AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು, ದಾಳಿ ಮಾಡಿ ನೂರಾರು ಟಿಪ್ಪರ್ ಮರಳು ಸೀಜ್

ಅಕ್ರಮ ಮರಳು ದಂಧೆ ಗೊತ್ತಿದ್ದರೂ, ಜಿಲ್ಲಾಡಳಿತ ಜಾಣಕುರುಡುತನ ಪ್ರದರ್ಶನ ಮಾಡಿತ್ತು. ಯಾವಾಗ ಡಿಸೆಂಬರ್ 27 ರಂದು ಟಿವಿ9 ಡಿಜಿಟಲ್​ನಲ್ಲಿ ವಿಸ್ತೃತ ವರದಿ ಪ್ರಸಾರ ಮಾಡಲಾಯಿತೋ ಆಗ ನಿದ್ದೆಯಿಂದ ಎದ್ದ ಗಣಿ, ಕಂದಾಯ ಇಲಾಖೆ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿ ನೂರಾರು ಟಿಪ್ಪರ್ ಮರಳು ಸೀಜ್ ಮಾಡಿದ್ದಾರೆ.

ಗದಗ: ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು, ದಾಳಿ ಮಾಡಿ ನೂರಾರು ಟಿಪ್ಪರ್ ಮರಳು ಸೀಜ್
ನೂರಾರು ಟಿಪ್ಪರ್ ಮರಳು ಸೀಜ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jan 03, 2024 | 11:50 AM

Share

ಗದಗ, ಡಿ.29: ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳು ದಂಧೆ (Sand Mafia) ವಿಚಾರ ಭಾರಿ ಸದ್ದು ಮಾಡಿತ್ತು. ಈ ಬಗ್ಗೆ ಟಿವಿ9 ವಿಸ್ತೃತ ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ (Tv9 Impact) ಎಚ್ಚೆತ್ತುಕೊಂಡ‌ ಜಿಲ್ಲಾಡಳಿತ, ಗದಗ ಜಿಲ್ಲೆಯ‌ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಮರಳು ಅಡ್ಡೆ ಮೇಲೆ ದಾಳಿ ನಡೆಸಿ ನೂರಾರು ಟಿಪ್ಪರ್ ಮರಳು ಸೀಜ್ ಮಾಡಿದೆ. ಎಗ್ಗಿಲ್ಲದೇ ಅಕ್ರಮ‌ ಮರಳು ಗಣಿಗಾರಿಕೆ‌ ನಡಿತಾಯಿದ್ರೂ ಗಪ್ ಚುಪ್ ಆಗಿದ್ದ ಜಿಲ್ಲಾಡಳಿತ ಟಿವಿ9 ವರದಿ ಬಳಿಕ ಎಚ್ಚೆತ್ತುಕೊಂಡಿದ್ದು ಅಪಾರ‌ ಮರಳು ಸೀಜ್ ಮಾಡಿದೆ. ಕಂದಾಯ, ಪೊಲೀಸ್ ಹಾಗೂ ಗಣಿ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಮರಳು ಸೀಜ್ ಮಾಡಲಾಗಿದೆ.

ಗದಗ ಜಿಲ್ಲಾ ಪೊಲೀಸರು ಅಲರ್ಟ್‌ ಆಗಿದ್ದು ಈಗ ನದಿ ಪಾತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಮರಳಿಗೆ ಕಾವಲು ಹಾಕಲಾಗಿದೆ. ಗದಗ ಜಿಲ್ಲೆಯ‌ ಮುಂಡರಗಿ ತಾಲೂಕಿನ ಸಿಂಗಟಾಲೂರ, ಶೀರನಹಳ್ಳಿ, ಹೆಸರೂರ ಗ್ರಾಮಗಳ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಲಾಗಿತ್ತು.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಅಧಿಕಾರಿಗಳು ಶಾಮೀಲು ಆರೋಪ

ಗದಗ ಜಿಲ್ಲೆಯ‌ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ಸಾಗಿದೆ. ಈ ನದಿ ಪಾತ್ರದಲ್ಲಿ ಯಾವುದೇ ಮರಳು ಟೆಂಡರ್ ಇಲ್ಲ. ಇಲ್ಲಿ ನಡಿಯುತ್ತಿರುವ ಮರಳು ಗಣಿಗಾರಿಕೆ ಸಂಪೂರ್ಣ ಅಕ್ರಮವಾಗಿದೆ. ಹಗಲು ರಾತ್ರಿ ಎನ್ನದೇ ದಂಧೆಕೋರರು ನದಿ ಒಡಲು ಬಗೆದು ಮರಳು ಹೆಕ್ಕುತ್ತಿದ್ದಾರೆ. ಸಿಂಗಟಾಲೂರ, ಶೀರನಹಳ್ಳಿ, ಹೆಸರೂರ ಸೇರಿದಂತೆ ನದಿ ಪಾತ್ರದ ಗ್ರಾಮಗಳಲ್ಲಿ ಅಕ್ರಮ ಮರಳು ದಂಧೆ ನಡೆಸಿದ್ದಾರೆ. ಕಾನೂನು ಸಚಿವರ ತವರಲ್ಲೇ ಎಲ್ಲ ಕಾನೂನುಗಳು ಗಾಳಿಗೆ ತೂರಿ ಎಗ್ಗಿಲ್ಲದೇ ಅಕ್ರಮ ಮರಳು ಗಣಿಗಾರಿಕೆ‌ ನಡೆದ್ರೂ ಗಣಿ ಹಾಗೂ ಕಂದಾಯ ಇಲಾಖೆ ಡೋಂಟ್ ಕೇರ್ ಅಂತಿವೆ ಎಂದು ರೈತರು, ನದಿ ಪಾತ್ರದ ಗ್ರಾಮಗಳ ಜನರು ಆಕ್ರೋಶ ಹೊರ ಹಾಕಿದೆ ಎಂದು ಟಿವಿ9 ವರದಿ ಮಾಡಿತ್ತು.

ಅಕ್ರಮ ಮರಳು ದಂಧೆ ಗೊತ್ತಿದ್ದರೂ, ಜಿಲ್ಲಾಡಳಿತ ಜಾಣಕುರುಡುತನ ಪ್ರದರ್ಶನ ಮಾಡಿತ್ತು. ಯಾವಾಗ ಡಿಸೆಂಬರ್ 27 ರಂದು ಟಿವಿ9 ಡಿಜಿಟಲ್​ನಲ್ಲಿ ವಿಸ್ತೃತ ವರದಿ ಪ್ರಸಾರ ಮಾಡಲಾಯಿತೋ ಆಗ ನಿದ್ದೆಯಿಂದ ಎದ್ದ ಗಣಿ, ಕಂದಾಯ ಇಲಾಖೆ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿ ನೂರಾರು ಟಿಪ್ಪರ್ ಮರಳು ಸೀಜ್ ಮಾಡಿದ್ದಾರೆ. ಕೊನೆಗೂ ಜಿಲ್ಲಾಡಳಿತ‌ ಟಿವಿ9 ಡಿಜಿಟಲ್ ವರದಿಗೆ ಎಚ್ಚೆತ್ತುಕೊಂಡಂತಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:26 am, Fri, 29 December 23

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?