AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿನೋಟಿಫಿಕೆಷನ್ ಪ್ರಕರಣ: ಬಿಎಸ್​ವೈ ಬೆನ್ನಲ್ಲೇ ಕುಮಾರಸ್ವಾಮಿಗೂ ಲೋಕಾಯುಕ್ತ ಬುಲಾವ್

ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಈಗಾಗಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸತತ 3 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಇದೀಗ ಅವರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಗೆ ಸೋಮವಾರ ಲೋಕಾಯುಕ್ತ ವಿಚಾರಣೆ ಹಾಜರಾಗುವಂತೆ ತಿಳಿಸಿತ್ತು. ಆದರೆ ಇಂದೇ ವಿಚಾರಣೆಗೆ ಹಾಜರಾಗಲಿದ್ದಾರೆ.

ಡಿನೋಟಿಫಿಕೆಷನ್ ಪ್ರಕರಣ: ಬಿಎಸ್​ವೈ ಬೆನ್ನಲ್ಲೇ ಕುಮಾರಸ್ವಾಮಿಗೂ ಲೋಕಾಯುಕ್ತ ಬುಲಾವ್
ಹೆಚ್​ಡಿ ಕುಮಾರಸ್ವಾಮಿ
Shivaprasad B
| Edited By: |

Updated on:Sep 27, 2024 | 5:43 PM

Share

ಬೆಂಗಳೂರು, ಸೆಪ್ಟೆಂಬರ್​ 27: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್​ ಜಾರಿ ಹಿನ್ನೆಲೆ ಇಂದು ಸಂಜೆ ಹೆಚ್​ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಲಿದ್ದಾರೆ. ಸಂಜೆಯೊಳಗೆ ಹಾಜರಾಗುವುದಾಗಿ ತಿಳಿಸಿದ್ದು, ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾ ಕಚೇರಿಗೆ ಆಗಮಿಸಲಿದ್ದಾರೆ.

ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್​ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ನೀಡಲಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು. ಹಾಗಾಗಿ ಬೆಂಗಳೂರು ಏರ್ಪೋರ್ಟ್​ನಿಂದ ಹೊರಟು ಯಲಹಂಕ ಬಳಿ ಬರುತ್ತಿರುವ ಕುಮಾರಸ್ವಾಮಿ ಡಿವೈಎಸ್​ಪಿ ಬಸವರಾಜ್ ಮುಗುದಂ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸತತ 3 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ, ಎಚ್‌ಡಿಕೆ ವಿರುದ್ಧ ಅಕ್ರಮ ಡಿನೋಟಿಫಿಕೇಷನ್: ದಾಖಲೆ ಬಿಡುಗಡೆಗೊಳಿಸಿದ ಸಚಿವರು

ಈ ಬಗ್ಗೆ ದೆಹಲಿ ಮಾತನಾಡಿದ್ದ ಹೆಚ್​ಡಿ ಕುಮಾರಸ್ವಾಮಿ, ಲೋಕಾಯುಕ್ತದ ಯಾವ ಪೊಲೀಸ್ ಅಧಿಕಾರಿಯೂ ನನ್ನನ್ನು ಭೇಟಿ ಮಾಡಿಲ್ಲ. ಅವರು ನನಗೆ ನೋಟಿಸ್ ನೀಡಿದ್ದಾರೆ ಎಂಬುವುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಆದರೆ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಹೇಳಿದ್ದರು.

ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ಕಾನೂನಿನ ಪ್ರಕಾರವೇ ಕ್ರಮಕೈಗೊಳ್ಳಾಗಿದೆ. ಸಿಎಂ ಸಿದ್ದರಾಮಯ್ಯ ಕೂಡ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಏಜೆನ್ಸಿಗಳು ಸ್ವಾಧೀನಪಡಿಸಿಕೊಂಡಿರುವ ಹಲವಾರು ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ಧದ ಎಫ್​ಐಆರ್​ನಲ್ಲಿ ಯಾವೆಲ್ಲಾ ಸೆಕ್ಷನ್​ ದಾಖಲು? ಯಾವ ಸೆಕ್ಷನ್​ಗೆ ಏನು ಶಿಕ್ಷೆ?

ಮುಡಾ ಹಗರಣದಿಂದ ಗಮನ ಬೇರೆಡೆ ಸೆಳೆಯಲು ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ಹಳೆ ಪ್ರಕರಣಗಳನ್ನು ಕೆದಕುತ್ತಿದ್ದಾರೆ ಮತ್ತು ನಮನ್ನು ಟಾರ್ಗೆಟ್​ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್​ ಇತ್ತೀಚೆಗೆ ಬಿಎಸ್​ ಯಡಿಯೂರಪ್ಪ ಮತ್ತು ಹೆಚ್​ಡಿ ಕುಮಾರಸ್ವಾಮಿ ವಿರುದ್ಧದ ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Fri, 27 September 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!