AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಲ್ಲೆಯಾದ್ಯಂತ ಉಲ್ಬಣಗೊಂಡ ಚರ್ಮ ಗಂಟು ರೋಗ, ಜಾನುವಾರಗಳ ಪಾಲಿಗೆ ಆಪತ್ಭಾಂದವರಾದ ನಿವೃತ ಪಶುವೈದ್ಯ

ಗದಗ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಿರುವ ನಿವೃತ್ತ ಪಶುವೈದ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ರೈತರು

ಗದಗ ಜಿಲ್ಲೆಯಾದ್ಯಂತ ಉಲ್ಬಣಗೊಂಡ ಚರ್ಮ ಗಂಟು ರೋಗ, ಜಾನುವಾರಗಳ ಪಾಲಿಗೆ ಆಪತ್ಭಾಂದವರಾದ ನಿವೃತ ಪಶುವೈದ್ಯ
ನಿವೃತ್ತ ಪಶು ಅಧಿಕಾರಿ ಡಾ. ಎಸ್ ಟಿ ಬಾಬಣ್ಣವರ
TV9 Web
| Edited By: ವಿವೇಕ ಬಿರಾದಾರ|

Updated on:Oct 23, 2022 | 10:07 PM

Share

ಭಯಾನಕವಾದ ಚರ್ಮ ಗಂಟು ರೋಗ ಉಲ್ಬಣಗೊಂಡಿದ್ದು, ನಾಡಿನ ಜಾನುವಾರಗಳ ಜೀವ ಹಿಂಡುತ್ತಿದೆ. ಸಾಕಿ ಸಲುಹಿದ ಮೂಕ ಪ್ರಾಣಿಗಳ ರೋಧನ ನೋಡಿ ಅನ್ನದಾತರು ಗೋಳಾಡುತ್ತಿದ್ದಾರೆ. ಈ ನಡುವೆ ರೋಗಕ್ಕೆ ಮದ್ದು ಕೊಡಬೇಕಾದ ಪಶು ವೈದ್ಯರ ಕೊರತೆ ಗದಗ ಜಿಲ್ಲೆಯನ್ನು ಕಾಡುತ್ತಿದೆ.  ಇಂತಹ ವೇಳೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ರಾಸುಗಳು ರೈತನ ಕಣ್ಮುಂದೆ ಸಾವಿನ ಮನೆ ಸೇರುತ್ತಿವೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅನ್ನದಾತರು ಹಾಗೂ ಮೂಕ ಪ್ರಾಣಿಗಳ ಪಾಲಿಗೆ ಆಪತ್ಭಾಂದವರಾಗಿ, ಜಾನುವಾರುಗಳಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ನಿಸ್ವಾರ್ಥ ಸೇವೆ ಮಾಡುವ ಮೂಲಕ  ಅನ್ನದಾತರಿಗೆ ಆಸರೆಯಾಗಿದ್ದಾರೆ ಈ ಪಶುವೈದ್ಯರು.

ಗದಗ ಜಿಲ್ಲೆಯಲ್ಲಿ ಚರ್ಮ ಗಂಟು ರೋಗ ರೋಗ ವೀಪರತವಾಗಿ ಹರಡುತ್ತಿದ್ದು, ಪಶು ವೈದ್ಯರ ಕೊರತೆಯಿಂದ ರಾಸುಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿವೆ. ಇಡೀ ರಾಜ್ಯದಲ್ಲಿ ಅತೀ ಹೆಚ್ಚು ಪಶು ವೈದ್ಯರ ಕೊರತೆಯನ್ನು ಗದಗ ಜಿಲ್ಲೆ ಎದುರಿಸುತ್ತಿದೆ. ಹೀಗಾಗಿ ರಾಸುಗಗಳು ನಿತ್ಯವೂ ನರಳಿ ನರಳಿ ಸಾಯುವತ್ತಿವೆ. ಇಂತಹ ಸಂದರ್ಭದಲ್ಲಿ ಓರ್ವ ಪಶು ವೈದ್ಯಯೋರ್ವ ಆಪತ್ಭಾಂಧವರಾಗಿ ಬಂದಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ನಿವಾಸಿಯಾದ ನಿವೃತ್ತ ಪಶು ಅಧಿಕಾರಿ ಡಾ. ಎಸ್ ಟಿ ಬಾಬಣ್ಣವರ ಎಂಬುವರು ಉಚಿತವಾಗಿ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಮೂಲತಃ ಜಾನುವಾರು ಅಧಿಕಾರಿಯಾಗಿ ರಾಜ್ಯದ ನಾನಾ ಕಡೆ ಸೇವೆ ಸಲ್ಲಿಸಿದ ಇವರು ಒಂದುವರೆ ವರ್ಷದ ಹಿಂದೆ ನಿವೃತ್ತಿಯಾಗಿದ್ದಾರೆ. ಇವರು ಮುಂಜಾನೆಯಿಂದ ಸಂಜೆಯವರಿಗೆ ಹತ್ತಾರು ಗ್ರಾಮಗಳಿಗೆ ತೆರಳಿ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಇವರ ನಿಸ್ವಾರ್ಥ ಕಾರ್ಯಕ್ಕೆ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡಾ. ಎಸ್ ಟಿ ಬಾಬಣ್ಣವರ ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದರೂ, ಗದಗ ಜಿಲ್ಲೆಯ ರೈತರಿಗೆ ಅಪರಿಚಿತರು. ಆದರೂ ಕೂಡ, ಭಯಾನಕ ಕಾಯಿಲೆಯಿಂದ ಜಾನುವಾರುಗಳು ಸಾವನ್ನಪ್ಪುತ್ತಿರುವುದನ್ನು ಕಂಡು ಸ್ವಯಂ ಪ್ರೇರಿತರಾಗಿ ಉಚಿತವಾಗಿ ಚಿಕಿತ್ಸೆ ನೀಡಲು ಆರಂಭ ಮಾಡಿದ್ದಾರೆ. ಈವಾಗ ಲಕ್ಷ್ಮೇಶ್ವರ ತಾಲೂಕಿನ ಬಹುತೇಕ ರೈತರ ಮನೆಗೆ ಹೋಗಿ ಚಿಕಿತ್ಸೆ ನೀಡಿ, ಚರ್ಮ ಗಂಟು ರೋಗ ಲಕ್ಷಣಗಳು ಹಾಗೂ ಜಾಗೃತಿ ವಹಿಸುವ ಕ್ರಮಗಳನ್ನು ರೈತರಿಗೆ ತಿಳಿಹೇಳಿ ಬರುವ ಮೂಲಕ ರೈತರಿಗೆ ಅಚ್ಚುಮೆಚ್ಚಿನವರಾಗಿದ್ದಾರೆ‌.

“ನನಗೆ ಮೊದಲಿನಿಂದಲೂ ಜಾನುವಾರುಗಳ ಮೇಲೆ ಬಹಳ ಪ್ರೀತಿ. ಈಗ ಚರ್ಮ ಗಂಡು ರೋಗ ಹರಡುತ್ತಿದ್ದು, ನಾನು ರೈತರ ಮನೆಗೆ ಹೋಗಿ ಚಿಕಿತ್ಸೆ ನೀಡುತ್ತೇನೆ. ಯಾವ ರೈತರಿಂದಲೂ ಹಣ ಪಡೆಯುವದಿಲ್ಲ, ಇಂತಹ ಸ್ಥಿತಿಯಲ್ಲಿ ನಾನು ಕೂಡಾ ಅಳಿಲು ಸೇವೆ ಮಾಡುತ್ತಿದ್ದೇನೆ ” ಎಂದು ನಿವೃತ್ತ ಪಶು ಅಧಿಕಾರಿ ಎಸ್ ಟಿ ಬಾಬಣ್ಣವರ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ರೋಗದಿಂದ ಬಳಲಿ ಸಾವನ್ನಪ್ಪುತ್ತಿರುವ ಜಾನುವಾರುಗಳಿಗೆ ಉಚಿತ ಚಿಕಿತ್ಸೆ ನೀಡಿ, ರೈತರ ಪಾಲಿಗೆ ದೇವರಾದ ಡಾ. ಎಸ್ ಟಿ ಬಾಬಣ್ಣವರ ಅವರಿಗೆ ನಮ್ಮದೊಂದು ಸಲಾಂ

ವರದಿ- ಸಂಜೀವ ಪಾಂಡ್ರೆ, ಟಿವಿ9 ಗದಗ

Published On - 9:24 pm, Sun, 23 October 22

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು