AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾಶೀರ್ವಾದ ಕಾರ್ಯಕ್ರಮದ ಅತ್ಯುತ್ಸಾಹದಲ್ಲಿ ಹಾಲಿ ಯೋಧನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೇಂದ್ರ ಸಚಿವ ನಾರಾಯಣಸ್ವಾಮಿ!

ಗದಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ಇತ್ತೀಚೆಗೆ ಸಚಿವರಾಗಿ ಸೇರ್ಪಡೆಯಾಗಿರುವ ಸಂಸದರು ದೇಶಾದ್ಯತ ಜನಾದೇಶ ಸಭೆಗಳನ್ನು ದೇಶಾದ್ಯಂತ ಹಮ್ಮಿಕೊಂಡಿದ್ದಾರೆ. ಅದರಂರೆ ರಾಜ್ಯದಲ್ಲಿ ನಾಲ್ವರು ಕೇಂದ್ರ ಸಚಿವರು ಕರ್ನಾಟಕದ ಹಲವಾರು ಭಾಗಗಳಲ್ಲಿ ಸಭೆಗಳನ್ನು ನಡೆಸಿದ್ದಾರೆ. ಆದರೆ ಕೇಂದ್ರ ಸಚಿವ ನಾರಾಯಣಸ್ವಾಮಿ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಮಹಾ ಯಡವಟ್ಟು ಮಾಡಿದ್ದಾರೆ. ನಿನ್ನೆ ಗದಗನಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಜನಾಶೀರ್ವಾದ ಕಾರ್ಯಕ್ರಮದ (Janashirvada Yatra) ಉತ್ಸಾಹದಲ್ಲಿ ಮಾಹಿತಿ ಕೊರತೆಯಿಂದಾಗಿ ಸೇವೆಯಲ್ಲಿರುವ ಸೈನಿಕನ ಮನೆಗೆ ತೆರಳಿ ಕುಟುಂಬಕ್ಕೆ‌ ‘ಸಾಂತ್ವನ’ […]

ಜನಾಶೀರ್ವಾದ ಕಾರ್ಯಕ್ರಮದ ಅತ್ಯುತ್ಸಾಹದಲ್ಲಿ ಹಾಲಿ ಯೋಧನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೇಂದ್ರ ಸಚಿವ ನಾರಾಯಣಸ್ವಾಮಿ!
ಜನಾಶೀರ್ವಾದ ಕಾರ್ಯಕ್ರಮ ಅತ್ತುತ್ಸಾಹದಲ್ಲಿ ಹಾಲಿ ಯೋಧನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೇಂದ್ರ ಸಚಿವ ನಾರಾಯಣಸ್ವಾಮಿ!
TV9 Web
| Updated By: ಸಾಧು ಶ್ರೀನಾಥ್​|

Updated on:Aug 20, 2021 | 1:16 PM

Share

ಗದಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ಇತ್ತೀಚೆಗೆ ಸಚಿವರಾಗಿ ಸೇರ್ಪಡೆಯಾಗಿರುವ ಸಂಸದರು ದೇಶಾದ್ಯತ ಜನಾದೇಶ ಸಭೆಗಳನ್ನು ದೇಶಾದ್ಯಂತ ಹಮ್ಮಿಕೊಂಡಿದ್ದಾರೆ. ಅದರಂರೆ ರಾಜ್ಯದಲ್ಲಿ ನಾಲ್ವರು ಕೇಂದ್ರ ಸಚಿವರು ಕರ್ನಾಟಕದ ಹಲವಾರು ಭಾಗಗಳಲ್ಲಿ ಸಭೆಗಳನ್ನು ನಡೆಸಿದ್ದಾರೆ. ಆದರೆ ಕೇಂದ್ರ ಸಚಿವ ನಾರಾಯಣಸ್ವಾಮಿ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಮಹಾ ಯಡವಟ್ಟು ಮಾಡಿದ್ದಾರೆ.

ನಿನ್ನೆ ಗದಗನಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಜನಾಶೀರ್ವಾದ ಕಾರ್ಯಕ್ರಮದ (Janashirvada Yatra) ಉತ್ಸಾಹದಲ್ಲಿ ಮಾಹಿತಿ ಕೊರತೆಯಿಂದಾಗಿ ಸೇವೆಯಲ್ಲಿರುವ ಸೈನಿಕನ ಮನೆಗೆ ತೆರಳಿ ಕುಟುಂಬಕ್ಕೆ‌ ‘ಸಾಂತ್ವನ’ ಹೇಳಿಬಂದಿದ್ದಾರೆ.

ಗದಗ ತಾಲೂಕಿನ ಮುಳಗುಂದ ಪಟ್ಟಣದ ಮೃತ ಯೋಧನ ಕುಟುಂಬಕ್ಕೆ ಭೇಟಿ ನೀಡಬೇಕಿದ್ದ ಸಚಿವ ನಾರಾಯಣಸ್ವಾಮಿ, ಹಾಲಿ ಯೋಧರೊಬ್ಬರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಯೋಧ ಬಸವರಾಜ ಹಿರೇಮಠ ಅವರು ಒಂದೂವರೆ ವರ್ಷದ ಹಿಂದೆ ರೈಲು ಅಪಘಾತದಲ್ಲಿ ಮೃತಪಟ್ಟಿದ್ದರು. ಅವರು ಮಹಾರಾಷ್ಟ್ರದ ಪುಣೆಯಲ್ಲಿ ಕರ್ತವ್ಯನಿರತನಾಗಿದ್ದ ವೇಳೆ ಮೃತಪಟ್ಟಿದ್ದರು. ಯೋಧ ಬಸವರಾಜ ಮೂಲತಃ ಗದಗ ತಾಲೂಕಿನ ಮುಳಗುಂದ ಪಟ್ಟಣದವರು.

ಆದರೆ ಬಸವರಾಜ ಕುಟುಂಬಕ್ಕೆ ತೆರಳಿ ಸಾಂತ್ವಾನ ಹೇಳಿ, ಧೈರ್ಯ ತುಂಬಬೇಕಿದ್ದ ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರಸ್ತುತ ಜಮ್ಮು‌ಕಾಶ್ಮೀರದಲ್ಲಿ ಕರ್ತವ್ಯದಲ್ಲಿರೋ ಯೋಧ ರವಿಕುಮಾರ ಕಟ್ಟಿಮನಿ ಮನೆಗೆ ಭೇಟಿ ನೀಡಿಬಂದಿದ್ದಾರೆ. ಸಾಲದು ಅಂತಾ, ಸೈನಿಕ ರವಿಕುಮಾರ ಪತ್ನಿ ಅವರೊಂದಿಗೆ ಮಾತನಾಡುತ್ತಾ, ಯೋಗಕ್ಷೇಮ ವಿಚಾರಿಸಿದ್ದಾರೆ. ಆ ವೇಳೆ, ಸರ್ಕಾರಿ ನೌಕರಿ ಹಾಗೂ ಜಮೀನು ಕೊಡುವ ಭರವಸೆ ನೀಡಿದ್ದಾರೆ. ಸಚಿವರ ತರಾತುರಿ‌ ಹೇಳಿಕೆಯಿಂದ ಹಾಲಿ ಯೋಧನ ಕುಟುಂಬಸ್ಥರು ತಬ್ಬಿಬ್ಬು ಆಗಿದ್ದಾರೆ. ಸ್ಥಳೀಯ ಬಿಜೆಪಿ ಮುಖಂಡರ ಮಾಹಿತಿ ಕೊರತೆಯಿಂದ ಕೇಂದ್ರ ಸಚಿವರಿಂದ ಎಡವಟ್ಟಾಗಿದೆ ಎಂದು ತಿಳಿದುಬಂದಿದೆ.

(Union minister a narayanaswamy mistake working soldier to death and condole his family members)

Published On - 1:13 pm, Fri, 20 August 21

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು