AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಗಂಗಾವತಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 10 ಆರೋಪಿಗಳ ಬಂಧನದ ಬೆನ್ನಲ್ಲೇ ಹೊರಬಂತು ಸತ್ಯ!

ಜಿಲ್ಲೆಯ ಗಂಗಾವತಿ ನಗರವನ್ನು ಬೆಚ್ಚಿಬೀಳಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಮೃತರ ಸ್ನೇಹಿತ ರವಿಯೇ ಆರೊಪಿಯಿರಬಹುದು ಎಂಬ ಶಂಕೆ ಈ ಹಿಂದೆ ವ್ಯಕ್ತವಾಗಿತ್ತು. ಇದೀಗ ದೃಢಪಟ್ಟಿದೆ. ಈ ಪ್ರಕರಣದ ಹಿನ್ನೆಲೆ ಪ್ರಮುಖ ಆರೋಪಿ ರವಿ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.

ಗಂಗಾವತಿ: ಗಂಗಾವತಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 10 ಆರೋಪಿಗಳ ಬಂಧನದ ಬೆನ್ನಲ್ಲೇ ಹೊರಬಂತು ಸತ್ಯ!
ಮಹತ್ತರ ತಿರುವು ಪಡೆದ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ ಪ್ರಕರಣದ ಶಂಕಿತ ಆರೋಪಿ ರವಿ ಸೇರಿ 10 ಆರೋಪಿಗಳ ಬಂಧನ
ಶಿವಕುಮಾರ್ ಪತ್ತಾರ್
| Edited By: |

Updated on: Oct 27, 2025 | 3:00 PM

Share

ಕೊಪ್ಪಳ, ಅಕ್ಟೋಬರ್ 27: ಜಿಲ್ಲೆಯ ಗಂಗಾವತಿ ನಗರವನ್ನು ಬೆಚ್ಚಿಬೀಳಿಸಿದ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಮೃತರ ಸ್ನೇಹಿತ ರವಿಯೇ ಆರೊಪಿಯಿರಬಹುದು ಎಂಬ ಶಂಕೆ ಈ ಹಿಂದೆ ವ್ಯಕ್ತವಾಗಿತ್ತು. ಇದೀಗ 19 ದಿನಗಳ ನಂತರ ಆತನೇ ಕೊಲೆಗಾರನೆಂದು ದೃಢಪಟ್ಟಿದೆ. ಈ ಪ್ರಕರಣದ ಹಿನ್ನೆಲೆ ಪ್ರಮುಖ ಆರೋಪಿ ರವಿ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.

ವೆಂಕಟೇಶ್ ಹತ್ಯೆಗೆ ಬಳ್ಳಾರಿಯಲ್ಲಿ ಮಾಸ್ಟರ್ ಪ್ಲಾನ್

ಅಕ್ಟೋಬರ್ 8ರ ತಡರಾತ್ರಿ ಗಂಗಾವತಿಯ ರಸ್ತೆಯಲ್ಲಿ ದುಷ್ಕರ್ಮಿಗಳು ಕಾರಿನಲ್ಲಿ ಹಿಂಬಾಲಿಸಿ ವೆಂಕಟೇಶ್ ಅವರನ್ನು ಕೊಚ್ಚಿ ಕೊಲೆ ಮಾಡಿದ್ದರು. ಪ್ರಾಥಮಿಕ ತನಿಖೆಯಲ್ಲಿ ಹಳೆಯ ದ್ವೇಷವೇ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿತ್ತು. ಈಗ ತನಿಖೆಯಿಂದ ಆರೋಪಿಗಳು ಬಳ್ಳಾರಿಯಲ್ಲಿ ಈ ಹತ್ಯೆಗೆ ಸಂಚು ಹಾಕಿದ್ದರು ಎಂಬ ಸ್ಪೋಟಕ ಸತ್ಯ ಹೊರಬಿದ್ದಿದೆ. ಪ್ರಮುಖ ಆರೋಪಿ ರವಿ, ಹಂತಕರಾದ ಗೌಳಿ ಗಂಗಾಧರ ಹಾಗೂ ಇತರರೊಂದಿಗೆ ಸಂಚು ರೂಪಿಸಿದ್ದು, ಅದರಂತೆಯೇ ಗಂಗಾವತಿಯಲ್ಲಿ ಕೊಲೆ ಮಾಡಿದ್ದಾರೆ.

ಕೊಲೆ ಮಾಡಿ ತಲೆಮರಿಸಿಕೊಂಡಿದ್ದ ರವಿ ಪೊಲೀಸರ ವಶಕ್ಕೆ

ಕೊಲೆ ಬಳಿಕ ರವಿ ಮೊಬೈಲ್ ಇಲ್ಲದೆ ತಿರುಪತಿ ಸೇರಿದಂತೆ ನಾನಾ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ. ಮೊಬೈಲ್ ಫೋನ್ ಇಲ್ಲದೆ ಆತನ ಹಾದಿ ಪತ್ತೆ ಹಚ್ಚಲು ಪೊಲೀಸರು ಕಷ್ಟಪಟ್ಟಿದ್ದರು. ರವಿಯು ತನ್ನ ಪತ್ನಿ ಚೈತ್ರಾಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕೆಯಿಂದ ಖರ್ಚಿಗೆ ಹಣ ಪಡೆಯುತ್ತಿದ್ದ ಕಾರಣ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದರು. ಕೊನೆಗೂ ಆಕೆಯ ಬಂಧನದ ನಂತರ ಪೊಲೀಸರು ರವಿಯನ್ನು ಬಳ್ಳಾರಿ ಹೊರವಲಯದಲ್ಲಿ ಟ್ರ್ಯಾಪ್ ಮಾಡಿ ಅರೆಸ್ಟ್ ಮಾಡಿದ್ದಾರೆ. ಇಲ್ಲಿಯ ವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್, ಧನರಾಜ್, ಭರತ್ , ಸಲೀಂ, ಕಾರ್ತಿಕ್, ಮುಹಮ್ಮದ್ ಅಲ್ತಾಫ್, ದಾದಾಪೀರ, ರವಿ ಪತ್ನಿ ಚೈತ್ರಾ ಮತ್ತು ಇತ್ತೀಚಿನ ಬಂಧಿತರಾದ ರವಿ ಹಾಗೂ ಗಂಗಾಧರ ಸೇರಿ ಒಟ್ಟು 10 ಮಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ ಗಂಗಾವತಿ: ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ

ಈಗಾಗಲೇ ರವಿ ಮೇಲೆ ಕೊಲೆ, ಕೊಲೆ ಯತ್ನ ಮತ್ತು ದೋಂಬಿ ಗಲಾಟೆ ಸೇರಿ 15ಕ್ಕೂ ಹೆಚ್ಚು ಕೇಸ್‌ಗಳಿವೆ. ಗೌಳಿ ಗಂಗಾಧರ ಮೇಲೂ 8 ಕೇಸ್ ದಾಖಲಾಗಿವೆ. ಕೊಪ್ಪಳ ಎಸ್‌ಪಿ ಡಾ. ರಾಮ್ ಅರಸಿದ್ದಿ ಈ 10 ಮಂದಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈ ಪ್ರಕರಣ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿತ್ತು . ರವಿ ಬಂಧನದೊಂದಿಗೆ ಪ್ರಕರಣದ ತನಿಖೆಗೆ ವೇಗ ಬಂದಿದೆ ಮತ್ತು ಶೀಘ್ರದಲ್ಲೇ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?