AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್ : ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ

ಕೊರೋನಾ ಹಾಟ್​ ಸ್ಪಾಟ್​ ಆಗಿರುವ ಘಾನಾ ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಏರ್​ಪೋರ್ಟ್​ನಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ​

ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್ : ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 17, 2021 | 8:02 PM

Share

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆತಂಕ ಕಡಿಮೆಯಾಗಿಲ್ಲ. ಈ ನಡುವೆ ಒಮಿಕ್ರಾನ್​ ಪ್ರಕರಣಗಳು ದಾಖಲಾಗುತ್ತಿವೆ. ವಿದೇಶಿ ಪ್ರಯಾಣಿಕರ ಆಗಮನದಿಂದ ರಾಜ್ಯದಲ್ಲಿ ಸೋಂಕು ಹರಡುವ ಅತಂಕ ಎದುರಾಗಿದೆ. ಇದೀಗ ಕೊರೋನಾ ಹಾಟ್​ ಸ್ಪಾಟ್​ ಆಗಿರುವ ಘಾನಾ ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಏರ್​ಪೋರ್ಟ್​ನಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ​ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಸೋಂಕಿತ ವ್ಯಕ್ತಿಯನ್ನು ಏರ್​ಪೋರ್ಟ ಸಿಬ್ಬಂದಿ ವೆನ್​ಲಾಕ್​ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಾಸಿಟಿವ್​ ಬಂದ ಪ್ರಯಾಣಿಕನ ಗಂಟಲು ದ್ರವ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಜಿನೋಮಿಕ್​ ಸೀಕ್ವೆನ್ಸಿಂಗ್​ಗಾಗಿ ಬೆಂಗಳೂರಿಗೆ ಸ್ಯಾಂಪಲ್ ರವಾನೆ ಮಾಡಲಾಗಿದೆ. ಜತೆಗೆ ಸೋಂಕಿತನ ಹತ್ತಿರದ ಸೀಟ್​ನಲ್ಲಿದ್ದ 27 ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗಿದೆ. ಮಂಗಳೂರು ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ನೇತೃತ್ವದಲ್ಲಿ ತುರ್ತು ಸಭೆ ನಡೆಸಿದ್ದಾರೆ. ಏರ್​ಪೋರ್ಟ್ ಮುಖ್ಯಸ್ಥರು, ಏರ್​ಪೋರ್ಟ್​ ಆರೋಗ್ಯಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಕೊವಿಡ್​ ನೋಡಲ್​ ಅಧಿಕಾರಿ ಹಾಗೂ ಅಪೋಲೊ ಲ್ಯಾಬ್​ ಮುಖ್ಯಸ್ಥರ ಜತೆ ಡಿಸಿ ಡಾ.ರಾಜೇಂದ್ರ ಸಭೆ ನಡೆಸಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದಲ್ಲಿ ತಪಾಸಣೆ ಬಿಗಿಗೊಳಿಸುವಂತೆ ಡಿಸಿ ಸೂಚನೆ ನೀಡಿದ್ದಾರೆ.

ದೇಶದಲ್ಲಿ ಕೊರೋನಾ ಜೆತೆಗೆ ಒಮಿಕ್ರಾನ್ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ದೇಶದ 11 ರಾಜ್ಯಗಳಿಗೆ ಒಮಿಕ್ರಾನ್​ ಹರಡಿದ್ದು ಒಟ್ಟು 101 ಪ್ರಕರಣಗಳು ಈವರೆಗೆ ದಾಖಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಒಮಿಕ್ರಾನ್​ ಸೋಂಕು ಇದೀಗ ಎಲ್ಲ ರಾಷ್ಟ್ರಗಳಿಗೆ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ. ಇದೀಗ ಮಂಗಳೂರಿನ ವಿಮಾನ ನಿಲ್ದಾಣದಲ್ಲಿಯೂ ಬಿಗಿ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ