AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಗೀಸರ್‌ನಿಂದ ವಿಷಾನಿಲ ಸೋರಿಕೆ, ಉಸಿರುಗಟ್ಟಿ ತಾಯಿ, ಮಗ ಸಾವು

ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮತ್ತು ಮಗ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ಸಂಭವಿಸಿದೆ. ಮತ್ತೊಂದು ಪ್ರಕರಣದಲ್ಲಿ ಈಜುಕೊಳ ಸ್ವಚ್ಛಗೊಳಿಸುವಾಗ ವಿದ್ಯುತ್ ತಗುಲಿ ಕೋಚ್ ಸಾವನ್ನಪ್ಪಿದ್ದಾರೆ.

ರಾಮನಗರ: ಗೀಸರ್‌ನಿಂದ ವಿಷಾನಿಲ ಸೋರಿಕೆ, ಉಸಿರುಗಟ್ಟಿ ತಾಯಿ, ಮಗ ಸಾವು
ರಾಮನಗರದಲ್ಲಿ ಗೀಸರ್‌ನಿಂದ ವಿಷಾನಿಲ ಸೋರಿಕೆ: ತಾಯಿ, ಮಗ ಸಾವು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jul 22, 2024 | 4:26 PM

Share

ರಾಮನಗರ, ಜುಲೈ 22: ಗೀಸರ್‌ನಿಂದ (geyser) ವಿಷಾನಿಲ ಸೋರಿಕೆಯಾಗಿ ತಾಯಿ ಮತ್ತು ಮಗ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ನಡೆದಿದೆ. ಶೋಭಾ (40), ಪುತ್ರ ದಿಲೀಪ್ (16) ಮೃತಪಟ್ಟ ದುರ್ದೈವಿಗಳು. ಗೀಸರ್‌ ಆನ್ ಮಾಡಿ ಮನೆಯ ಸದಸ್ಯರು ಮರೆತು ಹೋಗಿದ್ದಾರೆ. ಬಾಗಿಲು, ಕಿಟಕಿ ಮುಚ್ಚಿದ್ದರಿಂದ ಮನೆಯೊಳಗೆ ವಿಷಾನಿಲ ಆವರಿಸಿಕೊಂಡಿದೆ. ಹೀಗಾಗಿ ಶ್ವಾಸಕೋಶ ವಿಷಹೊಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.

ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡ ಪರಿಶೀಲನೆ ಮಾಡಿದ್ದು, ಮಾಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ‌ ಮತ್ತು ಮಗನ ಮೃತದೇಹವನ್ನು ಶಿಫ್ಟ್‌ ಮಾಡಲಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ಸಂಭವಿಸಿದೆ.

ಈಜುಕೊಳ ಸ್ವಚ್ಛಗೊಳಿಸುವಾಗ ವಿದ್ಯುತ್ ತಗುಲಿ ಕೋಚ್ ಸಾವು

ಹುಬ್ಬಳ್ಳಿ: ಈಜುಕೊಳ ಸ್ವಚ್ಛಗೊಳಿಸುವಾಗ ವಿದ್ಯುತ್ ತಗುಲಿ ವ್ಯಕ್ತಿ ಓರ್ವ ಸಾವನ್ನಪ್ಪಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನಗರದ ಆಕ್ಸಫರ್ಡ್ ಕಾಲೇಜ ಬಳಿ ಇರುವ ಅಮನ್ ಅಪಾರ್ಟ್​​ಮೆಂಟ್ ನಿವಾಸಿ ಶಿವಪುತ್ರಪ್ಪ ದಾಣಿಗಲ್​ ಮೃತ ವ್ಯಕ್ತಿ. ನವೀನ್ ಪಾರ್ಕ್ ಅಸೋಸಿಯೇಷನ್ ನಿರ್ವಹಣೆಯ ಎಮ್​ಆರ್ ಆಕಾಡೆಮಿಯ ಸ್ವಿಮ್ಮಿಂಗ್ ಫೂಲ್​ನಲ್ಲಿ ಕೋಚ್ ಆಗಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿದು ಪೂಜಾರಿಯ ಬರ್ಬರ ಕೊಲೆ

ಕಳೆದ ಎರಡು ದಿನಗಳ ಹಿಂದೆ ಈಜುಕೊಳ ಸ್ವಚ್ಛಗೊಳಿಸುವಾಗ ವಿದ್ಯುತ್ ತಗುಲಿ ದುರಂತ ಸಂಭವಿಸಿದೆ. ವಿದ್ಯುತ್ ತಗುಲಿ ಸಾವನ್ನಪ್ಪಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ‌ ಆಗಿದೆ. ಅ್ಯಸಿಡ್ ಹಾಕಿ ವಿದ್ಯುತ್ ಚಾಲಿತ ಗನ್​ ನಿಂದ ಈಜುಕೊಳ ಸ್ವಚ್ಛಗೊಳಿಸುವಾಗ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ಬಸ್​ಗೆ ಕಾಯ್ತಿದ್ದ ವಿದ್ಯಾರ್ಥಿನಿ ಅಪಹರಣ: ನಾಲ್ವರು ಯುವಕರಿಂದ ಕಿಡ್ನ್ಯಾಪ್‌ ಆರೋಪ

ಸಿಸಿ ಕ್ಯಾಮೆರಾದಲ್ಲಿ ಮತ್ತೊರ್ವ ವ್ಯಕ್ತಿ ಆತನನ್ನು ಎಬಿಸಲು ಪ್ರಯತ್ನಿಸುತ್ತಾರೆ. ಆತನಿಗೆ ಕರೆಂಟ್ ಶಾಕ್ ಹೊಡೆದ ಪರಿಣಾಮ ಕೆಳಗೆ ಬಿದ್ದ ಮತ್ತೋರ್ವ ವ್ಯಕ್ತಿ. ಇದೀಗ ಈ ವಿಡಿಯೋ ವೈರಲ್ ಆಗಿದೆ. ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:21 pm, Mon, 22 July 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್