AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪರ ಇಬ್ಬರು ಮಕ್ಕಳಿಗೆ ಅಧಿಕಾರ, ಈಶ್ವರಪ್ಪ ಪುತ್ರನಿಗೆ ಅನ್ಯಾಯ ಯಾಕೆ?: ಬೆಂಬಲಿಗರ ಪ್ರಶ್ನೆ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕದಲ್ಲಿ ಬಿಜೆಪಿ ಕುಟುಂಬ ರಾಜಕಾರಣದ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಸ್ವತಃ ಬಿಜೆಪಿ ನಾಯಕರೇ ಬಿಎಸ್ ಯಡಿಯೂರಪ್ಪ ಮತ್ತು ಕುಟುಂಬಸ್ಥರ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇದೀಗ ಗದಗದಲ್ಲಿ ನಡೆದ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಈಶ್ವರಪ್ಪ ಬೆಂಬಲಿಗರು ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪರ ಇಬ್ಬರು ಮಕ್ಕಳಿಗೆ ಅಧಿಕಾರ, ಈಶ್ವರಪ್ಪ ಪುತ್ರನಿಗೆ ಅನ್ಯಾಯ ಯಾಕೆ?: ಬೆಂಬಲಿಗರ ಪ್ರಶ್ನೆ
ಯಡಿಯೂರಪ್ಪರ ಇಬ್ಬರು ಮಕ್ಕಳಿಗೆ ಅಧಿಕಾರ, ಈಶ್ವರಪ್ಪ ಪುತ್ರನಿಗೆ ಅನ್ಯಾಯ ಯಾಕೆ? ಎಂದು ಗದಗದಲ್ಲಿ ಬೆಂಬಲಿಗರು ಮತ್ತು ಬಿಜೆಪಿ ಮುಖಂಡರು ಪ್ರಶ್ನಿಸಿದ್ದಾರೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: Rakesh Nayak Manchi|

Updated on: Mar 24, 2024 | 5:19 PM

Share

ಗದಗ, ಮಾ.24: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕದಲ್ಲಿ ಬಿಜೆಪಿ ಕುಟುಂಬ ರಾಜಕಾರಣದ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಸ್ವತಃ ಬಿಜೆಪಿ ನಾಯಕರೇ ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಕುಟುಂಬಸ್ಥರ (ಪುತ್ರರಾದ ಬಿವೈ ವಿಜಯೇಂದ್ರ ಮತ್ತು ಬಿವೈ ರಾಘವೇಂದ್ರ) ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇದೀಗ ಗದಗದಲ್ಲಿ (Gadag) ನಡೆದ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಕೆಎಸ್ ಈಶ್ವರಪ್ಪ (KS Eshwarappa) ಬೆಂಬಲಿಗರು ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ 31ಜಿಲ್ಲೆಗಳ ಪೈಕಿ ಈಶ್ವರಪ್ಪನವರ ಪರವಾಗಿ ಗಟ್ಟಿ ದ್ವನಿ ಎತ್ತಿದ್ದು ಹಾವೇರಿ-ಗದಗ ಕ್ಷೇತ್ರದಲ್ಲಿ ಮಾತ್ರ. ರಾಜ್ಯದ ಹಲವು ಕ್ಷೇತ್ರದಲ್ಲಿ ತಮ್ಮ-ತಮ್ಮ ಮಕ್ಕಳಿಗೆ ಟಿಕೆಟ್ ನೀಡಿದ್ದಾರೆ. ಆದರೆ, ಈಶ್ವರಪ್ಪನವರ ಮಗನಿಗೆ ಯಾಕೆ ಟಿಕೆಟ್ ನೀಡಲಿಲ್ಲ? ಈಶ್ವರಪ್ಪನವರು ಡಿಸಿಎಂ ಆಗಿದ್ದಾಗ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ದುಡಿದಿದ್ದಾರೆ. ದಕ್ಷಿಣ ಕನ್ನಡ ಭಾಗದಲ್ಲಿ ಬ್ರಾಹ್ಮಣ ಮಠಗಳಿಗೆ ಈಶ್ವರಪ್ಪನವರು ಸಾಕಷ್ಟು ಸಹಾಯ ಮಾಡಿದ್ದಾರೆ. ಹಿಗಿದ್ದರೂ ಯಾಕೆ ಕಾಂತೇಶ್​ಗೆ ಟಿಕೆಟ್ ನೀಡಲಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣನವರ ಆಕ್ರೋಶ ಹೊರಹಾಕಿದರು.

ಕಳೆದ ಬಾರಿ ಬಿಜೆಪಿಗೆ 25 ಸೀಟ್ ಬರಲು ಕುರುಬರ ಮತಗಳೇ ನಿರ್ಣಾಯಕವಾಗಿದ್ದವು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಾಸಕರಾಗಿದ್ದರೂ ಅವರಿಗೆ ಟಿಕೆಟ್ ನೀಡಿದ್ದು ಯಾಕೆ? ಇಡೀ ದೇಶದಲ್ಲಿ ಕುರುಬರಿಂದಲೇ ಹಿಂದುತ್ವ ಉಳಿದಿದೆ. ಇಂತಹ ಕುರುಬರಿಗೆ ಅನ್ಯಾಯ ಮಾಡಿದ್ದು ಎಷ್ಟು ಸರಿ? ಹಿಂದುತ್ವದ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಬಿಜೆಪಿ ತುಳಿಯುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ: ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೊಡಿಸಲು ಶೋಭಾರನ್ನು ಯಡಿಯೂರಪ್ಪ ಜೊತೆಗೆ ಕರೆದೊಯ್ದಿದ್ದರೆ? ಕೆಎಸ್ ಈಶ್ವರಪ್ಪ

ರಾಜ್ಯದಲ್ಲಿ ಬಿಜೆಪಿಗೆ 25 ಸೀಟ್ ಬರಬೇಕಂದರೆ ಬಿಜೆಪಿ ನಾಯಕರು ಈಶ್ವರಪ್ಪನವರ ಮನೆಗೆ ಹೋಗಿ ಕೈ-ಕಾಲು ಬಿದ್ದು ಕೆ.ಈ. ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕು. ಇಲ್ಲದಿದ್ದರೇ, ಕುರುಬ ಸಮುದಾಯ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತದೆ. ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಕುರುಬರು ಕೇಲಸ ಮಾಡಿದರೆ ಬಸವರಾಜ ಬೊಮ್ಮಾಯಿ ಅವರು ಗೆಲ್ಲುತ್ತಾರೆ. ಇಲ್ಲದಿದ್ದರೇ ನಿಮ್ಮ ಸೋಲು ಕಟ್ಟಿಟ್ಚ ಬುತ್ತಿ ಎಂದು ಎಚ್ಚರಿಕೆ ನೀಡಿದರು.

ಈಶ್ವರಪ್ಪನವರನ್ನು ಹೊರಗಿಟ್ಟು 28 ಸ್ಥಾನ ಗೆಲ್ಲುವ ತಾಕತ್ ಬಿಜೆಪಿಗೆ ಇಲ್ಲ. 28 ಸ್ಥಾನಗಳಲ್ಲಿ ಒಂದು ಸ್ಥಾನ ನೀಡಿ. ಕುರುಬ ಸಮುದಾಯಕ್ಕೆ ಒಂದು ಟಿಕೆಟ್ ಕೂಡ ನೀಡದೆ ಬಿಜೆಪಿ ಅಭ್ಯರ್ಥಿಗಳು ಪ್ರಚಾರಕ್ಕೆ ಬಂದರೆ ಕುರುಬ ಸಮುದಾಯದವರು ಬಹಿಷ್ಕರಿಸಿ ಎಂದು ಕರೆ ನೀಡಿದರು. ರಾಜ್ಯಾಧ್ಯಂತ ಮತ್ತೋಮ್ಮೆ ಸಭೆ ಕರೆದು ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರಿಗೆ ಮನವಿ ಮಾಡಿದರು.

ಹಿಂದೂಳಿದ ವರ್ಗದವರಿಗೆ 28 ಲೋಕಸಭಾ ಕ್ಷೇತ್ರದಲ್ಲಿ ನೀಡಲಿಲ್ಲ. ಮೇಲ್ವರ್ಗದ ಜಾತಿಯವರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದ್ದು, ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. 28ಕ್ಷೇತ್ರದಲ್ಲಿ ಯಾವುದೇ ಕ್ಷೇತ್ರಕ್ಕೂ ಟಿಕೆಟ್ ನೀಡದೇ ಅನ್ಯಾಯ ಮಾಡಿದ್ದಾರೆ. ಹಿಂದೂತ್ವದ ವಿಷಯದಲ್ಲಿ ಈಶ್ವರಪ್ಪನವರು ಬದ್ಧರಾಗಿದ್ದಾರೆ. ಯಡಿಯೂರಪ್ಪನವರು ತಮ್ಮ ಇಬ್ಬರು ಮಕ್ಕಳಿಗೆ ಸ್ಥಾನ-ಮಾನ ನೀಡಿದ್ದಾರೆ. ಆದರೆ, ಮಾತು ಕೋಟ್ಟು ನಮ್ಮ ಕೆ.ಈ. ಕಾಂತೇಶ್ ಅವರಿಗೆ ಅನ್ಯಾಯ ಮಾಡಿದ್ದಾರೆ ಎಂದು ತಾಲೂಕ ಪಂಚಾಯತ್ ಅಧ್ಯಕ್ಷ ಕಾಂತೇಶ್ ಜಗಳೂರು ಹೇಳಿದರು.

ಇದನ್ನೂ ಓದಿ: ಮೋದಿ ಹೇಳಿದ ಪರಿವಾರವಾದ ರಾಜ್ಯದಲ್ಲಿ ಮುಕ್ತವಾಗಬೇಕು: ಬಿಎಸ್​ವೈಗೆ ಸದಾನಂದಗೌಡ ಟಾಂಗ್

ಈ ವೇಳೆ ಮಾತನಾಡಿ ಬಿಜೆಪಿ ಮುಖಂಡ ಹಾಗೂ ಈಶ್ವರಪ್ಪ ಅಭಿಮಾನಿ ಬಳಗದ ಅಧ್ಯಕ್ಷ ಅರುಣ ಅಣ್ಣಿಗೇರಿ, ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪನವರಿಗೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಅವರ ಮಕ್ಕಳಿಂದ ಅನ್ಯಾಯ ಮಾಡಿದೆ ಅಂತ ಆರೋಪಿಸಿದರು. ಈಶ್ವರಪ್ಪ ಒಬ್ಬ ಹಿಂದುಳಿದ ವರ್ಗದ‌ ಧೀಮಂತ ನಾಯಕ. ಅವರಿಗೆ ಆಗಿರುವ ನೋವು, ಅನ್ಯಾಯಕ್ಕೆ ಅವರು ತೆಗೆದುಕೊಂಡ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದರು.

ಈಸ್ವರಪ್ಪ ಅವರಿಗೆ ನಾವು ಬೆಂಬಲ ಸೂಚಿಸುತ್ತೇವೆ. ನಿರಂತರವಾಗಿ ಬಿಜೆಪಿಯಲ್ಲಿ ಈಶ್ವರಪ್ಪನವರಿಗೆ ಅನ್ಯಾಯ ಆಗಿದೆ. ಹಿಂದೆ ಎಂಎಲ್​ಎ ಟಿಕೆಟ್ ತ್ಯಾಗ ಮಾಡಿದರೂ ನ್ಯಾಯ ದೊರಕಲಿಲ್ಲ. ಆಗ ಪ್ರಧಾನಿ ಮೋದಿ ಅವರು ಕರೆ ಮಾಡಿ ಮುಂದೆ ಸುವರ್ಣ ಅವಕಾಶ ಬರತ್ತದೆ, ತಾಳ್ಮೆಯಿಂದ ಇರಿ ಅಂತ ಹೇಳಿದ್ದರು. ಆಗ ಈಶ್ವರಪ್ಪನವರು ತಾಳ್ಮೆಯಿಂದ ಇದ್ದರು. ಆದರೆ ಈಗ ಲೋಕಸಭಾ ಚುನಾವಣೆ ಬಂದಿದೆ. ನಿನಗೆ ಟಿಕೆಟ್ ಕೊಡುತ್ತೇವೆ ಹಾವೇರಿ ಕ್ಷೇತ್ರದಲ್ಲಿ ಓಡಾಡುವಂತೆ ಯಡಿಯೂರಪ್ಪ ಹೇಳಿದ್ದರು. ನಾನೇ ಓಡಾಡಿ ಚುನಾಚಣೆ ಗೆಲ್ಲಿಸುತ್ತೇನೆ ಅಂದಿದ್ದರು. ಮಾತು ಕೊಟ್ಟಂತೆ ಯಡಿಯೂರಪ್ಪ ನಡೆದುಕೊಂಡಿಲ್ಲ ಅಂತ ಕಿಡಿಕಾರಿದರು.

ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ

ಹಾವೇರಿ-ಗದಗ ಟಿಕೇಟ್ ಕಾಂತೇಶ್ ಅವರಿಗೆ ನೀಡಲಿಲ್ಲ. ಯಡಿಯೂರಪ್ಪ ಮಕ್ಕಳಿಗೆ ಎಂಎಲ್ಎ, ಎಂಪಿ ಸ್ಥಾನ ನೀಡಲಾಗಿದೆ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಇದು ಸರಿನಾ ಅಂತ ಪ್ರಶ್ನೆ ಮಾಡಿದ್ದಾರೆ. ಹಾಗಾಗಿ ಶಿವಮೊಗ್ಗ ಕ್ಷೇತ್ರಕ್ಕೆ ಪಕ್ಷೇತರ ಅಬ್ಯರ್ಥಿಯಾಗಿ ಗೆಲ್ಲಿಸಿ ತರೋಕೆ ನಾವೆಲ್ಲರೂ ಪ್ರಯತ್ನಿಸುತ್ತೇವೆ. ಕೇವಲ ಶಿವಮೊಗ್ಗ ಅಲ್ಲ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಇದರ ಪರಿಣಾಮ ಆಗತ್ತೆ ಎಂದರು.

ಇನ್ನೂ ಬಿ ಫಾರ್ಮ ಕೊಟ್ಟಿಲ್ಲ, ಸರಿಪಡಿಸಿದರೆ ಉತ್ತಮ. ಹಾವೇರಿಯಲ್ಲಿ ಕಾಂತೇಶ್ ಅವರಿಗೆ ಟಿಕೇಟ್ ಕೊಟ್ಟರೆ ಒಳ್ಳೆದು. ಇಲ್ಲವಾದರೆ ಗದಗ-ಹಾವೇರಿ ಕ್ಷೇತ್ರಕ್ಕೂ ಪರಿಣಾಮ ಆಗತ್ತೆ ಎಂದರು. ಮೂಗು ಹಿಡಿದರೆನೇ ಬಾಯಿ ತೆರೆಯಬೇಕು. ಹಾಗಾಗಿ ಶಿವಮೊಗ್ಗಕ್ಕೆ ಲೋಕಸಭೆಗೆ ಈಶ್ವರಪ್ಪ ಪಕ್ಷೇತರವಾಗಿ ನಿಂತಿದ್ದಾರೆ. ಕೆಂದ್ರದ ನಾಯಕರ ಮೇಲೆ ಇನ್ನೂ ಆಶಾಭಾವನೆ ಇದೆ. ಮುಖಂಡರು ಮಾತುಕತೆ ಮಾಡಿ ಸಂಧಾನ ಮಾಡಲು ಹೋಗುತ್ತಿದ್ದಾರೆ. ಆದರೆ ಈಶ್ವರಪ್ಪ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ