AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಕ್ಕಳ ಕನ್ನಡ ಪ್ರಾಥಮಿಕ ಶಾಲೆಯನ್ನು ಖಾಲಿ ಮಾಡಿಸಲು ಮುಂದಾದ ಹುಬ್ಬಳ್ಳಿಯ ಗಾಂಧಿವಾಡ ಸೊಸೈಟಿ

ಗಾಂಧಿವಾಡ ಕೋ ಆಪರೇಟಿವ್ ಸೊಸೈಟಿಯಿಂದ ಜಾಗ ಖರೀದಿಸಿದ್ದು, ನಂತರ ಅದನ್ನು ಲೇಔಟ್ ಮಾಡಿ ಜಾಗ ಮಾರಾಟ ಮಾಡಲಾಗಿತ್ತು. ಈ ಜಾಗವನ್ನು ಶಾಲಾ ಕಟ್ಟಡಕ್ಕೆ ನೀಡಿದ್ದ ಗಾಂಧಿವಾಡ ಸೊಸೈಟಿ ಈಗ ಜಾಗ ಖಾಲಿ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

ಹೆಣ್ಣು ಮಕ್ಕಳ ಕನ್ನಡ ಪ್ರಾಥಮಿಕ ಶಾಲೆಯನ್ನು ಖಾಲಿ ಮಾಡಿಸಲು ಮುಂದಾದ ಹುಬ್ಬಳ್ಳಿಯ ಗಾಂಧಿವಾಡ ಸೊಸೈಟಿ
ಶಾಲೆ ಖಾಲಿ ಮಾಡುತ್ತಿರುವ ದೃಶ್ಯ
preethi shettigar
|

Updated on: Mar 10, 2021 | 5:57 PM

Share

ಹುಬ್ಬಳ್ಳಿ: ನಗರದ ಹರಿಜನ ಸರ್ಕಾರಿ ಅನುದಾನಿತ ಶಾಲೆ ಎದುರು ಗಾಂಧಿವಾಡ ಸೊಸೈಟಿ ಮತ್ತು ಸ್ಥಳೀಯ ನಿವಾಸಿಗಳ ಮಧ್ಯೆ ವಾಗ್ವಾದ ನಡೆದಿದೆ. ಗಾಂಧಿವಾಡ ಸೊಸೈಟಿಯ ಜನರು ಶಾಲೆ ಖಾಲಿ ಮಾಡಿಸಲು ಮುಂದಾಗಿದ್ದು, 1956 ರಲ್ಲಿ ಆರಂಭವಾಗಿದ್ದ ಕನ್ನಡ ಸರ್ಕಾರಿ ಪ್ರಾಥಮಿಕ ಶಾಲೆಗೆ ಈಗ ಕಂಟಕ ಎದುರಾಗಿದೆ.

ಗಾಂಧಿವಾಡ ಕೋ ಆಪರೇಟಿವ್ ಸೊಸೈಟಿಯಿಂದ ಜಾಗ ಖರೀದಿಸಿದ್ದು, ನಂತರ ಅದನ್ನು ಲೇಔಟ್ ಮಾಡಿ ಜಾಗ ಮಾರಾಟ ಮಾಡಲಾಗಿತ್ತು. ಈ ಜಾಗವನ್ನು ಶಾಲಾ ಕಟ್ಟಡಕ್ಕೆ ನೀಡಿದ್ದ ಗಾಂಧಿವಾಡ ಸೊಸೈಟಿ ಈಗ ಜಾಗ ಖಾಲಿ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್‌ನಲ್ಲಿ ದಾವೆ ಹಾಕಿದ್ದ ಗಾಂಧಿವಾಡ ಸೊಸೈಟಿಯವರು ಜಾಗವನ್ನು ಶಾಲೆಯವರು ಖಾಲಿ ಮಾಡುವಂತೆ ನ್ಯಾಯಾಲಯ‌ ಹೇಳಿದೆ ಎಂದು ತಿಳಿಸದ್ದಾರೆ. ಇನ್ನು ಕೋರ್ಟ್‌‌ ಹೇಳಿದೆ ಎಂದು ಹೇಳುತ್ತಿರುವ ಸೊಸೈಟಿಯವರು ಒಂದು ಕಡೆಯಾದರೆ, ಕೋರ್ಟ್‌ ಆದೇಶದಲ್ಲಿ ಕಟ್ಟಡ ಖಾಲಿ ಮಾಡಿಸುವಂತೆ ಹೇಳಿಲ್ಲ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ಶಾಲೆಯಲ್ಲಿನ ಮೇಜು ಹಾಗೂ ಬೆಂಚ್​ಗಳನ್ನು ಹೊರಗಡೆ ಹಾಕಿದರೆ ನಾವು ಎಲ್ಲಿ ಕುಳಿತು ಪಾಠ ಕೇಳಬೇಕು. ನಮ್ಮನ್ನು ಓದಲು ಬಿಡಿ. ನಾನು ಚೆನ್ನಾಗಿ ಓದಿ ಪೋಲೀಸ್ ಆಗಬೇಕು ಎಂದು ಇದ್ದೇನೆ ಹೇಗಾದರು ಮಾಡಿ ನಮ್ಮ ಶಾಲೆಯನ್ನು ನಮಗೆ ಉಳಿಸಿಕೊಡಿ ಎಂದು ಕನ್ನಡ ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಸಂಜನಾ ತಮ್ಮ ಅಳಲು ತೋಡಿಕೊಂಡಿದ್ದಾಳೆ.

ಗಾಂಧಿವಾಡ ಸಿಬ್ಬಂದಿಗಳು ಶಾಲಾ ಪೀಠೋಪಕರಣಗಳನ್ನು ಹೊರಗಡೆ ಹಾಕಿದ್ದಾರೆ. ಇನ್ನು ಇದೆಲ್ಲವನ್ನು ಶಾಲೆಯ ಆವರಣದಲ್ಲಿ ನಿಂತು ನೋಡುತ್ತಿದ್ದ ಶಾಲೆಯಲ್ಲಿ ಓದುತ್ತಿದ್ದ ಹೆಣ್ಣು ಮಕ್ಕಳು ಕಣ್ಣಿರು ಸುರಿಸಿದ್ದಾರೆ. ಈ ವಿಚಾರ ವಿಕೋಪಕ್ಕೆ ಹೋದಾಗ ಗಾಂಧಿವಾಡ ಸೊಸೈಟಿ ಜನರು ಪೊಲೀಸರನ್ನು ಕರೆತಂದಿದ್ದಾರೆ. ಸದ್ಯ ಎಸಿಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಹಾಕಲಾಗಿದೆ.

ಇದನ್ನೂ ಓದಿ: Private School Fees: ಶುಲ್ಕ ಕಡಿತ ಆದೇಶ ಖಂಡಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಬೃಹತ್ ಸಮಾವೇಶ

ಇದನ್ನೂ ಓದಿ: Schools Reopen: ಇಂದಿನಿಂದ 6, 7, 8 ನೇ ತರಗತಿಗಳು ಆರಂಭ, ಹೊಸ ಗೈಡ್‌ಲೈನ್ಸ್‌ನೊಂದಿಗೆ ಕ್ಲಾಸ್ ಆರಂಭಕ್ಕೆ ತಯಾರಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!