AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣೆಗಾಗಿ ಪಾದಯಾತ್ರೆ; ಪ್ರಧಾನಿಗೆ ಮನವಿ ಸಲ್ಲಿಸಲಿರುವ ಕಾರ್ಯಕರ್ತ

ಜಕ್ಕಳ್ಳಿ ಎಂಬ ಯುವಕ, ಹೊಸತೊಂದು ಕ್ರಾಂತಿಗೆ ಮುಂದಾಗಿದ್ದು, ಹೆಣ್ಣು ಭ್ರೂಣ ಹತ್ಯೆ ಹಾಗೂ ಅದನ್ನು ಪತ್ತೆ ಹಚ್ಚುವುದನ್ನು ತಪ್ಪಿಸಲು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾನೆ. ತಾಯಿಯ ಹೊಟ್ಟೆಯಲ್ಲಿರುವ ಭ್ರೂಣಕ್ಕೂ ಡಿಜಿಟಲ್ ಕೋಡ್ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು  ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣೆಗಾಗಿ ಪಾದಯಾತ್ರೆ; ಪ್ರಧಾನಿಗೆ ಮನವಿ ಸಲ್ಲಿಸಲಿರುವ ಕಾರ್ಯಕರ್ತ
ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣೆಗಾಗಿ ಪಾದಯಾತ್ರೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Oct 24, 2023 | 4:02 PM

Share

ಗದಗ , ಅ.24: ಹೆಣ್ಣು ಭ್ರೂಣ ಹತ್ಯೆ(Fetusicide) ನಿಯಂತ್ರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸಾಮಾಜಿಕ ಕಾರ್ಯಕರ್ತ ಸಿಎಂ ಜಕ್ಕಲಿ ಎನ್ನುವವರು ಕನ್ಯಾಕುಮಾರಿಯಿಂದ ದೆಹಲಿಯವರಿಗೆ ಪಾದಯಾತ್ರೆ ಮೂಲಕ ಜಾಗೃತಿ ನಡೆಸಿ, ಭ್ರೂಣ ಹತ್ಯೆ ಡಿಜಿಟಲ್ ಕೋಡ್ ಅಳವಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಇನ್ನು ಇಂದು(ಅ.24) ಗದಗ ನಗರಕ್ಕೆ ಈ ಪಾದಯಾತ್ರೆ ಆಗಮಿಸಿದ್ದು, ಗದಗ ಮಾರ್ಗವಾಗಿ ದೆಹಲಿಗೆ ಜನವರಿ 4 ಅಥವಾ 5 ರಂದು ತಲುಪಲಿದ್ದಾರೆ.

ಭ್ರೂಣಕ್ಕೂ ಡಿಜಿಟಲ್ ಕೋಡ್;ಕೇಂದ್ರ ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ

ಹೌದು, ಜಕ್ಕಳ್ಳಿ ಎಂಬ ಯುವಕ, ಹೊಸತೊಂದು ಕ್ರಾಂತಿಗೆ ಮುಂದಾಗಿದ್ದು, ಹೆಣ್ಣು ಭ್ರೂಣ ಹತ್ಯೆ ಹಾಗೂ ಅದನ್ನು ಪತ್ತೆ ಹಚ್ಚುವುದನ್ನು ತಪ್ಪಿಸಲು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾನೆ. ತಾಯಿಯ ಹೊಟ್ಟೆಯಲ್ಲಿರುವ ಭ್ರೂಣಕ್ಕೂ ಡಿಜಿಟಲ್ ಕೋಡ್ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು  ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ:ಮತ್ತೆ ಕಾಡುತ್ತಿದೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ; ಕಾನೂನುಬಾಹಿರ ಚಟುವಟಿಕೆಗಳ ತಡೆಗೆ ವಿಜಯಪುರ ಜಿಲ್ಲಾಡಳಿತದಿಂದ ಸಿದ್ಧತೆ

ಇನ್ನು ಪಕ್ಕದ ರಾಜ್ಯ ಕೇರಳಕ್ಕೆ ಹೊಲಿಕೆ ಮಾಡಿಕೊಂಡು ನಮ್ಮ ರಾಜ್ಯದ ಗಂಡು-ಹೆಣ್ಣು ಸಮಪಾತವನ್ನು ಕಲೆ ಹಾಕಿದರೆ, 100 ಜನಕ್ಕೆ ಶೇಕಡ 92 ರಷ್ಟು ಮಾತ್ರ ಹೆಣ್ಣು ಮಕ್ಕಳ ಸಂಖ್ಯೆಯಿದೆ. ಈ ಮಧ್ಯೆ ಹೆಣ್ಣು ಭ್ರೂಣವನ್ನು ಪತ್ತೆ ಹಚ್ಚುವುದು ತಾಯಿಯ ಹೊಟ್ಟೆಯಲ್ಲೇ ಹತ್ಯೆ ಮಾಡುವ ಪ್ರಕರಣಗಳು ಕೂಡ ಹೆಚ್ಚಾಗಿವೆ. ಈ ಹಿನ್ನಲೆ ಗರ್ಭಧಾರಣೆ ಮಾಡಿದ ತಾಯಿಯ ಹೊಟ್ಟೆಯಲ್ಲಿರುವ ಭ್ರೂಣಕ್ಕೂ ಒಂದು ಡಿಜಿಟಲ್ ಕೋಡ್ ನೀಡಿದ್ರೆ, ಹೆಣ್ಣು ಭ್ರೂಣ ಹತ್ಯೆ ತಡೆಯಬಹುದಾಗಿದೆ ಎಂದು ಪ್ರಧಾನಿ ಮೋದಿಯವರ ಬಳಿ ಡಿಜಿಟಲ್ ಕೋಡ್ ವಿಚಾರವನ್ನು ಪ್ರಸ್ಥಾಪಿಸಲು ಕನ್ಯಾಕುಮಾರಿಯಿಂದ ದೆಹಲಿಯವರೆಗೂ ಜಕ್ಕಳ್ಳಿಯವರು ಪಾದಯಾತ್ರೆ ನಡೆಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನ ಸೆಳೆಯಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Tue, 24 October 23

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!