AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮಗ ಮನನೊಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನನ್ನು ಉಳಿಸಲು ಹೋಗಿ ತಾಯಿ ಕೂಡ ಬಲಿಯಾಗಿದ್ದಾರೆ. ಮತ್ತೊಂದೆಡೆ ತಾಯಿ-ಮಗನ ಆತ್ಮಹತ್ಯೆಯ ಸುದ್ದಿ ಕೇಳಿ ಗದಗದ ಮನೆಯಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗದಗ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Mar 04, 2024 | 12:33 PM

Share

ಗದಗ, ಮಾರ್ಚ್.04: ಸಾಲಬಾಧೆಯಿಂದ ಬೇಸತ್ತ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆಯಿಂದ ಮನನೊಂದ ಮಗ ಹಾಗೂ ತಾಯಿ ಯಲವಿಗೆ ರೈಲು ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ತಾಯಿ-ಮಗ ಸಾವಿನ ಸುದ್ದಿ ಕೇಳಿ ಮತ್ತೋರ್ವ ಮಹಿಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ ತೇಲಿ (26) ಸಾವಕ್ಕ ತೇಲಿ (40) ರೇಣವ್ವ (39) ಆತ್ಮಹತ್ಯೆಗೆ ಶರಣಾದವರು.

ಮೃತ ಗ್ರಾಮಸ್ಥರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದವರು. ರೈಲು ಹಳಿಗೆ ಬಿದ್ದು ತಾಯಿ ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ರ್ಯಾಕ್ಟರ್ ಸಾಲ ಕಟ್ಟುವ ವಿಷಯವಾಗಿ ಗಲಾಟೆ ಮಾಡಿಕೊಂಡಿದ್ದ ಮಂಜುನಾಥ ಆತ್ಮಹತ್ಯೆಗೆ ಮುಂದಾಗಿದ್ದ ಈ ವೇಳೆ ರಕ್ಷಣೆ ಮಾಡಲು ಹೋಗಿ ತಾಯಿ ಕೂಡ ಹಳಿ ಮೇಲೆ ಬಿದ್ದು ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಯಲವಿಗೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದೆ. ಇನ್ನು ಮತ್ತೊಂದೆಡೆ ಮಗ ಮಂಜುನಾಥ ತೇಲಿ ಹಾಗೂ ತಾಯಿ ರೇಣವ್ವ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಸಾವಕ್ಕ ಎಂಬುವವರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮಂಗಳೂರು; ಕಾಲೇಜು ಆವರಣದಲ್ಲಿ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಒಂದೇ ಕುಟುಂಬದ ಮೂವರ ಸಾವು

ಕೌಟುಂಬಿಕ ಕಲಹ ಮನನೊಂದು, ಒಂದೇ ಕುಟುಂಬದ ಮೂವರ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಜ್ಯೋತಿ, ಮಕ್ಕಳಾದ ಬಾಂಧವ್ಯ ಮತ್ತು ಮಾನಸ ಸಹ ಸಾವನ್ನಪ್ಪಿದ್ದಾರೆ. ಹೊರೆಯಾಲ ಗ್ರಾಮದ ಯೋಗೀಶ ಅವರ ಪತ್ನಿ ಜ್ಯೋತಿ ಮಕ್ಕಳಿಗೆ ನೇಣು ಬಿಗಿದು ನಂತರ ತಾಯಿ ಜ್ಯೋತಿ ಕೂಡ ನೇಣು ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಸದ್ಯ ಸ್ಥಳಕ್ಕೆ ಬೇಗೂರು ಪೊಲೀಸರ ಭೇಟಿ,ಪರಿಶೀಲನೆ ನಡೆಸಿದ್ರು.

ಮೂವರು ಯುವಕರು ನೀರುಪಾಲು

ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮಂಗಳೂರು ಹೊರವಲಯದ ಪಣಂಬೂರು ಬೀಚ್‌ನಲ್ಲಿ ದುರ್ಘಟನೆ ನಡೆದಿದೆ. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್, ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ ನಾಗರಾಜ್ ನೀರುಪಾಲಾಗಿದ್ದಾರೆ. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ಮುಂದುವರಿದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More