AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

ವಿನಾಯಕ ಚೌತಿ ಪ್ರಯುಕ್ತ ಕೆಎಸ್​ಆರ್​ಟಿಸಿ ಕರ್ನಾಟಕದ ವಿವಿಧ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಿಗೆ ಹೆಚ್ಚುವರಿ 1500 ಬಸ್​ಗಳನ್ನು ನಿಯೋಜಿಸಿದೆ. ಯಾವೆಲ್ಲ ಊರಿಗಳಿಗೆ ವಿಶೇಷ ಬಸ್​ ಸೌಕರ್ಯ ಇದೆ? ಟಿಕೆಟ್ ಬುಕಿಂಗ್ ಹೇಗೆ? ಮುಂಗಡ ಕಾಯ್ದಿರಿಸುವಿಕೆಗೆ ರಿಯಾಯಿತಿ ಇದೆಯೇ? ಇತ್ಯಾದಿ ವಿವರ ಇಲ್ಲಿದೆ.

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್
ಕೆಎಸ್‌ಆರ್‌ಟಿಸಿ ಬಸ್​​
TV9 Web
| Edited By: |

Updated on:Sep 03, 2024 | 2:42 PM

Share

ಬೆಂಗಳೂರು, ಸೆಪ್ಟೆಂಬರ್ 3: ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚಿದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ. ಬೆಂಗಳೂರಿನಿಂದ ಸಾಮಾನ್ಯ ವೇಳಾಪಟ್ಟಿಯನ್ನು ಹೊರತುಪಡಿಸಿ ಅನೇಕ ಸ್ಥಳಗಳಿಗೆ ಹೆಚ್ಚುವರಿ 1,500 ವಿಶೇಷ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಘೋಷಿಸಿದೆ.

ಎಲ್ಲಿಗೆಲ್ಲ ವಿಶೇಷ ಬಸ್?

ಕೆಎಸ್‌ಆರ್‌ಟಿಸಿ ವಿಶೇಷ ಬಸ್​​ಗಳು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹಲವು ಪ್ರಮುಖ ಸ್ಥಳಗಳಿಗೆ ಸಂಚರಿಸಲಿವೆ. ತಿರುಪತಿ, ವಿಜಯವಾಡ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ವಿಜಯಪುರ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮತ್ತು ಹೈದರಾಬಾದ್ ಸೇರಿದಂತೆ ಇತರೆ ಕಡೆಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್​​ಗಳು ಸಂಚರಿಸಲಿದೆ.

ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಪಿರಿಯಾಪಟ್ಟಣ, ವಿರಾಜಪೇಟೆ, ಮೈಸೂರು, ಹುಣಸೂರು, ಕುಶಾಲನಗರ ಮತ್ತು ಮಡಿಕೇರಿ ಸೇರಿದಂತೆ ಪ್ರಮುಖ ಸ್ಥಳಗಳಿಗೆ ತೆರಳಲಿವೆ ಎಂದು ಕೆಎಸ್ಆರ್​​ಟಿಸಿ ತಿಳಿಸಿದೆ.

ವಿಶೇಷ ಬಸ್​​ಗಳಿಗೆ ಟಿಕೆಟ್ ಬುಕಿಂಗ್ ಹೇಗೆ?

ವಿಶೇಷ ಹಾಗೂ ಹೆಚ್ಚುವರಿ ಬಸ್​ಗಳ ಪ್ರಯಾಣದ ಸಮಯ ಹಾಗೂ ದರದ ಬಗ್ಗೆ ಕೆಎಸ್‌ಆರ್‌ಟಿಸಿ ಮೊಬೈಲ್​ ಆ್ಯಪ್​ ಹಾಗೂ https://www.ksrtc.in/ ವೆಬ್​ಸೈಟ್​​ ಮೂಲಕ ಸಂಸ್ಥೆ ಮಾಹಿತಿ ನೀಡಲಿದೆ. ಇವುಗಳ ಮೂಲಕವೇ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಕರ್ನಾಟಕದಾದ್ಯಂತ ಬಸ್​​ ನಿಲ್ದಾಣಗಳಲ್ಲಿನ ಹಾಗೂ ನೆರೆ ರಾಜ್ಯಗಳ ಕೆಎಸ್‌ಆರ್‌ಟಿಸಿ ಕೌಂಟರ್​ಗಳ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಇದನ್ನೂ ಓದಿ: ಟಿವಿ9 ವರದಿ ಫಲಶೃತಿ: ಗ್ರಾಮಕ್ಕೆ ಬಂತು ಸರ್ಕಾರಿ ಬಸ್, ಶಾಲಾ ಬಾಲಕಿಯರು ಫುಲ್​​ ಖುಷ್​

ಒಬ್ಬ ವ್ಯಕ್ತಿಯು ಒಂದು ಬುಕಿಂಗ್​ಗೆ 4 ಅಥವಾ 5 ಮಂದಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ 5ರ ರಿಯಾಯಿತಿ ನೀಡುವುದಾಗಿಯೂ ಕೆಎಸ್‌ಆರ್‌ಟಿಸಿ ಘೋಷಿಸಿದೆ. ರಿಟರ್ನ್ ಟಿಕೆಟ್ ಕೂಡ ಒಟ್ಟಿಗೇ ಕಾಯ್ದಿರಿಸಿದರೆ ಶೇ 10ರ ರಿಯಾಯಿತಿ ದೊರೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:53 am, Tue, 3 September 24

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ