AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಮೊಹರಂ ಹಬ್ಬ ಆಚರಣೆ ವೇಳೆ ಹೃದಯಾಘಾತದಿಂದ ಇಬ್ಬರು ಸಾವು

ಗದಗ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ವೇಳೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೊಹರಂ ಹಬ್ಬದ ಅಂಗವಾಗಿ ಅಲಿ ದೇವರು ಹೊತ್ತಿದ್ದ ಮತ್ತು ಹೆಜ್ಜೆ ಮಜಲು ಆಡುತ್ತಿದ್ದ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Gadag News: ಮೊಹರಂ ಹಬ್ಬ ಆಚರಣೆ ವೇಳೆ ಹೃದಯಾಘಾತದಿಂದ ಇಬ್ಬರು ಸಾವು
ಮೃತರು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jul 29, 2023 | 9:46 PM

Share

ಗದಗ, ಜುಲೈ 29: ಜಿಲ್ಲೆಯಲ್ಲಿ ಮೊಹರಂ (Muharram) ಹಬ್ಬ ಆಚರಣೆ ವೇಳೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೊಹರಂ ಹಬ್ಬದ ಅಂಗವಾಗಿ ಅಲಿ ದೇವರು ಹೊತ್ತಿದ್ದ ಮತ್ತು ಹೆಜ್ಜೆ ಮಜಲು ಆಡುತ್ತಿದ್ದ ಇಬ್ಬರು  ವ್ಯಕ್ತಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಇಮಾಮ್ ಸಾಬ್(55), ಹರ್ಲಾಪೂರ ಗ್ರಾಮದ ಶರೀಫ್ ಮೂಲಿಮನಿ(40) ಮೃತರು. ಸದ್ಯ ಸಂಭ್ರಮದಲ್ಲಿದ್ದ ಗ್ರಾಮಗಳಲ್ಲಿ ಸೂತಕದ ಛಾಯೆ ಆವರಿಸಿದ್ದು, ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ; ಸ್ಥಳ ಮಹಜರು ಪ್ರಕ್ರಿಯೆ ನಡೆಸಿರುವ NIA ಅಧಿಕಾರಿಗಳು

ಜೋಕಾಲಿ ಆಡಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕಿ

ಹಾಸನ: ಜೋಕಾಲಿ ಆಡುವ ವೇಳೆ ಜೋಕಾಲಿಯ ಸೀರೆ ಕುತ್ತಿಗೆಗೆ ಸಿಲುಕಿ 9 ವರ್ಷದ ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ನಡೆದಿದೆ. ಬಸವರಾಜು, ಬೇಬಿ ದಂಪತಿಯ ಪುತ್ರಿ ಸಾನಿತಾ(9) ಮೃತ ಬಾಲಕಿ. ಮನೆಯೊಳಗೆ ಜೋಕಾಲಿ ಆಡಲು ಪೋಷಕರು ಸೀರೆ ಕಟ್ಟಿದ್ದರು. ಆಟವಾಡುವಾಗ ಆಯತಪ್ಪಿ ಕುತ್ತಿಗೆಗೆ ಸೀರೆ ಬಿಗಿದು ಸಾನಿತಾ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರ ಬಂಧನ

ಮಂಗಳೂರು: ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಬಾಳೇಪುನಿ ನಿವಾಸಿ ಅಬ್ಬಾಸ್(61), ಕುತ್ತಾರು ನಿವಾಸಿ ಯಶವಂತ ಕುಮಾರ್(45) ಬಂಧಿತರು. 1 ಪಿಸ್ತೂಲ್, 2 ಮೊಬೈಲ್ ಮತ್ತು 2 ಬೈಕ್​ನ್ನು​ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Ramanagara News: ಜಡ್ಜ್ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನು ಬಂಧಿಸಿದ ಪೊಲೀಸ್

ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ವಿಧಿವಶ

ಮೈಸೂರು: ಅನಾರೋಗ್ಯದಿಂದ ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್​ ಜೆಎಸ್​ಎಸ್​ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ. ಕುಶಾಲಪ್ಪ (62) ಮೃತ ಸೇನಾನಿ. ಮದ್ರಾಸ್ ರಿಜಿಮೆಂಟ್‌ನಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿದ್ದರು. ಮೈಸೂರಿನ ಹಿನಕಲ್ ನಿವಾಸದಲ್ಲಿ ಎಕ್ಸ್ ಸರ್ವಿಸ್ ಮೆನ್ ಸಂಸ್ಥೆಯಿಂದ 40 ಜನರಿಂದ ಪೆರೇಡ್ ಮಾಡುವ ಮೂಲಕ ಅಂತಿಮ‌ ನಮನ ಸಲ್ಲಿಸಲಾಯಿತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:40 pm, Sat, 29 July 23

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ