AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ನೇಮಕ; ರಾಜ್ಯದ 16 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ರಾಕೇಶ್ ಸಿಂಗ್ ನೇಮಕವಾಗಿದ್ದಾರೆ. ಈ ಮೊದಲು ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ ಪ್ರಸಾದ್​ ಕಂದಾಯ ಇಲಾಖೆಗೆ ವರ್ಗಾವಣೆ ಹೊಂದಿದ್ದಾರೆ.

ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ನೇಮಕ; ರಾಜ್ಯದ 16 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬಿಬಿಎಂಪಿ ಮುಖ್ಯ ಕಚೇರಿ
TV9 Web
| Edited By: |

Updated on:Apr 05, 2022 | 1:01 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಮಂಜುನಾಥ್ ಪ್ರಸಾದ್ ವರ್ಗಾವಣೆಯಾಗಿದ್ದಾರೆ. ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್​ ಗುಪ್ತಾ ನೇಮಕವಾಗಿದ್ದಾರೆ. ಜೊತೆಗೆ, ಬಿಬಿಎಂಪಿ ಆಡಳಿತಾಧಿಕಾರಿಯಾಗಿ ರಾಕೇಶ್ ಸಿಂಗ್ ನೇಮಕವಾಗಿದ್ದಾರೆ. ಈ ಮೊದಲು ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ ಪ್ರಸಾದ್​ ಕಂದಾಯ ಇಲಾಖೆಗೆ ವರ್ಗಾವಣೆ ಹೊಂದಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತ ಗೌರವ್​ ಗುಪ್ತಾಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಕಂದಾಯ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆ ಎಸಿಎಸ್ ಆಗಿರುವ ರಾಕೇಶ್ ಸಿಂಗ್​ಗೆ ಬಿಬಿಎಂಪಿ‌ ಆಡಳಿತಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.

16 ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ ಮೂವರು ಡಿವೈಎಸ್​ಪಿಗಳ ಹಾಗೂ 28 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹದಿನಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. 16 ಅಧಿಕಾರಿಗಳ ಪಟ್ಟಿ ಇಲ್ಲಿದೆ.

ವಂದಿತಾ ಶರ್ಮ- ಸರ್ಕಾರದ ಎಸಿಎಸ್ ಹೆಚ್ಚುವರಿ ಹೊಣೆ ರಾಜೀವ್ ಚಾವ್ಲಾ- ಎಸಿಎಸ್, ಡಿಪಿಎಆರ್ ಜಿ. ಕುಮಾರ ನಾಯ್ಕ್- ಎಸಿಎಸ್, ಇಂಧನ ಇಲಾಖೆ ಜೊತೆಗೆ ಎಸಿಎಸ್, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಹೊಣೆ ಪಂಕಜ್ ಕುಮಾರ್ ಪಾಂಡೆ- ಕಾರ್ಯದರ್ಶಿ, MSME ಮತ್ತು ಗಣಿ ಇಲಾಖೆ ವಿ‌.ಪೊನ್ನುರಾಜ್- ಕಾರ್ಯದರ್ಶಿ, DPAR (ಇ-ಆಡಳಿತ) ಸಿಂಧೂ ರೂಪೇಶ್- ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ ಎಸ್. ಹೊನ್ನಾಂಬ- ನಿರ್ದೇಶಕಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡಾ. ಬಿ.ಆರ್. ಮಮತಾ- ಹೆಚ್ಚುವರಿ ಮಿಷನ್ ಡೈರೆಕ್ಟರ್, ಸಕಾಲ ಹೆಚ್.ಎನ್. ಗೋಪಾಲಕೃಷ್ಣ- ವ್ಯವಸ್ಥಾಪಕ ನಿರ್ದೇಶಕ, ಪಬ್ಲಿಕ್ ಲ್ಯಾಂಡ್ ಕಾರ್ಪೊರೇಷನ್ ಐಟಿ ಬಿಟಿ ಇಲಾಖೆಯ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ

ಇದನ್ನೂ ಓದಿ: ಕೊರೊನಾ 2ನೇ ಅಲೆ ಆರ್ಭಟ.. ಬಿಬಿಎಂಪಿ ವಿದ್ಯಾರ್ಥಿಗಳಿಗೆ ಕಂಟಕವಾಯ್ತು ಕೊರೊನಾ

ಬೆಂಗಳೂರಿನ ಪ್ರಮುಖ ವೃತ್ತಗಳಿಗೆ ಹೊಸರೂಪ ನೀಡಲಿದೆ ಬಿಬಿಎಂಪಿ; ಟ್ರಾಫಿಕ್​ ಕಿರಿಕಿರಿ ತಗ್ಗಿಸಿ, ಅಂದ ಹೆಚ್ಚಿಸಲು ಯೋಜನೆ

Published On - 7:07 pm, Wed, 31 March 21

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ