AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಅಗ್ನಿ ಅವಘಡ: ಅನಿಲ ಸೋರಿಕೆಯಿಂದ ಸುಟ್ಟು ಕರಕಲಾದ ಮನೆ

ಪಕ್ಕದ ಮನೆಯವರು ಊರಿಗೆ ಹೋಗುವಾಗ ಫಾತಿಮಾಗೆ ಬಳಸಲು ತಮ್ಮ ಸಿಲಿಂಡರ್ ಕೊಟ್ಟಿದ್ದರು. ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಿಲಿಂಡರ್ ಸ್ಪೋಟವಾಗಿದೆ. ಮನೆ ಕಟ್ಟಲು ಅಂತ ಮಹಿಳೆ ಕೂಡಿಟ್ಟಿದ್ದ ಎರಡು ಲಕ್ಷ ರೂ. ನಗದು ಬೆಂಕಿಗಾಹುತಿಯಾಗಿದೆ.

ಕಲಬುರಗಿಯಲ್ಲಿ ಅಗ್ನಿ ಅವಘಡ: ಅನಿಲ ಸೋರಿಕೆಯಿಂದ ಸುಟ್ಟು ಕರಕಲಾದ ಮನೆ
ಸುಟ್ಟು ಕರಕಲಾಗಿರುವ ಮನೆ
sandhya thejappa
sandhya thejappa| Edited By: |

Updated on: Apr 05, 2021 | 12:42 PM

Share

ಕಲಬುರಗಿ: ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಫಾತಿಮಾ ಎನ್ನುವವರ ಮನೆಯಲ್ಲಿ ಘಟನೆ ನಡೆದಿದ್ದು, ಸುಮಾರು 9 ಕೋಳಿಗಳು, ಫ್ರಿಡ್ಜ್, ದವಸ ಧಾನ್ಯಗಳು, ಬಟ್ಟೆ ಸೇರಿ ಒಂದು ಲಕ್ಷ ಎಂಬತ್ತು ಸಾವಿರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಪಕ್ಕದ ಮನೆಯವರು ಊರಿಗೆ ಹೋಗುವಾಗ ಫಾತಿಮಾಗೆ ಬಳಸಲು ತಮ್ಮ ಸಿಲಿಂಡರ್ ಕೊಟ್ಟಿದ್ದರು. ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಿಲಿಂಡರ್ ಸ್ಪೋಟವಾಗಿದೆ. ಮನೆ ಕಟ್ಟಲು ಅಂತ ಮಹಿಳೆ ಕೂಡಿಟ್ಟಿದ್ದ ಎರಡು ಲಕ್ಷ ರೂಪಾಯಿ ನಗದು ಬೆಂಕಿಗಾಹುತಿಯಾಗಿದ್ದು, ಈ ದುರ್ಘಟನೆ ನಿನ್ನೆ ಸಂಜೆ ನಡೆದಿದೆ. ಸದ್ಯ ಈ ಪ್ರಕರಣ ಚಿತ್ತಾಪೂರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತೆಲಂಗಾಣದ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ  ತೆಲಂಗಾಣದ ನಿರ್ಮಲ ಜಿಲ್ಲೆಯ ಬಾಮನಿ ಗ್ರಾಮದ ಬಳಿಯಿರುವ ಮರಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 250ಕ್ಕೂ ಹೆಚ್ಚು ಮರಗಳಿಗೆ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಉರಿಯುತ್ತಿದ್ದ ಮರಗಳನ್ನು ನಂದಿಸಲು ಅಗ್ನಿ ಶಾಮಕದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದೆ.

250 ಮರಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಕಾರಿನ ಎಂಜಿನ್​ನಲ್ಲಿ ಧಿಡೀರ್ ಬೆಂಕಿ ಕಾರಿನ ಎಂಜಿನ್​ನಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದ ಘಟನೆ ತೆಲಂಗಾಣದ ನಿಜಾಮಬಾದ್ ನಗರದ ಕಂಟೇಶ್ವರ ಬೈಪಾಸ್ ವೃತ್ತದಲ್ಲಿ ನಡೆದಿದೆ. ನಗರದ ಕಂಟೇಶ್ವರ ಬೈಪಾಸ್ ವೃತ್ತದ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೇ ಕಾರನ್ನು ರಸ್ತೆ ಬದಿ ನಿಲ್ಲಿಸಿ, ನಂತರ ಬೆಂಕಿ ನಂದಿಸಲು ಯತ್ನಿಸುತ್ತಾರೆ. ಆದರೆ ಚಾಲಕನ ಪ್ರಯತ್ನ ವಿಫಲಗೊಂಡು ಕಾರು ಅಗ್ನಿಗೆ ಆಹುತಿಯಾಗಿದೆ.

ನಾಲ್ಕು ಎಕರೆಯಲ್ಲಿ ಬೆಳೆದಿದ್ದ ನಾಟಿ ಕಬ್ಬು ಬೆಂಕಿಗಾಹುತಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿಯಲ್ಲಿ ಸುಮಾರು ನಾಲ್ಕು ಎಕರೆಯಲ್ಲಿ ಬೆಳೆದಿದ್ದ ನಾಟಿ ಕಬ್ಬು ಬೆಂಕಿಗಾಹುತಿಯಾಗಿದೆ. ಪಕ್ಕದ ಜಮೀನಿನ ಪ್ರಭಾಕರ ಎಂಬುವರು ಹೊಲದ ಬದುವಿಗೆ ಹಚ್ಚಿದ ಬೆಂಕಿ ವ್ಯಾಪಿಸಿ ರೈತ ಹನಮಂತ ಹಾಳಕೇರಿ ಎಂಬುವರಿಗೆ ಸೇರಿದ ಕಬ್ಬು ಬೆಳೆ ನಾಶವಾಗಿದೆ. ತಗುಲಿದ ಬೆಂಕಿಯಿಂದ ಕಬ್ಬು, ಹನಿ ನೀರಾವರಿ, ಪೈಪು ಸೇರಿ ಅಂದಾಜು 7 ಲಕ್ಷ ರೂ. ವಸ್ತುಗಳು ನಾಶವಾಗಿದೆ.

ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಬೆಳೆ ಬೆಂಕಿಗಾಹುತಿಯಾಗಿದೆ

ದಕ್ಷಿಣಕನ್ನಡ ಆಕಸ್ಮಿಕವಾಗಿ ಬೆಂಕಿ ಜಿಲ್ಲೆಯ ಮಂಗಳೂರಿನ ಪಚ್ಚನಾಡಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದು ಇಡೀ ಘಟಕ ಸುಟ್ಟು ಭಸ್ಮವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರ ಸಾಹಸ ಪಟ್ಟರು. ಜಿಲ್ಲಾಧಿಕಾರಿ ಡಾ.ಕೆ.ವಿರಾಜೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

(Gas Cylinder Burst in kalaburagi and 1 house has been burnt no death reported)

ಇದನ್ನೂ ಓದಿ

ನಿನ್ನ ಗರ್ಲ್​ಫ್ರೆಂಡ್​ಮೇಲೆ ಕೈ ಹಾಕಿದ್ದಕ್ಕೆ ಸಿಟ್ಟು ಬಂತಾ?; ಉರಿಯುವ ಬೆಂಕಿಗೆ ತುಪ್ಪ ಸುರಿದ ಪ್ರಶಾಂತ್ ಸಂಬರಗಿ ​

ಹತ್ತಾರು ಎಕರೆ ಅರಣ್ಯ ಭಸ್ಮ; ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆ, ಕೃಷ್ಣಮೃಗಗಳ ಪರದಾಟ

Follow Us
sandhya thejappa
sandhya thejappa
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ