AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ನಾಲ್ಕೈದು‌ ಜನರ ಜೀವಕ್ಕೆ ಕುತ್ತು ತಂದ ನಿಷೇಧಿತ ಗಾಳಿಪಟ ಮಾಂಜಾ ದಾರ

ಗದಗ-ಬೆಟಗೇರಿ ಅವಳಿ ನಗರದ ರಸ್ತೆಯಲ್ಲಿ ಹರಿತವಾದ ಗಾಳಿಪಟ ದಾರದಿಂದ ಬೈಕ್ ಸವಾರರ ಕತ್ತು, ಕಾಲು, ಕೈಗೆ ಗಾಯವಾಗಿದೆ.

Gadag News: ನಾಲ್ಕೈದು‌ ಜನರ ಜೀವಕ್ಕೆ ಕುತ್ತು ತಂದ ನಿಷೇಧಿತ ಗಾಳಿಪಟ ಮಾಂಜಾ ದಾರ
ಗಾಳಿಪಟ ದಾರದಿಂದ ಗಾಯಗೊಂಡವರು
ವಿವೇಕ ಬಿರಾದಾರ
|

Updated on:Jun 05, 2023 | 10:34 AM

Share

ಗದಗ: ಗಾಳಿಪಟ (Kite) ಹಾರಿಸಲು ಬಳಕೆ ಮಾಡುವ “ಮಾಂಜಾ” ದಾರ (Manja Thread) ನಿಷೇಧ ಕಾಗದದಲ್ಲಷ್ಟೇ ಉಳಿದಿದೆ. ಅಪಾಯಕಾರಿ ಮಾಂಜಾ ದಾರ ಮಾರಾಟ, ಬಳಕೆ ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದು, ಫ್ಯಾನ್ಸಿ ಸ್ಟೋರ್‌ಗಳು, ಸಣ್ಣಪುಟ್ಟ ಅಂಗಡಿಗಳಲ್ಲಿ ಈ ದಾರವು ಸುಲಭವಾಗಿ ಸಿಗುತ್ತಿದೆ. ಇವುಗಳು ಪ್ರಾಣಿ-ಪಕ್ಷಿಗಳು ಮಾತ್ರವಲ್ಲದೆ ಮನುಷ್ಯರ ಪ್ರಾಣಕ್ಕೂ ಕಂಟಕವಾಗಿವೆ. ಗದಗ-ಬೆಟಗೇರಿ (Gadag-Betigeri) ಅವಳಿ ನಗರದ ರಸ್ತೆಯಲ್ಲಿ ಹರಿತವಾದ ಗಾಳಿಪಟ ದಾರದಿಂದ ಬೈಕ್ ಸವಾರರ ಕತ್ತು, ಕಾಲು, ಕೈಗೆ ಗಾಯವಾಗಿದೆ. ನಿನ್ನೆ (ಜೂ.05) ಕಾರಹುಣ್ಣಿಮೆ ಒಂದೇ ದಿನ ಓರ್ವ ರೈಲ್ವೇ ಪೊಲೀಸ್ ಸೇರಿ ನಾಲ್ಕೈದು‌ ಜನರಿಗೆ ಗಾಯವಾಗಿದೆ.

ಇನ್ನು ಬ್ಯಾನ್ ಆದ ಮಾಂಝಾ ದಾರದಿಂದ ಗಾಳಿಪಟ ಹಾರಾಟ ಮಾಡಲಾಗುತ್ತಿದೆ. ಇದರಿಂದ ಪಕ್ಷಿಗಳಿಗೆ ಮತ್ತು ಮನುಷ್ಯರ ಜೀವಕ್ಕೆ ಕುತ್ತು ಇದೆ. ಇದನ್ನು ಮಾರಾಟ ಮತ್ತು ಬಳಕೆ ಮಾಡದಂತೆ ತಡೆಗಟ್ಟಬೇಕೆಂದು ಸಂಘಟನೆಗಳು 15 ದಿನಗಳ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೂ ಕೂಡ ಜಿಲ್ಲಾಡಳಿತ ಡೋಂಟ್​ ಕೇರ್​ ಎಂದಿದೆ.

ಇದನ್ನೂ ಓದಿ: Gadag News: ಗದಗ ಜಿಲ್ಲಾ ಪೊಲೀಸರ ಭರ್ಜರಿ ಮೊಬೈಲ್ ಕಾರ್ಯಾಚರಣೆ; ಒಂದೇ ತಿಂಗಳಲ್ಲಿ ಲಕ್ಷಾಂತರ ರೂ. ಮೊಬೈಲ್​ಗಳು ಪತ್ತೆ

ನಿಷೇಧ ಆದೇಶ ಹೊರಡಿಸಿದ್ದ ಸರ್ಕಾರ

ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ತೀರ್ಪಿನಂತೆ ರಾಜ್ಯ ಸರಕಾರ 2017ರಲ್ಲಿ ಮಾಂಜಾ ದಾರದ ತಯಾರಿಕೆ, ಬಳಕೆ, ಮಾರಾಟವನ್ನು ನಿಷೇಧಿಸಿ ಗೆಜೆಟ್‌ ಅಧಿಸೂಚನೆ ಹೊರಡಿಸಿತ್ತು. ಆದರೆ, ಇದು ಕಟ್ಟುನಿಟ್ಟಾಗಿ ಜಾರಿಯಾಗಿಲ್ಲ ಎಂದು ಸಾವರ್ಜನಿಕರು ಆರೋಪ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Mon, 5 June 23

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?