AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಇನ್ನೂ ನಿಂತಿಲ್ಲ ಯೂರಿಯಾ ಕೊರತೆ ಗೋಳು: ಗೊಬ್ಬರ ಸಿಗದೇ ಕೊಳೆಯುತ್ತಿವೆ ಬೆಳೆಗಳು

ಆ ಮಕ್ಕಳದ್ದು ಶಾಲೆಗೆ ಹೋಗಿ ಪಾಠ ಕೇಳುವ ವಯಸ್ಸು. ಆದರೆ, ಶಾಲೆ ಬಿಟ್ಟು ಕೃಷಿ ಚಟುವಟಿಕೆ ಬೆನ್ನತ್ತುವ ಸ್ಥಿತಿ ಬಂದಿದೆ. ಇದಕ್ಕೆ ಕಾರಣ ಯೂರಿಯಾ ಗೊಬ್ಬರದ ಕೊರತೆ. ಒಬ್ಬರಿಗೆ ಒಂದೇ ಚೀಲ ಗೊಬ್ಬರ ಎಂಬ ಅಂಗಡಿ ಮಾಲೀಕರ ಕಾನೂನಿಗೆ ರೈತರ ಮಕ್ಕಳು ಶಾಲೆಬಿಟ್ಟು ಬೀದಿಗೆ ಬರುವಂತಾಗಿದೆ. ರೈತರು ಮಕ್ಕಳನ್ನು ಶಾಲೆಗೆ ಕಳುಹಿಸದೇ ಗೊಬ್ಬರ ಖರೀದಿಗೆ ಕರೆದುಕೊಂಡು ಬಂದಿದ್ದಾರೆ.

ಗದಗದಲ್ಲಿ ಇನ್ನೂ ನಿಂತಿಲ್ಲ ಯೂರಿಯಾ ಕೊರತೆ ಗೋಳು: ಗೊಬ್ಬರ ಸಿಗದೇ ಕೊಳೆಯುತ್ತಿವೆ ಬೆಳೆಗಳು
ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದುಕೊಂಡು ಗೊಬ್ಬರಕ್ಕಾಗಿ ಕಾದು ನಿಂತಿರುವ ಮಕ್ಕಳು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 06, 2025 | 2:18 PM

Share

ಗದಗ, ಆಗಸ್ಟ್ 6: ಯೂರಿಯಾ (Urea) ಗೊಬ್ಬರಕ್ಕಾಗಿ ಶಾಲೆಬಿಟ್ಟು ರೈತರ ಮಕ್ಕಳ ಸರದಿ ಸಾಲು. ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದುಕೊಂಡು, ‘ನಾವೂ ರೈತರ ಮಕ್ಕಳು, ನಮಗೊಂದು ಯೂರಿಯಾ ಗೊಬ್ಬರ ಕೊಡಿ’ ಎಂದು ಸಾಲಿನಲ್ಲಿ ನಿಂತಿರುವ ಮಕ್ಕಳು. ನಸುಕಿನ ನಾಲ್ಕು ಗಂಟೆಗೇ ಬಂದ ಮಕ್ಕಳು, ರೈತರು, ಅನ್ನ, ನೀರು, ನಿದ್ದೆ ಇಲ್ಲದೇ ಗೊಬ್ಬರಕ್ಕಾಗಿ ಪರದಾಡುತ್ತಿರುವುದು. ಈ ಎಲ್ಲ ದೃಶ್ಯಗಳು ಕಂಡಿದ್ದು, ಗದಗ (Gadag ಜಿಲ್ಲೆಯಲ್ಲಿ. ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಗೋಳಾಟ ಇನ್ನೂ ನಿಂತಿಲ್ಲ. ಸರ್ಕಾರ ಗೊಬ್ಬರ ಕೊರತೆ ಇಲ್ಲ ಎನ್ನುತ್ತಿದೆ. ಆದರೆ, ರೈತರಿಗೆ ಮಾತ್ರ ಗೊಬ್ಬರ ಸಿಗುತ್ತಿಲ್ಲ.

ಗದಗ ಜಿಲ್ಲೆಯಲ್ಲಿ ಮಳೆ ಇನ್ನೂ ನಿಂತಿಲ್ಲ. ಅತಿಯಾದ ಮಳೆಯಿಂದ ತೇವಾಂಶ ಹೆಚ್ಚಾಗಿ ಗೋವಿನ ಜೋಳ ಕೊಳೆಯುತ್ತಿದೆ. ಸಕಾಲಕ್ಕೆ ಯೂರಿಯಾ ಹಾಕದಿದ್ದರೆ ಬೆಳೆ ಸಂಪೂರ್ಣ ಹಾನಿಯಾಗಲಿದೆ. ಹೀಗಾಗಿ ಅನ್ನದಾತರು ಗೊಬ್ಬರಕ್ಕಾಗಿ ಅನ್ನ, ನೀರು, ನಿದ್ದೆ ಬಿಟ್ಟು ಹಗಲು, ರಾತ್ರಿ ಕಾಯುತ್ತಿದ್ದಾರೆ. ಆದರೆ, ರೈತರಿಗೆ ಗೊಬ್ಬರ ಸಿಗ್ತಿಲ್ಲ. ಅದರಲ್ಲೂ ಗದಗನ ಎಸ್​​ವಿ ಹಲವಾಗಲಿ ಆ್ಯಂಡ್ ಸನ್ಸ್ ಗೊಬ್ಬರ ಅಂಗಡಿಯಲ್ಲಿ ಒಬ್ಬರಿಗೆ ಒಂದೇ ಚೀಲ ನಿಯಮ ಮಾಡಿದ್ದಾರೆ. ಹೀಗಾಗಿ ರೈತರು ಗೊಬ್ಬರ ಖರೀದಿಗೆ ತಮ್ಮ ಮಕ್ಕಳ ಶಿಕ್ಷಣ ಬಿಡಿಸಿಕೊಂಡು ಬಂದು ಗೊಬ್ಬರಕ್ಕೆ ಕ್ಯೂ ನಿಲ್ಲಿಸಿದ್ದಾರೆ.

ಯೂರಿಯಾ ಗೊಬ್ಬರಕ್ಕಾಗಿ ಮಕ್ಕಳ ಶಿಕ್ಷಣಕ್ಕೆ ಕೊಡಲಿಪೆಟ್ಟು ಬಿದ್ದಿದೆ. 8, 9 ಹಾಗೂ SSLC ಮಕ್ಕಳು ಶಾಲೆ ಬಿಟ್ಟು ಸರದಿಯಲ್ಲಿ ನಿಂತಿದ್ದಾರೆ. ರೈತರ ಮಕ್ಕಳು ಶಿಕ್ಷಣ ಬಿಟ್ಟು ಬೀದಿಗೆ ಬಂದಿದ್ದು, ವ್ಯಾಪಕ ಅಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ
Image
ಹಾಸ್ಟೆಲ್ ಸೀಲಿಂಗ್ ಫ್ಯಾನ್​ಗಳಲ್ಲಿ ಆ್ಯಂಟಿ ಸೂಯಿಸೈಡ್ ಡಿವೈಸ್!
Image
ಅಂಜನಾದ್ರಿಯಲ್ಲಿ ಪೂಜಾ ವಿವಾದ: ವಿಚಾರಣೆಗೆ ಹಾಜರಾಗುವಂತೆ ಡಿಸಿಗೆ ತಾಕೀತು
Image
ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್! ಲಕ್ಷಾಂತರ ರೂ. ಪಂಗನಾಮ
Image
ಕೈಗಾದಲ್ಲಿ ಮತ್ತೆರಡು ಅಣು ವಿದ್ಯುತ್ ಘಟಕ: ವಿದ್ಯುತ್ ಉತ್ಪಾದನೆಗೆ ಬಲ

ಇದನ್ನೂ ಓದಿ: ಕರ್ನಾಟಕದಿಂದ ಅಕ್ರಮವಾಗಿ 15 ಟನ್​ ಯೂರಿಯಾ ಕೇರಳಕ್ಕೆ ಸಾಗಾಟ!

ಗೊಬ್ಬರ ಸಾಕಷ್ಟು ಸ್ಟಾಕ್ ಇದ್ದರೂ ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿ ಮಾಡುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ನಗರದಲ್ಲೇ ಗೊಬ್ಬರಕ್ಕಾಗಿ ಇಷ್ಟೊಂದು ರಾದ್ಧಾಂತ ನಡೆದರೂ ಜಿಲ್ಲಾಡಳಿತ, ಕೃಷಿ ಇಲಾಖೆ ಕ್ಯಾರೇ ಅನ್ನುತ್ತಿಲ್ಲ. ರೈತರ ಮಕ್ಕಳು ಶಿಕ್ಷಣ ಬಿಟ್ಟು ಗೊಬ್ಬರಕ್ಕಾಗಿ ಕಾಯುತ್ತಿರುವ ದೃಶ್ಯಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್