AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬಕ್ಕೆ ಊರಿನತ್ತ ಜನ: ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್, ಎಲ್ಲೆಲ್ಲಿ ?

ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಇರುವ ಕಾರಣ ಸಾಕಷ್ಟು ಜನರು ಇಂದು ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಹೀಗಾಗಿ ನಗರದ ಮೆಜೆಸ್ಟಿಕ್, ಕೆ.ಆರ್.ಪುರಂ, ಆನಂದ್ ರಾವ್ ಸರ್ಕಲ್​ ಸೇರಿದಂತೆ ಹಲವೆಡೆ ಸಾಕಷ್ಟು ಸಂಚಾರ ದಟ್ಟಣೆ ಉಂಟಾಗಿದೆ. ವಾಹನ ಸವಾರರು ಪರದಾಡಿದ್ದಾರೆ.

ಗಣೇಶ ಹಬ್ಬಕ್ಕೆ ಊರಿನತ್ತ ಜನ: ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್, ಎಲ್ಲೆಲ್ಲಿ ?
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Sep 06, 2024 | 9:50 PM

ಬೆಂಗಳೂರು, ಸೆಪ್ಟೆಂಬರ್​ 06: ಶನಿವಾರದಂದು ಕರ್ನಾಟಕದಾದ್ಯಂತ ಗಣೇಶ ಹಬ್ಬವನ್ನು (Ganesh Chaturthi) ಆಚರಿಸಲಾಗುತ್ತಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ನಿಟ್ಟಿನಲ್ಲಿ ನಗರದ ಹಲವೆಡೆ ಟ್ರಾಫಿಕ್​ ಜಾಮ್​ ಉಂಟಾಗಿದೆ. ಕೆ.ಆರ್.ಪುರಂನ ಐಟಿಐ ಗೇಟ್, ಆನಂದ್ ರಾವ್ ಸರ್ಕಲ್​ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು, ಸವಾರರು ಪರದಾಡಿದ್ದಾರೆ.

ಎಲ್ಲೆಲ್ಲಿ ಟ್ರಾಫಿಕ್​ ಜಾಮ್

ಹೂಡಿ ಸರ್ಕಲ್ ಹತ್ತಿರ ಅಯ್ಯಪ್ಪ ನಗರ ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿರುವ ಕಾರಣ ಅಯ್ಯಪ್ಪ ನಗರದ ಕಡೆಗೆ ಹಾಗೂ ಐಟಿಪಿಎಲ್ ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು ವಾಹನಗಳ ದಟ್ಟಣೆಯನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದು ಹಾಗೂ KSRTC ವತಿಯಿಂದ ಹೆಚ್ಚುವರಿಯಾಗಿ ಬಸ್ ಬಿಟ್ಟಿರುವ ಹಿನ್ನೆಲೆ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆಯಾಗುವ ಕಾರಣ ಸಾರ್ವಜನಿಕರು ಬದಲಿ ರಸ್ತೆ ಮೂಲಕ ಸಂಚರಿಸುವಂತೆ ಉಪ್ಪಾರಪೇಟೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಅದೇ ರೀತಿಯಾಗಿ ವರ್ತೂರು ಗುಂಜೂರು ರಸ್ತೆಯಲ್ಲಿ ಹಬ್ಬ ಹಿನ್ನಲೆ ಶಾಪಿಂಗ್‌ನಿಂದಾಗಿ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: ಗಣೇಶ ಹಬ್ಬ: ಬಸ್​​​ ಟಿಕೆಟ್​ ದರ ಸುಲಿಗೆ ಕಡಿವಾಣಕ್ಕೆ ಮುಂದಾದ ಆರ್​ಟಿಓ, ರಾಜ್ಯಾದ್ಯಂತ ಇಂದು, ನಾಳೆ ಕಾರ್ಯಾಚರಣೆ

ರಾತ್ರಿಯಾಗುತ್ತಿದ್ದಂತೆ​ ಕೆಎಸ್ಆರ್​ಟಿಸಿಯತ್ತ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ತಮ್ಮ ತಮ್ಮ ಊರುಗಳಿಗೆ ಹೋಗಲು ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಟರ್ಮಿನಲ್-1ರಲ್ಲಿ ಜನಜಂಗುಳಿ ಉಂಟಾಗಿದೆ.

ಹುಬ್ಬಳ್ಳಿ, ಬಳ್ಳಾರಿ, ಧಾರವಾಡ, ಗದಗ, ಬೆಳಗಾವಿ, ಹೊಸಪೇಟೆ, ಯಲಬುರ್ಗಾ, ಗಂಗಾವತಿ, ಜಮಖಂಡಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕ ವಿವಿಧೆಡೆ ಭಾಗಕ್ಕೆ ಬಸ್​​ಗಳು ತೆರಳುತ್ತಿವೆ.

ಹಬ್ಬಕ್ಕೆ ಊರಿನ ಕಡೆ ಮುಖ ಮಾಡಿದ ಜನರಿಗೆ ಟಿಕೆಟ್ ದುಬಾರಿಯಿಂದ ಜೇಬಿಗೆ ಕತ್ತರಿ ಬಿದ್ದಿದೆ. ಟಿಕೆಟ್ ದರ ಹೆಚ್ಚಾದರೂ ದೇವರ ಪೂಜೆಗೆಂದು ಜನರು ತೆರಳುತ್ತಿದ್ದಾರೆ. ಆನಂದ್ ರಾವ್ ಸರ್ಕಲ್ ಬಳಿ ದುಬಾರಿ ಟಿಕೆಟ್ ದರದ ಬಗ್ಗೆ ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ. ನಾರ್ಮಲ್ ದಿನಗಳಲ್ಲಿ ಒಂದು ರೀತಿಯ ಟಿಕೆಟ್ ದರ ಇರುತ್ತೆ, ಹಬ್ಬಗಳ ದಿನದ ವೇಳೆ ದರ ಏರಿಕೆ ಆಗತ್ತೆ.‌ ಮಧ್ಯಮ ವರ್ಗದವರು ಏನು ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ: ಗಣೇಶ ಹಬ್ಬ ಪ್ರಯುಕ್ತ NWKRTCಯಿಂದ ಪ್ರಯಾಣಿಕರಿಗೆ ಗಿಫ್ಟ್​​: ಸೀಟ್​ ಬುಕ್ಕಿಂಗ್​ನಲ್ಲಿ ರಿಯಾತಿ

ಸರ್ಕಾರ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಬಿಟ್ಟಿದೆ. ಅಲ್ಲಿ ರಶ್ ಅಂತ ಖಾಸಗಿ ಬಸ್​ಗೆ ಬರುತ್ತೇವೆ. ಆದರೆ ಇವರು ಇದನ್ನೇ ಬಂಡವಾಳವಾಗಿ ಮಾಡಿಕೊಂಡಿದ್ದಾರೆ. ಇರುವ ಹಣಕ್ಕೆ ಡಬಲ್ ಟಿಕೆಟ್ ಮಾಡಿದ್ದಾರೆ. ಟಿಕೆಟ್ ದರ ನೋಡಿ ಬೇಸರವಾಗತ್ತೆ. ಆದರೆ ಊರಿಗೆ ಹೋಗಲೇಬೇಕು. ದೇವರ ಪೂಜೆ ಮಾಡಲೇಬೇಕು ಎನ್ನುತ್ತಿದ್ದಾರೆ ಜನರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Fri, 6 September 24

ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್