AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರವಾಗಿ ಹತ್ಯೆಯಾಗಿದ್ದು, ಎಲ್ಲರೂ ಬೆಚ್ಚಿಬೀಳುವಂತೆ ಮಾಡಿದೆ. ತಡರಾತ್ರಿ ವೆಂಕಟೇಶ್ ನನ್ನು ಕಾರಿನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಆತನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿಯದಿದ್ದರೂ ಹಳೆಯ ದ್ವೇಷದಿಂದ ಈ ದುರ್ಘಟನೆ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ.

ಗಂಗಾವತಿ: ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ
ಹತ್ಯೆಯಾದ ಬಿಜೆಪಿ ಯುವ ಮುಖಂಡ ವೆಂಕಟೇಶ್ ಮತ್ತು ಶಂಕಿತ ಆರೋಪಿ ರವಿ
ಶಿವಕುಮಾರ್ ಪತ್ತಾರ್
| Edited By: |

Updated on:Oct 27, 2025 | 1:12 PM

Share

ಕೊಪ್ಪಳ, ಅಕ್ಟೋಬರ್ 8: ದೇವಿಕ್ಯಾಂಪ್​ನಿಂದ ಗಂಗಾವತಿಗೆ ಬೈಕ್​ ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ಹೆಚ್​​​ಆರ್​ಎಸ್​ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ.

ನಡೆದಿದ್ದೇನು?

ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(31) ಕೊಲೆಯಾದ ದುರ್ದೈವಿ. ವೆಂಕಟೇಶ್ ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ಸಮಯದಲ್ಲಿ ದುಷ್ಕರ್ಮಿಗಳು ಅವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಹೀಗೆ ಬಂದವರು ಅವರ ಬೈಕ್​ಗೆ ಗುದ್ದಿದ್ದಾರೆ. ವೆಂಕಟೇಶ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ವೆಂಕಟೇಶ್​​​​​​ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ದುರಂತ ಘಟನೆ ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆಯೇ ನಡೆದಿದೆ. ಗಂಗಾವತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು,  ಘಟನೆ ನಡೆದ ಸ್ಥಳಕ್ಕೆ ಬಂದ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದು, ಗಂಗಾವತಿಯ ಹೆಚ್​​​ಆರ್​ಎಸ್​ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ.

ಹಳೇ ದ್ವೇಷಕ್ಕೆ ನಡೀತಾ ಕೊಲೆ?

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಹಿಂದೆ ಹಳೇ ದ್ವೇಷವಿರುವ ಶಂಕೆ ವ್ಯಕ್ತವಾಗಿದೆ. ವೆಂಕಟೇಶ್ ಕುರುಬರ ಸ್ನೇಹಿತರು ರವಿ ಎಂಬಾತನ ಮೇಲೆ ಕೊಲೆ ಆರೋಪ ಹೊರಿಸಿದ್ದಾರೆ. ವೆಂಕಟೇಶ್ ಹಾಗೂ ರವಿ ಮದ್ಯೆ ಕಳೆದ ಏಳೆಂಟು ವರ್ಷಗಳಿಂದ ದ್ವೇಷವಿದ್ದು, ನಾಯಕತ್ವದ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯ ಮೂಡಿತ್ತು. ಏರಿಯಾ ಕಂಟ್ರೋಲ್‌ ವಿಚಾರಕ್ಕೂ ವೆಂಕಟೇಶ್ ನಡುವೆ ಭಿನ್ನಾಭಿಪ್ರಾಯವಿತ್ತು. ಇದೇ ಕಾರಣದಿಂದ ರವಿ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 am, Wed, 8 October 25

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?