AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘53 ವರ್ಷಗಳ ಅನುಭವದಲ್ಲಿ ಇದೇ ಮೊದಲು; ಮೋಡ ಅಡ್ಡ ಬಂದಿದ್ದರಿಂದ ಯುದ್ಧಕಾಂಡ ನಡೆಯಬಹುದು’

ದೈವ ನಿರ್ಣಯ ದೇವರಿಗೆ ಮಾತ್ರ ಗೊತ್ತಿರುತ್ತದೆ. ನನ್ನ 53 ವರ್ಷಗಳ ಅನುಭವದಲ್ಲಿ ಇದೇ ಮೊದಲ ಬಾರಿ ಹೀಗಾಗುತ್ತಿದೆ. ಕಳೆದ ವರ್ಷ ಈಶ್ವರನ ಮೇಲೆ 2.36 ನಿಮಿಷ ಸೂರ್ಯ ಕಿರಣವಿತ್ತು ಎಂದು ಸೋಮಸುಂದರ್ ದೀಕ್ಷಿತ್ ಹೇಳಿದ್ದಾರೆ.

‘53 ವರ್ಷಗಳ ಅನುಭವದಲ್ಲಿ ಇದೇ ಮೊದಲು; ಮೋಡ ಅಡ್ಡ ಬಂದಿದ್ದರಿಂದ ಯುದ್ಧಕಾಂಡ ನಡೆಯಬಹುದು’
ಗವಿಗಂಗಾಧರೇಶ್ವರ ಹಾಗೂ ಸೋಮಸುಂದರ್ ದೀಕ್ಷಿತ್
TV9 Web
| Updated By: ganapathi bhat|

Updated on:Apr 06, 2022 | 9:03 PM

Share

ಬೆಂಗಳೂರು: ಗವಿಗಂಗಾಧರೇಶ್ವರನ ಸೂರ್ಯ ರಶ್ಮಿ ಸ್ಪರ್ಶಕ್ಕೆ ಮೋಡ ಅಡ್ಡವಾಗಿದೆ. ಭಾಸ್ಕರನು ಅಗೋಚರವಾಗಿ ಲಿಂಗ ಸ್ಪರ್ಶಿಸಿ ಹಾದುಹೋಗಿದ್ದಾನೆ. ಈ ಬಗ್ಗೆ, ಗವಿಗಂಗಾಧರೇಶ್ವರ ದೇಗುಲದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಮಾಹಿತಿ ನೀಡಿದ್ದಾರೆ.

ದೈವ ನಿರ್ಣಯ ದೇವರಿಗೆ ಮಾತ್ರ ಗೊತ್ತಿರುತ್ತದೆ. ನನ್ನ 53 ವರ್ಷಗಳ ಅನುಭವದಲ್ಲಿ ಇದೇ ಮೊದಲ ಬಾರಿ ಹೀಗಾಗುತ್ತಿದೆ. ಕಳೆದ ವರ್ಷ ಈಶ್ವರನ ಮೇಲೆ 2.36 ನಿಮಿಷ ಸೂರ್ಯ ಕಿರಣವಿತ್ತು. ಹಾಗಾಗಿ, ಕಳೆದ ವರ್ಷ ಕೊರೊನಾ ಇಡೀ ವಿಶ್ವವನ್ನು ಕಾಡಿತ್ತು. 2020ರ ವರ್ಷದ ಇಡೀ ವಿಶ್ವಕ್ಕೆ ಸಂಕಷ್ಟದ ವರ್ಷವಾಗಿತ್ತು. ಈ ವರ್ಷ ಅಗೋಚರವಾಗಿ ಸೂರ್ಯ ಪೂಜೆ ಮಾಡಿದ್ದಾನೆ. ಅಗೋಚರ ಸ್ಪರ್ಶವಾಗಿದ್ದರಿಂದ ಯಾವುದೇ ಸಮಸ್ಯೆಯಿಲ್ಲ. 2019 ವರ್ಷದಂತೆ 2021ರ ವರ್ಷ ಶುಭಮಯವಾಗಿರುತ್ತದೆ. ಪ್ರಕೃತಿಯಲ್ಲಿ ಉಂಟಾಗಿದ್ದ ಕೊರೊನಾ ಮಾರಿ ತೊಲಗಲಿದೆ. 20 ನಿಮಿಷಗಳ ಮುಂಚೆ ದಕ್ಷಿಣಾಯಣದಲ್ಲಿ ಸೂರ್ಯನಿದ್ದನು. ಈಗ ಉತ್ತರಾಯಣ ಕಾಲ ಆರಂಭವಾಗಿದೆ ಎಂದು ಸೋಮಸುಂದರ್ ದೀಕ್ಷಿತ್ ಹೇಳಿದ್ದಾರೆ.

ಗಂಗಾಧರನಿಗೆ ಸೂರ್ಯ ರಶ್ಮಿ ಸ್ಪರ್ಶಕ್ಕೆ ಮೋಡ ಅಡ್ಡವಾಗಿದೆ. ಮೋಡ ಅಡ್ಡ ಬಂದಿದ್ದರಿಂದ ಯುದ್ಧಕಾಂಡ ನಡೆಯಬಹುದು. ಶಿವನ ಕ್ಷೇತ್ರಗಳಲ್ಲಿ ಮೃತ್ಯುಂಜಯ ಪೂಜೆಯಿಂದ ಮೋಕ್ಷ ಲಭಿಸುತ್ತದೆ. ಮಾಘಮಾಸದಲ್ಲಿ ಅತಿರುದ್ರ ಮಹಾಯಾಗ ಮಾಡುತ್ತೇವೆ. ಸ್ವಾಮಿ ಸನ್ನಿಧಿಯಲ್ಲಿ ಮಹಾಯಾಗದಿಂದ ಒಳ್ಳೆಯದಾಗಲಿದೆ. ಜಗದೋದ್ಧಾರಕ ಶಿವನು ಎಲ್ಲರನ್ನೂ ಸಂತುಷ್ಟಗೊಳಿಸುತ್ತಾನೆ. ಆಲಯದ ಅರ್ಧದವರೆಗೆ ಸೂರ್ಯ ರಶ್ಮಿ ಪ್ರವೇಶವಾಗಿತ್ತು. ಹಾಗಾಗಿ, ಅಗೋಚರವಾಗಿ ಸೂರ್ಯ ಪೂಜೆ ಸಲ್ಲಿಸಿದ್ದಾನೆ. ಪರಮೇಶ್ವರನ ಕೃಪೆ ಎಲ್ಲರ ಮೇಲೂ ಇರಲಿದೆ ಎಂದು ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಮಾತನಾಡಿದ್ದಾರೆ.

ಸೂರ್ಯ ರಶ್ಮಿ ಸ್ಪರ್ಶಕ್ಕೆ ಅಡ್ಡವಾದ ಮೋಡ: ಅಗೋಚರವಾಗಿಯೇ ಗವಿ ಗಂಗಾಧರನನ್ನು ಸ್ಪರ್ಶಿಸಿ ಮುಂದೆ ನಡೆದ ಭಾಸ್ಕರ

Published On - 6:27 pm, Thu, 14 January 21