ಗಾನವಿ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಆತ್ಮಹತ್ಯೆಗೆ ಕಾರಣ ಸೂರಜ್​​ ಅಲ್ಲ; ಮತ್ಯಾರು?

ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಮನನೊಂದ ಪತಿ ಸೂರಜ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ. ಗಾನವಿ ಹಿಂದಿನ ಪ್ರೀತಿ ಕಥೆಯೇ ಈ ರಾದ್ಧಾಂತಕ್ಕೆ ಕಾರಣ ಎಂಬ ಆರೋಪ ಈಗ ಕೇಳಿಬಂದಿದೆ. ಸೂರಜ್ ಕುಟುಂಬದವರು ಗಾನವಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದಳು ಎಂದು ದೂರಿದ್ದು, ಆಕೆಯ ಕುಟುಂಬದ ಆರೋಪ ಸುಳ್ಳು ಎಂದು ಎಫ್‌ಐಆರ್ ದಾಖಲಿಸಿದ್ದಾರೆ.

ಗಾನವಿ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಆತ್ಮಹತ್ಯೆಗೆ ಕಾರಣ ಸೂರಜ್​​ ಅಲ್ಲ; ಮತ್ಯಾರು?
ಗಾನವಿ-ಸೂರಜ್​​

Updated on: Dec 28, 2025 | 1:12 PM

ಬೆಂಗಳೂರು, ಡಿಸೆಂಬರ್​​ 28: ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳ ಸಾವಿಗೆ ಆಕೆಯ ಗಂಡನ ಕುಟುಂಬವೇ ಕಾರಣ. ಆತ ಗಂಡಸೇ ಅಲ್ಲ ಎಂದು ದೂರಿದ್ದ ಗಾನವಿ ಕುಟುಂಬದ ವಿರುದ್ಧವೇ ಈಗ ಎಫ್​​ಐಆರ್​​ ದಾಖಲಾಗಿದೆ. ತನ್ನ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಕೂಡ ಕೇಳಿಬಂದಿದ್ದ ಕಾರಣ ಮನನೊಂದಿದ್ದ ಗಾನವಿ ಪತಿ ಸೂರಜ್​​ ಕೂಡ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಜೊತೆ ಆತನ ತಾಯಿ ಜಯಂತಿಯೂ ಸೂಸೈಡ್​​ ಯತ್ನ ಮಾಡಿದ್ದರು. ಇಷ್ಟೆಲ್ಲ ರಾದ್ಧಾಂತಕ್ಕೆ ಗಾನವಿ ಲವ್​​ ಸ್ಟೋರಿಯೇ ಕಾರಣ ಎಂಬ ಹೊಸ ಆರೋಪ ಈಗ ಕೇಳಿಬಂದಿದೆ.

ಹೌದು, ಮೃತ ಗಾನವಿ ಮೇಲೆಯೇ ಸೂರಜ್​​ ಕುಟುಂಬಸ್ಥರು ಈಗ ಹೊಸ ಆರೋಪ ಮಾಡಿದ್ದಾರೆ. ಗಾನವಿ ಈ ಹಿಂದೆ ಹರ್ಷಾ ಎಂಬಾತನನ್ನ ಪ್ರೀತಿ ಮಾಡುತ್ತಿದ್ದಳು. ಆತನನ್ನೆ ಮದುವೆಯಾಗ್ಬೇಕು ಎಂದು ನಿರ್ಧರಿಸಿದ್ದಳು. ಆದರೆ ಮನೆಯವರ ಒತ್ತಾಯಕ್ಕೆ ಗಾನವಿ ಸೂರಜ್​​ನ ಮದುವೆಯಾಗಿದ್ದಾಳೆ. ಶ್ರೀಲಂಕಾಗೆ ಹನಿಮೂನ್​​ಗೆ ಹೋದಾಗ ಪ್ರೀತಿ ವಿಚಾರವನ್ನು ಆಕೆಯೇ ಸೂರಜ್​​ಗೆ ತಿಳಿಸಿದ್ದಳು. ಈ ವಿಚಾರ ಕೇಳಿ ಆತ ಶಾಕ್​​ ಆಗಿದ್ದ. ಹೀಗಾಗಿಯೇ ಹನಿಮೂನ್​​ಗೆ ತೆರಳಿದ್ದ ಅವರು ಅರ್ಧಕ್ಕೇ ಬೆಂಗಳೂರಿಗೆ ಹಿಂದಿರುಗಿದ್ದರು. ನಂತರ ಗಾನವಿಯನ್ನ ತಮ್ಮ ಮನೆಗೆ ಅವರ ಕುಟುಂಬಸ್ಥರು ಕರೆದೊಯ್ದಿದ್ದು, ಡಿಸೆಂಬರ್​​ 24ರಂದು ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆ ಬಳಿಕ ಸೂರಜ್​​ ಮೇಲೆ ಆಕೆಯ ತಾಯಿ ರುಕ್ಮಿಣಿ ಕಿರುಕುಳ ಆರೋಪ ಹೊರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ನವವಿವಾಹಿತೆ ದುರಂತ ಸಾವು; ಹನಿಮೂನ್​​ನಲ್ಲಿ ಆಗಿದ್ದೇನು?

ಫ್ಯಾಮಿಲಿ ಮೇಲೆ ವಿದ್ಯಾರಣ್ಯಪುರ ಠಾಣೆಯಲ್ಲಿ ವರದಕ್ಷಿಣೆ ಕೇಸ್ ದಾಖಲಾದ ಬಳಿಕ ಮಹಾರಾಷ್ಟ್ರಕ್ಕೆ ಸೂರಜ್ ಮತ್ತು ಆತನ ತಾಯಿ ಜಯಂತಿ ತೆರಳಿದ್ದರು. ಆರೋಪದಿಂದ ನೊಂದಿದ್ದ ಸೂರಜ್​​ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಸೂರಜ್​​ ಭಾವ ರಾಜ್​​ಕುಮಾರ್​​ ವಿದ್ಯಾರಣ್ಯಪುರ ಪೊಲೀಸ್​​ ಠಾಣೆಗೆ ದೂರು ನೀಡಿದ್ದು, ಗಾನವಿ ಪ್ರೀತಿ ವಿಚಾರ ಮುಚ್ಚಿಟ್ಟು ಸುಳ್ಳು ಅಪಪ್ರಚಾರ ಮಾಡಲಾಗ್ತಿದೆ. ಸೂರಜ್ ಸಾವಿಗೆ ಗಾನವಿ, ಆಕೆಯ ತಾಯಿ ರುಕ್ಮಿಣಿ, ರಾಧಾ, ಬಾಬುಗೌಡ, ಸತೀಶ್ ಕಾರಣ ಎಂದು ದೂರಿದ್ದಾರೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:05 pm, Sun, 28 December 25