AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ನಾಲ್ಕೈದು‌ ಜನರ ಜೀವಕ್ಕೆ ಕುತ್ತು ತಂದ ನಿಷೇಧಿತ ಗಾಳಿಪಟ ಮಾಂಜಾ ದಾರ

ಗದಗ-ಬೆಟಗೇರಿ ಅವಳಿ ನಗರದ ರಸ್ತೆಯಲ್ಲಿ ಹರಿತವಾದ ಗಾಳಿಪಟ ದಾರದಿಂದ ಬೈಕ್ ಸವಾರರ ಕತ್ತು, ಕಾಲು, ಕೈಗೆ ಗಾಯವಾಗಿದೆ.

Gadag News: ನಾಲ್ಕೈದು‌ ಜನರ ಜೀವಕ್ಕೆ ಕುತ್ತು ತಂದ ನಿಷೇಧಿತ ಗಾಳಿಪಟ ಮಾಂಜಾ ದಾರ
ಗಾಳಿಪಟ ದಾರದಿಂದ ಗಾಯಗೊಂಡವರು
ವಿವೇಕ ಬಿರಾದಾರ
|

Updated on:Jun 05, 2023 | 10:34 AM

Share

ಗದಗ: ಗಾಳಿಪಟ (Kite) ಹಾರಿಸಲು ಬಳಕೆ ಮಾಡುವ “ಮಾಂಜಾ” ದಾರ (Manja Thread) ನಿಷೇಧ ಕಾಗದದಲ್ಲಷ್ಟೇ ಉಳಿದಿದೆ. ಅಪಾಯಕಾರಿ ಮಾಂಜಾ ದಾರ ಮಾರಾಟ, ಬಳಕೆ ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದು, ಫ್ಯಾನ್ಸಿ ಸ್ಟೋರ್‌ಗಳು, ಸಣ್ಣಪುಟ್ಟ ಅಂಗಡಿಗಳಲ್ಲಿ ಈ ದಾರವು ಸುಲಭವಾಗಿ ಸಿಗುತ್ತಿದೆ. ಇವುಗಳು ಪ್ರಾಣಿ-ಪಕ್ಷಿಗಳು ಮಾತ್ರವಲ್ಲದೆ ಮನುಷ್ಯರ ಪ್ರಾಣಕ್ಕೂ ಕಂಟಕವಾಗಿವೆ. ಗದಗ-ಬೆಟಗೇರಿ (Gadag-Betigeri) ಅವಳಿ ನಗರದ ರಸ್ತೆಯಲ್ಲಿ ಹರಿತವಾದ ಗಾಳಿಪಟ ದಾರದಿಂದ ಬೈಕ್ ಸವಾರರ ಕತ್ತು, ಕಾಲು, ಕೈಗೆ ಗಾಯವಾಗಿದೆ. ನಿನ್ನೆ (ಜೂ.05) ಕಾರಹುಣ್ಣಿಮೆ ಒಂದೇ ದಿನ ಓರ್ವ ರೈಲ್ವೇ ಪೊಲೀಸ್ ಸೇರಿ ನಾಲ್ಕೈದು‌ ಜನರಿಗೆ ಗಾಯವಾಗಿದೆ.

ಇನ್ನು ಬ್ಯಾನ್ ಆದ ಮಾಂಝಾ ದಾರದಿಂದ ಗಾಳಿಪಟ ಹಾರಾಟ ಮಾಡಲಾಗುತ್ತಿದೆ. ಇದರಿಂದ ಪಕ್ಷಿಗಳಿಗೆ ಮತ್ತು ಮನುಷ್ಯರ ಜೀವಕ್ಕೆ ಕುತ್ತು ಇದೆ. ಇದನ್ನು ಮಾರಾಟ ಮತ್ತು ಬಳಕೆ ಮಾಡದಂತೆ ತಡೆಗಟ್ಟಬೇಕೆಂದು ಸಂಘಟನೆಗಳು 15 ದಿನಗಳ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೂ ಕೂಡ ಜಿಲ್ಲಾಡಳಿತ ಡೋಂಟ್​ ಕೇರ್​ ಎಂದಿದೆ.

ಇದನ್ನೂ ಓದಿ: Gadag News: ಗದಗ ಜಿಲ್ಲಾ ಪೊಲೀಸರ ಭರ್ಜರಿ ಮೊಬೈಲ್ ಕಾರ್ಯಾಚರಣೆ; ಒಂದೇ ತಿಂಗಳಲ್ಲಿ ಲಕ್ಷಾಂತರ ರೂ. ಮೊಬೈಲ್​ಗಳು ಪತ್ತೆ

ನಿಷೇಧ ಆದೇಶ ಹೊರಡಿಸಿದ್ದ ಸರ್ಕಾರ

ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ತೀರ್ಪಿನಂತೆ ರಾಜ್ಯ ಸರಕಾರ 2017ರಲ್ಲಿ ಮಾಂಜಾ ದಾರದ ತಯಾರಿಕೆ, ಬಳಕೆ, ಮಾರಾಟವನ್ನು ನಿಷೇಧಿಸಿ ಗೆಜೆಟ್‌ ಅಧಿಸೂಚನೆ ಹೊರಡಿಸಿತ್ತು. ಆದರೆ, ಇದು ಕಟ್ಟುನಿಟ್ಟಾಗಿ ಜಾರಿಯಾಗಿಲ್ಲ ಎಂದು ಸಾವರ್ಜನಿಕರು ಆರೋಪ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Mon, 5 June 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ