AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಯಲ್ಲಿರುವ ಆಕ್ಸಿಜನ್ ಪಡೆದು ರೋಗಿಗೆ ಸರಬರಾಜು ಮಾಡಬಲ್ಲ ಜನರೇಟರ್ ಸದ್ಯವೇ ಲಭ್ಯವಾಗಲಿದೆ: ಸಚಿವ ಡಾ.ಸುಧಾಕರ್

ತುರ್ತು ಲಸಿಕೆ ಉತ್ಪಾದನೆ ತಯಾರಿ ಸುಲಭವಲ್ಲ. ಲಸಿಕೆ ವಿತರಣೆಯಲ್ಲಿ ಸವಾಲುಗಳಿವೆ. ಮೊದಲು ಲಸಿಕೆ ಪಡೆಯಲು ಹಿಂದೇಟು ಹಾಕಿದ್ದರು. ಈಗ ಲಸಿಕೆ ಪಡೆಯಲು ಡಿಮ್ಯಾಂಡ್ ಇದೆ. ಈ ವಿಷಯದಲ್ಲೂ ವಿಪಕ್ಷಗಳು ಎಲ್ಲದರಲ್ಲೂ ರಾಜಕೀಯ ಮಾಡುತ್ತಿವೆ ಎಂದು ಅವರು ದೂರಿದರು.

ಗಾಳಿಯಲ್ಲಿರುವ ಆಕ್ಸಿಜನ್ ಪಡೆದು ರೋಗಿಗೆ ಸರಬರಾಜು ಮಾಡಬಲ್ಲ ಜನರೇಟರ್ ಸದ್ಯವೇ ಲಭ್ಯವಾಗಲಿದೆ: ಸಚಿವ ಡಾ.ಸುಧಾಕರ್
ಡಾ.ಕೆ. ಸುಧಾಕರ್​
guruganesh bhat
|

Updated on: May 14, 2021 | 7:32 PM

Share

ಚಿಕ್ಕಬಳ್ಳಾಪುರ: ಗಾಳಿಯಲ್ಲಿರುವ ಆಕ್ಸಿಜನ್ ಪಡೆದು ರೋಗಿಗೆ ಸರಬರಾಜು ಮಾಡಬಲ್ಲ ಡಿಆರ್​ಡಿಓ ಅಭಿವೃದ್ಧಿಪಡಿಸಿದ ಆಕ್ಸಿಜನ್ ಜನರೇಟರ್​ನ್ನು ಕೆಲವೇ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳ ಬಳಕೆಗಾಗಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದರು. ಡಿಆರ್​ಡಿಓ ಮತ್ತು ಡಾ.ರೆಡ್ಡಿಸ್ ಲ್ಯಾಬ್ ಜೊತೆಗೆ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಬೆಂಗಳೂರಿನ ಸಿ.ವಿ.ರಾಮನ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಾಳೆ ಅಥವಾ ನಾಡಿದ್ದು ಈ ಸೇವೆಯನ್ನು ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಆಸ್ಪತ್ರೆಗೆ ಸಚಿವ ಡಾ.ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊವಿಡ್ ಕೆಲಸ ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಕಾರಣದಿಂದ ಬಾಗೇಪಲ್ಲಿ ತಹಶೀಲ್ದಾರ್ ದಿವಾಕರ್ ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ‘ನಿಮ್ಮ ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು. ಇಲ್ಲವಾದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು. ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಅವರಿಗೆ ಸೂಚಿಸಿದರು.

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಸ್ಥಗಿತ ನಿರ್ಧಾರ ಬಗ್ಗೆ ಗೊಂದಲ ಬೇಡ. ಈ ನಿರ್ಧಾರದಿಂದ ಹಿನ್ನೆಡೆಯಾಗಿಲ್ಲ. ತುರ್ತು ಲಸಿಕೆ ಉತ್ಪಾದನೆ ತಯಾರಿ ಸುಲಭವಲ್ಲ. ಲಸಿಕೆ ವಿತರಣೆಯಲ್ಲಿ ಸವಾಲುಗಳಿವೆ. ಮೊದಲು ಲಸಿಕೆ ಪಡೆಯಲು ಹಿಂದೇಟು ಹಾಕಿದ್ದರು. ಈಗ ಲಸಿಕೆ ಪಡೆಯಲು ಡಿಮ್ಯಾಂಡ್ ಇದೆ. ಈ ವಿಷಯದಲ್ಲೂ ವಿಪಕ್ಷಗಳು ಎಲ್ಲದರಲ್ಲೂ ರಾಜಕೀಯ ಮಾಡುತ್ತಿವೆ ಎಂದು ಅವರು ದೂರಿದರು.

ಇದನ್ನೂ ಓದಿ: Mahadev Prakash: ಸಿಎಂ ಯಡಿಯೂರಪ್ಪರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ​ ಪ್ರಕಾಶ್ ಕೊವಿಡ್​ನಿಂದ ನಿಧನ 

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(Generator that can supply oxygen direct from the air to patient developed by DRDO will be available soon says Karnataka Health Minister Dr Sudhakar)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ