AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ನಾಲ್ಕೈದು‌ ಜನರ ಜೀವಕ್ಕೆ ಕುತ್ತು ತಂದ ನಿಷೇಧಿತ ಗಾಳಿಪಟ ಮಾಂಜಾ ದಾರ

ಗದಗ-ಬೆಟಗೇರಿ ಅವಳಿ ನಗರದ ರಸ್ತೆಯಲ್ಲಿ ಹರಿತವಾದ ಗಾಳಿಪಟ ದಾರದಿಂದ ಬೈಕ್ ಸವಾರರ ಕತ್ತು, ಕಾಲು, ಕೈಗೆ ಗಾಯವಾಗಿದೆ.

Gadag News: ನಾಲ್ಕೈದು‌ ಜನರ ಜೀವಕ್ಕೆ ಕುತ್ತು ತಂದ ನಿಷೇಧಿತ ಗಾಳಿಪಟ ಮಾಂಜಾ ದಾರ
ಗಾಳಿಪಟ ದಾರದಿಂದ ಗಾಯಗೊಂಡವರು
ವಿವೇಕ ಬಿರಾದಾರ
|

Updated on:Jun 05, 2023 | 10:34 AM

Share

ಗದಗ: ಗಾಳಿಪಟ (Kite) ಹಾರಿಸಲು ಬಳಕೆ ಮಾಡುವ “ಮಾಂಜಾ” ದಾರ (Manja Thread) ನಿಷೇಧ ಕಾಗದದಲ್ಲಷ್ಟೇ ಉಳಿದಿದೆ. ಅಪಾಯಕಾರಿ ಮಾಂಜಾ ದಾರ ಮಾರಾಟ, ಬಳಕೆ ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದು, ಫ್ಯಾನ್ಸಿ ಸ್ಟೋರ್‌ಗಳು, ಸಣ್ಣಪುಟ್ಟ ಅಂಗಡಿಗಳಲ್ಲಿ ಈ ದಾರವು ಸುಲಭವಾಗಿ ಸಿಗುತ್ತಿದೆ. ಇವುಗಳು ಪ್ರಾಣಿ-ಪಕ್ಷಿಗಳು ಮಾತ್ರವಲ್ಲದೆ ಮನುಷ್ಯರ ಪ್ರಾಣಕ್ಕೂ ಕಂಟಕವಾಗಿವೆ. ಗದಗ-ಬೆಟಗೇರಿ (Gadag-Betigeri) ಅವಳಿ ನಗರದ ರಸ್ತೆಯಲ್ಲಿ ಹರಿತವಾದ ಗಾಳಿಪಟ ದಾರದಿಂದ ಬೈಕ್ ಸವಾರರ ಕತ್ತು, ಕಾಲು, ಕೈಗೆ ಗಾಯವಾಗಿದೆ. ನಿನ್ನೆ (ಜೂ.05) ಕಾರಹುಣ್ಣಿಮೆ ಒಂದೇ ದಿನ ಓರ್ವ ರೈಲ್ವೇ ಪೊಲೀಸ್ ಸೇರಿ ನಾಲ್ಕೈದು‌ ಜನರಿಗೆ ಗಾಯವಾಗಿದೆ.

ಇನ್ನು ಬ್ಯಾನ್ ಆದ ಮಾಂಝಾ ದಾರದಿಂದ ಗಾಳಿಪಟ ಹಾರಾಟ ಮಾಡಲಾಗುತ್ತಿದೆ. ಇದರಿಂದ ಪಕ್ಷಿಗಳಿಗೆ ಮತ್ತು ಮನುಷ್ಯರ ಜೀವಕ್ಕೆ ಕುತ್ತು ಇದೆ. ಇದನ್ನು ಮಾರಾಟ ಮತ್ತು ಬಳಕೆ ಮಾಡದಂತೆ ತಡೆಗಟ್ಟಬೇಕೆಂದು ಸಂಘಟನೆಗಳು 15 ದಿನಗಳ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೂ ಕೂಡ ಜಿಲ್ಲಾಡಳಿತ ಡೋಂಟ್​ ಕೇರ್​ ಎಂದಿದೆ.

ಇದನ್ನೂ ಓದಿ: Gadag News: ಗದಗ ಜಿಲ್ಲಾ ಪೊಲೀಸರ ಭರ್ಜರಿ ಮೊಬೈಲ್ ಕಾರ್ಯಾಚರಣೆ; ಒಂದೇ ತಿಂಗಳಲ್ಲಿ ಲಕ್ಷಾಂತರ ರೂ. ಮೊಬೈಲ್​ಗಳು ಪತ್ತೆ

ನಿಷೇಧ ಆದೇಶ ಹೊರಡಿಸಿದ್ದ ಸರ್ಕಾರ

ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ತೀರ್ಪಿನಂತೆ ರಾಜ್ಯ ಸರಕಾರ 2017ರಲ್ಲಿ ಮಾಂಜಾ ದಾರದ ತಯಾರಿಕೆ, ಬಳಕೆ, ಮಾರಾಟವನ್ನು ನಿಷೇಧಿಸಿ ಗೆಜೆಟ್‌ ಅಧಿಸೂಚನೆ ಹೊರಡಿಸಿತ್ತು. ಆದರೆ, ಇದು ಕಟ್ಟುನಿಟ್ಟಾಗಿ ಜಾರಿಯಾಗಿಲ್ಲ ಎಂದು ಸಾವರ್ಜನಿಕರು ಆರೋಪ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Mon, 5 June 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!