AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ವೃಕ್ಷಗಳ ಸಂರಕ್ಷಣೆಗೆ ಈಶ್ವರ ಖಂಡ್ರೆ ಕ್ರಮ: ಅರಣ್ಯ, ಸರ್ಕಾರಿ, ಪಟ್ಟಾ ಭೂಮಿಯಲ್ಲಿ ಶ್ರೀಗಂಧ, ಬೀಟೆ, ತೇಗದ ಜಿಯೋ ಟ್ಯಾಗ್​

ಮರಗಳ ಅಕ್ರಮ ಕಡಿತ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಬೀಟೆ, ಶ್ರೀಗಂಧ, ತೇಗದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.

ಅಮೂಲ್ಯ ವೃಕ್ಷಗಳ ಸಂರಕ್ಷಣೆಗೆ ಈಶ್ವರ ಖಂಡ್ರೆ ಕ್ರಮ: ಅರಣ್ಯ, ಸರ್ಕಾರಿ, ಪಟ್ಟಾ ಭೂಮಿಯಲ್ಲಿ ಶ್ರೀಗಂಧ, ಬೀಟೆ, ತೇಗದ ಜಿಯೋ ಟ್ಯಾಗ್​
ಸಚಿವ ಈಶ್ವರ್​ ಖಂಡ್ರೆ
TV9 Web
| Edited By: |

Updated on: Jan 20, 2024 | 2:30 PM

Share

ಬೆಂಗಳೂರು, ಜ.20: ಮರಗಳ ಅಕ್ರಮ ಕಡಿತ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಅವರು ಬೀಟೆ, ಶ್ರೀಗಂಧ, ತೇಗದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.

ಕಾಡನಂಚಿನಲ್ಲಿರುವ ಎಲ್ಲ ಜಮೀನಿನಲ್ಲಿ ಅಂದರೆ ಗ್ರಾಮಗಳಿಗೆ ಹೊಂದಿಕೊಂಡ ವನಪ್ರದೇಶ, ಪಟ್ಟಾಭೂಮಿ ಮತ್ತು ಸರ್ಕಾರಿ ಜಮೀನಿನಲ್ಲಿರುವ ಬೀಟೆ (ರೋಸ್ ವುಡ್), ತೇಗ (ಟೀಕ್) ಮತ್ತು ಶ್ರೀಗಂಧ (ರಕ್ತ ಚಂದನ) ಮರಗಳಿಗೆ 3 ತಿಂಗಳ ಅವಧಿಯೊಳಗೆ ಜಿಯೋ ಟ್ಯಾಗ್ ಮಾಡಿ ಇಲಾಖೆಗೆ ವಲಯವಾರು ಪಟ್ಟಿ ಸಲ್ಲಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಇದನ್ನೂ ಓದಿ: ಅರ್ಜುನ ಆನೆ ಸಾವು: ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ – ಈಶ್ವರ ಖಂಡ್ರೆ

ಇತ್ತೀಚೆಗೆ ಹಾಸನ ಜಿಲ್ಲೆ ಬೇಲೂರು ತಾಲೂಕು, ನಂದಗೋಡನಹಳ್ಳಿ, ಸಕಲೇಶಪುರದ ಕೌಡಳ್ಳಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಇಡಗುಂದಿಯೇ ಮೊದಲಾದ ಕಡೆಗಳಲ್ಲಿ ಅಕ್ರಮವಾಗಿ ನೂರಾರು ಅಮೂಲ್ಯ ಮನ್ನಾ ಜಾತಿಯ ವೃಕ್ಷಗಳನ್ನು ಕಡಿದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಶುಂಠಿ ಬೆಳೆಯ ಹೆಸರಲ್ಲಿ ಮರಗಳ ಹನನ ಆಗುತ್ತಿರುವುದನ್ನು ತಪ್ಪಿಸಲು ಶ್ರೀಗಂಧ, ತೇಗ ಮತ್ತು ಬೀಟೆ ಮರಗಳ ಜಿಯೋ ಟ್ಯಾಗ್ ಮಾಡಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

ಅರಣ್ಯದೊಳಗೆ ಬೆಲೆ ಬಾಳುವ ಮರ ಕಡಿದು ಸಾಗಾಟ ಮಾಡಲು ಸಾಧ್ಯವಾಗದಂತೆ ಕಳ್ಳಬೇಟೆ ನಿಗ್ರಹ ತಂಡಗಳನ್ನು ನಿಯೋಜಿಸಲಾಗಿದೆ. ಆದರೆ ಕಾಡಿನಂಚಿನಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ, ಅರಣ್ಯ ಇಲಾಖೆ ಗುತ್ತಿಗೆ ನೀಡಿರುವ ಎಸ್ಟೇಟ್ ಹಾಗೂ ಪಟ್ಟಾ ಜಮೀನಿನಲ್ಲಿರುವ ಬೆಲೆಬಾಳುವ ವೃಕ್ಷಗಳ ಸಂರಕ್ಷಣೆ ಇಲಾಖೆಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜಿಯೋ ಟ್ಯಾಗ್ ಮಾಡಿದರೆ ವೃಕ್ಷ ಸಂರಕ್ಷಣಾ ಕಾಯಿದೆ ಅಡಿ ಪೂರ್ವಾನುಮತಿ ಪಡೆಯದೆ ಮರ ಕಡಿಯಲು ಸಾಧ್ಯವಾಗುವುದಿಲ್ಲ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ