AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಸರು ತುಂಬಿದ ರಸ್ತೆಯಲ್ಲಿ ಶವ ಸಾಗಿಸಲು ಪರದಾಡಿದ ಗ್ರಾಮಸ್ಥರು: ರಸ್ತೆ ದುರಸ್ಥಿಗೆ ಒತ್ತಾಯ

ಕೆಸರು ಶೇಖರಣೆಯಾದ ಹಳ್ಳವನ್ನು ದಾಟಲು ಗ್ರಾಮಸ್ಥರು ಪರದಾಡಿದ್ದಾರೆ. ಜಮೀನಿಗೆ ಹೋದಾಗ ಕರಿಯಪ್ಪ ಮಾಯನ್ನವರ (60) ಸಾವನ್ನಪ್ಪಿದ್ದರು. ಜಮೀನಿಂದ ಮೃತ ದೇಹವನ್ನು ತೆಗೆದುಕೊಂಡು ಬರಲು ಪರದಾಟ ನಡೆಸಿದ್ದಾರೆ.

ಕೆಸರು ತುಂಬಿದ ರಸ್ತೆಯಲ್ಲಿ ಶವ ಸಾಗಿಸಲು ಪರದಾಡಿದ ಗ್ರಾಮಸ್ಥರು: ರಸ್ತೆ ದುರಸ್ಥಿಗೆ ಒತ್ತಾಯ
ಮೃತ ರೈತ ಕರಿಯಪ್ಪ ಮಾಯನ್ನವರ.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 16, 2022 | 6:38 PM

Share

ಗದಗ: ಮೃತ ದೇಹವನ್ನು ಸಾಗಿಸಲು ಗ್ರಾಮಸ್ಥರು ಪರದಾಟ ನಡೆಸಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಕೆಸರು ಶೇಖರಣೆಯಾದ ಹಳ್ಳವನ್ನು ದಾಟಲು ಗ್ರಾಮಸ್ಥರು ಪರದಾಡಿದ್ದಾರೆ. ಜಮೀನಿಗೆ ಹೋದಾಗ ಕರಿಯಪ್ಪ ಮಾಯನ್ನವರ (60) ಸಾವನ್ನಪ್ಪಿದ್ದರು. ಜಮೀನಿಂದ ಮೃತ ದೇಹವನ್ನು ತೆಗೆದುಕೊಂಡು ಬರಲು ಪರದಾಟ ನಡೆಸಿದ್ದಾರೆ. ಹಳ್ಳದ ರಸ್ತೆಯನ್ನು ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಬಿಆರ್​ಟಿಎಸ್​ ಚಿಗರಿ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ

ಧಾರವಾಡ: ಚಲಿಸುತ್ತಿದ್ದ ಬಿಆರ್​ಟಿಎಸ್​ ಚಿಗರಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ಧಾರವಾಡದ ಆಲೂರು ವೆಂಕಟರಾವ್ ವೃತ್ತದಲ್ಲಿ ಘಟನೆ ಸಂಭವಿಸಿದೆ. ಚಿಗರಿ ಬಸ್​ನಲ್ಲಿ ಹೊಗೆ ಬರುತ್ತಿದ್ದಂತೆ ಪ್ರಯಾಣಿಕರು ಇಳಿದು ಓಡಿದ್ದಾರೆ. ನಂತರ ಚಾಲಕ ಖಾಲಿ ಜಾಗವಿರುವ ಕೋರ್ಟ್​ ವೃತ್ತದ BRTC​ ಕಾರಿಡಾರ್​ಗೆ ತಂದು ನಿಲ್ಲಿಸಲಾಗಿದೆ. BRTC​ ಬಸ್​ ಚಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಧಾರವಾಡದ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿಯ ಬೋರ್​ವೆಲ್​ಗೆ ಕ್ರೂಸರ್ ವಾಹನ​ ಡಿಕ್ಕಿ

ಬಾಗಲಕೋಟೆ: ರಸ್ತೆ ಬದಿಯ ಬೋರ್​ವೆಲ್​ಗೆ ಕ್ರೂಸರ್ ವಾಹನ​ ಡಿಕ್ಕಿಯಾಗಿ ಇಬ್ಬರು ಕ್ರೀಡಾಪಟುಗಳು ಸೇರಿ ಮೂವರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಶಿರಗುಪ್ಪಿ ಗ್ರಾಮದ ಹೊಸ ಪ್ಲಾಟ್ ಹತ್ತಿರ ನಡೆದಿದೆ. ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಕುಂದರಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ರೀಡಾಕೂಟ ಮುಗಿಸಿ ಊರಿಗೆ ವಾಪಸ್ಸಾಗುವಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಸರಣಿ ಅಪಘಾತದಲ್ಲಿ ಇಬ್ಬರ ದುರ್ಮರಣ

ದಾವಣಗೆರೆ: ಸರಣಿ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿದ ಘಟನೆ ದಾವಣಗೆರೆ ಹೊರವಲಯದ ಕಲ್ಪನಹಳ್ಳಿ ಬಳಿ ನಡೆದಿದೆ. ಶಿಕ್ಷಕಿ ಜ್ಯೋತಿ (43) ಕುಟುಂಬ ಸಮೇತರಾಗಿ ಪ್ರವಾಸಕ್ಕೆ ತೆರಳಿದ್ದರು. ಆದರೆ ಪ್ರವಾಸದಲ್ಲಿದ್ದಾಗಲೇ ಅವರ ಪತಿಗೆ ಹೃದಯಾಘಾತವಾಗಿದೆ. ಪರಿಣಾಮವಾಗಿ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಟ್ರ್ಯಾಕ್ಟರ್ ಹಾಗೂ ಬೈಕ್​ಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಆ್ಯಂಬುಲೆನ್ಸ್​ನಲ್ಲಿದ್ದ ಜ್ಯೋತಿ ಹಾಗೂ ಬೈಕ್ ಸವಾರ ಮಂಜುನಾಥ್ (68) ಸಾವನ್ನಪ್ಪಿದ್ದಾರೆ.

ಆ್ಯಂಬುಲೆನ್ಸ್ ಚಾಲಕ ಮೊಹಮ್ಮದ್ ಮೀರನ್ ಅವರಿಗೆ ತೀವ್ರ ಗಾಯಗಳಾಗಿವೆ. ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಕೆ.ಎಸ್ ಬಸವಂತಪ್ಪ ಅವರು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:31 pm, Fri, 16 September 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!