AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಅಗ್ನಿ ಅವಘಡ: ಅನಿಲ ಸೋರಿಕೆಯಿಂದ ಸುಟ್ಟು ಕರಕಲಾದ ಮನೆ

ಪಕ್ಕದ ಮನೆಯವರು ಊರಿಗೆ ಹೋಗುವಾಗ ಫಾತಿಮಾಗೆ ಬಳಸಲು ತಮ್ಮ ಸಿಲಿಂಡರ್ ಕೊಟ್ಟಿದ್ದರು. ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಿಲಿಂಡರ್ ಸ್ಪೋಟವಾಗಿದೆ. ಮನೆ ಕಟ್ಟಲು ಅಂತ ಮಹಿಳೆ ಕೂಡಿಟ್ಟಿದ್ದ ಎರಡು ಲಕ್ಷ ರೂ. ನಗದು ಬೆಂಕಿಗಾಹುತಿಯಾಗಿದೆ.

ಕಲಬುರಗಿಯಲ್ಲಿ ಅಗ್ನಿ ಅವಘಡ: ಅನಿಲ ಸೋರಿಕೆಯಿಂದ ಸುಟ್ಟು ಕರಕಲಾದ ಮನೆ
ಸುಟ್ಟು ಕರಕಲಾಗಿರುವ ಮನೆ
sandhya thejappa
| Edited By: |

Updated on: Apr 05, 2021 | 12:42 PM

Share

ಕಲಬುರಗಿ: ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಫಾತಿಮಾ ಎನ್ನುವವರ ಮನೆಯಲ್ಲಿ ಘಟನೆ ನಡೆದಿದ್ದು, ಸುಮಾರು 9 ಕೋಳಿಗಳು, ಫ್ರಿಡ್ಜ್, ದವಸ ಧಾನ್ಯಗಳು, ಬಟ್ಟೆ ಸೇರಿ ಒಂದು ಲಕ್ಷ ಎಂಬತ್ತು ಸಾವಿರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಪಕ್ಕದ ಮನೆಯವರು ಊರಿಗೆ ಹೋಗುವಾಗ ಫಾತಿಮಾಗೆ ಬಳಸಲು ತಮ್ಮ ಸಿಲಿಂಡರ್ ಕೊಟ್ಟಿದ್ದರು. ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಿಲಿಂಡರ್ ಸ್ಪೋಟವಾಗಿದೆ. ಮನೆ ಕಟ್ಟಲು ಅಂತ ಮಹಿಳೆ ಕೂಡಿಟ್ಟಿದ್ದ ಎರಡು ಲಕ್ಷ ರೂಪಾಯಿ ನಗದು ಬೆಂಕಿಗಾಹುತಿಯಾಗಿದ್ದು, ಈ ದುರ್ಘಟನೆ ನಿನ್ನೆ ಸಂಜೆ ನಡೆದಿದೆ. ಸದ್ಯ ಈ ಪ್ರಕರಣ ಚಿತ್ತಾಪೂರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತೆಲಂಗಾಣದ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ  ತೆಲಂಗಾಣದ ನಿರ್ಮಲ ಜಿಲ್ಲೆಯ ಬಾಮನಿ ಗ್ರಾಮದ ಬಳಿಯಿರುವ ಮರಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 250ಕ್ಕೂ ಹೆಚ್ಚು ಮರಗಳಿಗೆ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಉರಿಯುತ್ತಿದ್ದ ಮರಗಳನ್ನು ನಂದಿಸಲು ಅಗ್ನಿ ಶಾಮಕದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದೆ.

250 ಮರಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಕಾರಿನ ಎಂಜಿನ್​ನಲ್ಲಿ ಧಿಡೀರ್ ಬೆಂಕಿ ಕಾರಿನ ಎಂಜಿನ್​ನಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದ ಘಟನೆ ತೆಲಂಗಾಣದ ನಿಜಾಮಬಾದ್ ನಗರದ ಕಂಟೇಶ್ವರ ಬೈಪಾಸ್ ವೃತ್ತದಲ್ಲಿ ನಡೆದಿದೆ. ನಗರದ ಕಂಟೇಶ್ವರ ಬೈಪಾಸ್ ವೃತ್ತದ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೇ ಕಾರನ್ನು ರಸ್ತೆ ಬದಿ ನಿಲ್ಲಿಸಿ, ನಂತರ ಬೆಂಕಿ ನಂದಿಸಲು ಯತ್ನಿಸುತ್ತಾರೆ. ಆದರೆ ಚಾಲಕನ ಪ್ರಯತ್ನ ವಿಫಲಗೊಂಡು ಕಾರು ಅಗ್ನಿಗೆ ಆಹುತಿಯಾಗಿದೆ.

ನಾಲ್ಕು ಎಕರೆಯಲ್ಲಿ ಬೆಳೆದಿದ್ದ ನಾಟಿ ಕಬ್ಬು ಬೆಂಕಿಗಾಹುತಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿಯಲ್ಲಿ ಸುಮಾರು ನಾಲ್ಕು ಎಕರೆಯಲ್ಲಿ ಬೆಳೆದಿದ್ದ ನಾಟಿ ಕಬ್ಬು ಬೆಂಕಿಗಾಹುತಿಯಾಗಿದೆ. ಪಕ್ಕದ ಜಮೀನಿನ ಪ್ರಭಾಕರ ಎಂಬುವರು ಹೊಲದ ಬದುವಿಗೆ ಹಚ್ಚಿದ ಬೆಂಕಿ ವ್ಯಾಪಿಸಿ ರೈತ ಹನಮಂತ ಹಾಳಕೇರಿ ಎಂಬುವರಿಗೆ ಸೇರಿದ ಕಬ್ಬು ಬೆಳೆ ನಾಶವಾಗಿದೆ. ತಗುಲಿದ ಬೆಂಕಿಯಿಂದ ಕಬ್ಬು, ಹನಿ ನೀರಾವರಿ, ಪೈಪು ಸೇರಿ ಅಂದಾಜು 7 ಲಕ್ಷ ರೂ. ವಸ್ತುಗಳು ನಾಶವಾಗಿದೆ.

ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಬೆಳೆ ಬೆಂಕಿಗಾಹುತಿಯಾಗಿದೆ

ದಕ್ಷಿಣಕನ್ನಡ ಆಕಸ್ಮಿಕವಾಗಿ ಬೆಂಕಿ ಜಿಲ್ಲೆಯ ಮಂಗಳೂರಿನ ಪಚ್ಚನಾಡಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದು ಇಡೀ ಘಟಕ ಸುಟ್ಟು ಭಸ್ಮವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರ ಸಾಹಸ ಪಟ್ಟರು. ಜಿಲ್ಲಾಧಿಕಾರಿ ಡಾ.ಕೆ.ವಿರಾಜೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

(Gas Cylinder Burst in kalaburagi and 1 house has been burnt no death reported)

ಇದನ್ನೂ ಓದಿ

ನಿನ್ನ ಗರ್ಲ್​ಫ್ರೆಂಡ್​ಮೇಲೆ ಕೈ ಹಾಕಿದ್ದಕ್ಕೆ ಸಿಟ್ಟು ಬಂತಾ?; ಉರಿಯುವ ಬೆಂಕಿಗೆ ತುಪ್ಪ ಸುರಿದ ಪ್ರಶಾಂತ್ ಸಂಬರಗಿ ​

ಹತ್ತಾರು ಎಕರೆ ಅರಣ್ಯ ಭಸ್ಮ; ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆ, ಕೃಷ್ಣಮೃಗಗಳ ಪರದಾಟ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?