Four year old Child) ಟಿಪ್ಪರ್ ವಾಹನದಡಿ (Tipper accident) ಸಿಲುಕಿ ದಾರುಣವಾಗಿ ಪ್ರಾಣ ಕಳೆದುಕೊಂಡ (Child death) ಘಟನೆ ಬೆಳಗಾವಿ ಜಿಲ್ಲೆಯ (Belagavi news) ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ಅದ್ವೈತ್ ಅಕ್ಷಯ್ ನಾಶಿಪುಡಿ (4) ಚಕ್ರದಡಿ ಸಿಲುಕಿ ಮೃತಪಟ್ಟ ಪುಟ್ಟ ಮಗು. ರಸ್ತೆ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಒಮ್ಮೆಗೇ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿ ಮಗು ಮೃತಪಟ್ಟಿದೆ. ಇಸ್ಲಾಂಪುರ ಗ್ರಾಮದ ಶಾಬಂದರ್ ವಂಟಮೂರಿ ರಸ್ತೆಯಲ್ಲಿ ವೇಗವಾಗಿ ಬಂದ ಟಿಪ್ಪರ್‌ ಮಗುವನ್ನು ಬಲಿ ಪಡೆದುಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!