AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಸರ್ಕಾರಿ ಶಾಲೆ ಶಿಕ್ಷಕ ಶಾಲೆಗೆ ಚಕ್ಕರ್ ಹಾಕಿ ಮರಳು ದಂಧೆಯಲ್ಲಿ ಭಾಗಿ ಆರೋಪ! ಮೂರು ತಿಂಗಳಿನಿಂದ ಗಣಿತ ಪಾಠ ಕೇಳದ ಮಕ್ಕಳು

ಎಸ್ ಕೆ ಪಾಟೀಲ್ ಶಿರಹಟ್ಟಿ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿದ್ದಾರೆ. ಆದರೆ 3 ತಿಂಗಳಿಂದ ಶಾಲೆ ಕಡೆ ತಿರುಗಿ ನೋಡಿಲ್ಲ. ನವೆಂಬರ್, ಡಿಸೆಂಬರ್​ನಲ್ಲಿ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿಲ್ಲ. ಬಳಿಕ 2 ತಿಂಗಳು ಹಾಜರಾದಂತೆ ಸಹಿ ಹಾಕಿದ್ದಾರೆ.

ಗದಗ: ಸರ್ಕಾರಿ ಶಾಲೆ ಶಿಕ್ಷಕ ಶಾಲೆಗೆ ಚಕ್ಕರ್ ಹಾಕಿ ಮರಳು ದಂಧೆಯಲ್ಲಿ ಭಾಗಿ ಆರೋಪ! ಮೂರು ತಿಂಗಳಿನಿಂದ ಗಣಿತ ಪಾಠ ಕೇಳದ ಮಕ್ಕಳು
ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು
TV9 Web
| Edited By: |

Updated on:Jan 31, 2022 | 10:08 AM

Share

ಗದಗ: ಸರ್ಕಾರಿ ಶಾಲೆ ಶಿಕ್ಷಕನೊಬ್ಬ (Teacher) ಶಾಲೆಗೆ ರಜೆ ಹಾಕಿ ಮರಳು ದಂಧೆಯಲ್ಲಿ (Sand Mafia) ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಗದಗ (Gadag) ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎಸ್ ಕೆ ಪಾಟೀಲ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕ ಮನಸ್ಸಿಗೆ ಬಂದಾಗ ಶಾಲೆಗೆ ಬಂದು ಹಾಜರಿ ಪುಸ್ತಕಕ್ಕೆ ಸಹಿ ಹಾಕಿ ನಂತರ ಶಾಲೆಯಿಂದ ಹೋಗುತ್ತಿದ್ದಾರಂತೆ. ಸರ್ಕಾರಿ ಸಂಬಳ ಪಡೆದರೂ ಮಕ್ಕಳಿಗೆ ಪಾಠ ಮಾಡುತ್ತಿರಲಿಲ್ಲ. ಪಾಠ ಮಾಡುವ ಬದಲು ಶಾಲೆಗೆ ರಜೆ ಹಾಕಿ ಮರಳು ದಂಧೆಯಲ್ಲಿ ಭಾಗಿಯಾಗುತ್ತಿದ್ದಾರೆ ಅಂತ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಗಣಿತ ಪಾಠ ಕೇಳದ ಮಕ್ಕಳು: ಎಸ್ ಕೆ ಪಾಟೀಲ್ ಶಿರಹಟ್ಟಿ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿದ್ದಾರೆ. ಆದರೆ 3 ತಿಂಗಳಿಂದ ಶಾಲೆ ಕಡೆ ತಿರುಗಿ ನೋಡಿಲ್ಲ. ನವೆಂಬರ್, ಡಿಸೆಂಬರ್​ನಲ್ಲಿ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿಲ್ಲ. ಬಳಿಕ 2 ತಿಂಗಳು ಹಾಜರಾದಂತೆ ಸಹಿ ಹಾಕಿದ್ದಾರೆ. ಒಂದೇ ದಿನ ಹಾಜರಾತಿ ಪುಸ್ತಕಕ್ಕೆ ಸಹಿ ಮಾಡಿದ್ದಾರೆ. 2 ತಿಂಗಳಿಗೆ ಒಟ್ಟಿಗೆ ಸಹಿ ಮಾಡಿ ಮತ್ತೆ ಶಾಲೆಗೆ ರಜೆ ಹಾಕಿದ್ದಾರಂತೆ. ಎಸ್ ಕೆ ಪಾಟೀಲ್ ಗಣಿತ ಪಾಠ ಮಾಡುವ ಶಿಕ್ಷಕನಾಗಿದ್ದು, ಶಾಲೆಗೆ ಗೈರಾದ ಹಿನ್ನೆಲೆ ಗಣಿತ ಪಾಠ ಹಿಂದುಳಿದಿದೆ.

ಇನ್ನು ಶಿಕ್ಷಕ ಎಸ್ ಕೆ ಪಾಟೀಲ್ರನ್ನು ನಾವು ನೋಡೇ ಇಲ್ಲ ಅಂತ ಮಕ್ಕಳು ಹೇಳುತ್ತಿದ್ದಾರೆ. ಶಿಕ್ಷಕನ ವಿರುದ್ಧ ಕ್ರಮಕ್ಕೆ ಮುಖ್ಯ ಶಿಕ್ಷಕ ಮುಂದಾಗಿದ್ದಾರೆ. ಮರಳು ದಂಧೆ ಮಾಡುವ ಶಿಕ್ಷಕನಿಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 3 ತಿಂಗಳಿಂದ ಶಾಲೆಗೆ ಬರದಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅಂತ ಗ್ರಾಮಸ್ಥರು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿ ಟಿವಿ9 ಜೊತೆ ಮಾತನಾಡಿದ ಬಿಇಓ ಆರ್ ಎಸ್ ಬುರಡಿ, ಶಿಕ್ಷಕನ ಕಳ್ಳಾಟಕ್ಕೆ ನಾನು ಸಾಥ್ ನೀಡಿಲ್ಲ. ಶಿಕ್ಷಕನ ಎಸ್​ಕೆ ಪಾಟೀಲ್ ಕಳ್ಳಾಟದ ಬಗ್ಗೆ ಟಿವಿ9 ವರದಿ ಬಳಿಕ ಗೊತ್ತಾಗಿದೆ. ನನಗೆ ಈ ಬಗ್ಗೆ ಯಾರೂ ದೂರು ನೀಡಿಲ್ಲ. ಮುಖ್ಯ ಶಿಕ್ಷಕ, ಸಿಆರ್​ಸಿಗಳು ನನಗೆ ಯಾರೂ ಮಾಹಿತಿ ನೀಡಿಲ್ಲ. ತಕ್ಷಣ ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿ ಮೇಲಾಧಿಕಾರಿಗಳಿಗೆ ವರದಿ ನೀಡುತ್ತೇನೆ ಅಂತ ತಿಳಿಸಿದರು.

ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್: ಬೆಂಗಳೂರು: ಬೈಕ್ ಕದಿಯುತ್ತಿದ್ದ ಮೂವರು ಆರೋಪಿಗಳನ್ನ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ.  ಬಂಧಿತರಿಂದ 3 ಲಕ್ಷ ಮೌಲ್ಯದ 6 ಬೈಕ್​ಗಳು ಮತ್ತು 6 ಮೊಬೈಲ್​ಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ಅನ್ನಪೂರ್ಣೇಶ್ವರಿ ನಗರ, ವಿಜಯನಗರ, ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ

ನಿರ್ಬಂಧಿತ ಬದುಕಿಗೆ ಕಡೆಗೂ ಸಿಕ್ತು ಬಿಗ್ ರಿಲೀಫ್; ಕೆಲವೆಡೆ ಆಕ್ರೋಶ, ಶಾಲೆಗಳತ್ತ ವಿದ್ಯಾರ್ಥಿಗಳು

Ganesh Jayanti: ಇಂದು ಗಣೇಶ ಜಯಂತಿ! ಉತ್ತರ ಕರ್ನಾಟಕದಲ್ಲಿ ಶ್ರದ್ಧಾ ಭಕ್ತಿ ಸಡಗರದ ಮಾಘ ಶುಕ್ಲ ಗಣೇಶ ಚತುರ್ಥಿ

Published On - 8:56 am, Mon, 31 January 22

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!