AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

ವಿನಾಯಕ ಚೌತಿ ಪ್ರಯುಕ್ತ ಕೆಎಸ್​ಆರ್​ಟಿಸಿ ಕರ್ನಾಟಕದ ವಿವಿಧ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಿಗೆ ಹೆಚ್ಚುವರಿ 1500 ಬಸ್​ಗಳನ್ನು ನಿಯೋಜಿಸಿದೆ. ಯಾವೆಲ್ಲ ಊರಿಗಳಿಗೆ ವಿಶೇಷ ಬಸ್​ ಸೌಕರ್ಯ ಇದೆ? ಟಿಕೆಟ್ ಬುಕಿಂಗ್ ಹೇಗೆ? ಮುಂಗಡ ಕಾಯ್ದಿರಿಸುವಿಕೆಗೆ ರಿಯಾಯಿತಿ ಇದೆಯೇ? ಇತ್ಯಾದಿ ವಿವರ ಇಲ್ಲಿದೆ.

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್
ಕೆಎಸ್‌ಆರ್‌ಟಿಸಿ ಬಸ್​​
TV9 Web
| Edited By: |

Updated on:Sep 03, 2024 | 2:42 PM

Share

ಬೆಂಗಳೂರು, ಸೆಪ್ಟೆಂಬರ್ 3: ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚಿದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ. ಬೆಂಗಳೂರಿನಿಂದ ಸಾಮಾನ್ಯ ವೇಳಾಪಟ್ಟಿಯನ್ನು ಹೊರತುಪಡಿಸಿ ಅನೇಕ ಸ್ಥಳಗಳಿಗೆ ಹೆಚ್ಚುವರಿ 1,500 ವಿಶೇಷ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಘೋಷಿಸಿದೆ.

ಎಲ್ಲಿಗೆಲ್ಲ ವಿಶೇಷ ಬಸ್?

ಕೆಎಸ್‌ಆರ್‌ಟಿಸಿ ವಿಶೇಷ ಬಸ್​​ಗಳು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹಲವು ಪ್ರಮುಖ ಸ್ಥಳಗಳಿಗೆ ಸಂಚರಿಸಲಿವೆ. ತಿರುಪತಿ, ವಿಜಯವಾಡ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ವಿಜಯಪುರ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮತ್ತು ಹೈದರಾಬಾದ್ ಸೇರಿದಂತೆ ಇತರೆ ಕಡೆಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್​​ಗಳು ಸಂಚರಿಸಲಿದೆ.

ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಪಿರಿಯಾಪಟ್ಟಣ, ವಿರಾಜಪೇಟೆ, ಮೈಸೂರು, ಹುಣಸೂರು, ಕುಶಾಲನಗರ ಮತ್ತು ಮಡಿಕೇರಿ ಸೇರಿದಂತೆ ಪ್ರಮುಖ ಸ್ಥಳಗಳಿಗೆ ತೆರಳಲಿವೆ ಎಂದು ಕೆಎಸ್ಆರ್​​ಟಿಸಿ ತಿಳಿಸಿದೆ.

ವಿಶೇಷ ಬಸ್​​ಗಳಿಗೆ ಟಿಕೆಟ್ ಬುಕಿಂಗ್ ಹೇಗೆ?

ವಿಶೇಷ ಹಾಗೂ ಹೆಚ್ಚುವರಿ ಬಸ್​ಗಳ ಪ್ರಯಾಣದ ಸಮಯ ಹಾಗೂ ದರದ ಬಗ್ಗೆ ಕೆಎಸ್‌ಆರ್‌ಟಿಸಿ ಮೊಬೈಲ್​ ಆ್ಯಪ್​ ಹಾಗೂ https://www.ksrtc.in/ ವೆಬ್​ಸೈಟ್​​ ಮೂಲಕ ಸಂಸ್ಥೆ ಮಾಹಿತಿ ನೀಡಲಿದೆ. ಇವುಗಳ ಮೂಲಕವೇ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಕರ್ನಾಟಕದಾದ್ಯಂತ ಬಸ್​​ ನಿಲ್ದಾಣಗಳಲ್ಲಿನ ಹಾಗೂ ನೆರೆ ರಾಜ್ಯಗಳ ಕೆಎಸ್‌ಆರ್‌ಟಿಸಿ ಕೌಂಟರ್​ಗಳ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಇದನ್ನೂ ಓದಿ: ಟಿವಿ9 ವರದಿ ಫಲಶೃತಿ: ಗ್ರಾಮಕ್ಕೆ ಬಂತು ಸರ್ಕಾರಿ ಬಸ್, ಶಾಲಾ ಬಾಲಕಿಯರು ಫುಲ್​​ ಖುಷ್​

ಒಬ್ಬ ವ್ಯಕ್ತಿಯು ಒಂದು ಬುಕಿಂಗ್​ಗೆ 4 ಅಥವಾ 5 ಮಂದಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ 5ರ ರಿಯಾಯಿತಿ ನೀಡುವುದಾಗಿಯೂ ಕೆಎಸ್‌ಆರ್‌ಟಿಸಿ ಘೋಷಿಸಿದೆ. ರಿಟರ್ನ್ ಟಿಕೆಟ್ ಕೂಡ ಒಟ್ಟಿಗೇ ಕಾಯ್ದಿರಿಸಿದರೆ ಶೇ 10ರ ರಿಯಾಯಿತಿ ದೊರೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:53 am, Tue, 3 September 24

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು