Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್ : ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ

ಕೊರೋನಾ ಹಾಟ್​ ಸ್ಪಾಟ್​ ಆಗಿರುವ ಘಾನಾ ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಏರ್​ಪೋರ್ಟ್​ನಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ​

ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್ : ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Dec 17, 2021 | 8:02 PM

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆತಂಕ ಕಡಿಮೆಯಾಗಿಲ್ಲ. ಈ ನಡುವೆ ಒಮಿಕ್ರಾನ್​ ಪ್ರಕರಣಗಳು ದಾಖಲಾಗುತ್ತಿವೆ. ವಿದೇಶಿ ಪ್ರಯಾಣಿಕರ ಆಗಮನದಿಂದ ರಾಜ್ಯದಲ್ಲಿ ಸೋಂಕು ಹರಡುವ ಅತಂಕ ಎದುರಾಗಿದೆ. ಇದೀಗ ಕೊರೋನಾ ಹಾಟ್​ ಸ್ಪಾಟ್​ ಆಗಿರುವ ಘಾನಾ ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಏರ್​ಪೋರ್ಟ್​ನಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ​ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಸೋಂಕಿತ ವ್ಯಕ್ತಿಯನ್ನು ಏರ್​ಪೋರ್ಟ ಸಿಬ್ಬಂದಿ ವೆನ್​ಲಾಕ್​ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಾಸಿಟಿವ್​ ಬಂದ ಪ್ರಯಾಣಿಕನ ಗಂಟಲು ದ್ರವ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಜಿನೋಮಿಕ್​ ಸೀಕ್ವೆನ್ಸಿಂಗ್​ಗಾಗಿ ಬೆಂಗಳೂರಿಗೆ ಸ್ಯಾಂಪಲ್ ರವಾನೆ ಮಾಡಲಾಗಿದೆ. ಜತೆಗೆ ಸೋಂಕಿತನ ಹತ್ತಿರದ ಸೀಟ್​ನಲ್ಲಿದ್ದ 27 ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗಿದೆ. ಮಂಗಳೂರು ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ನೇತೃತ್ವದಲ್ಲಿ ತುರ್ತು ಸಭೆ ನಡೆಸಿದ್ದಾರೆ. ಏರ್​ಪೋರ್ಟ್ ಮುಖ್ಯಸ್ಥರು, ಏರ್​ಪೋರ್ಟ್​ ಆರೋಗ್ಯಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಕೊವಿಡ್​ ನೋಡಲ್​ ಅಧಿಕಾರಿ ಹಾಗೂ ಅಪೋಲೊ ಲ್ಯಾಬ್​ ಮುಖ್ಯಸ್ಥರ ಜತೆ ಡಿಸಿ ಡಾ.ರಾಜೇಂದ್ರ ಸಭೆ ನಡೆಸಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದಲ್ಲಿ ತಪಾಸಣೆ ಬಿಗಿಗೊಳಿಸುವಂತೆ ಡಿಸಿ ಸೂಚನೆ ನೀಡಿದ್ದಾರೆ.

ದೇಶದಲ್ಲಿ ಕೊರೋನಾ ಜೆತೆಗೆ ಒಮಿಕ್ರಾನ್ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ದೇಶದ 11 ರಾಜ್ಯಗಳಿಗೆ ಒಮಿಕ್ರಾನ್​ ಹರಡಿದ್ದು ಒಟ್ಟು 101 ಪ್ರಕರಣಗಳು ಈವರೆಗೆ ದಾಖಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಒಮಿಕ್ರಾನ್​ ಸೋಂಕು ಇದೀಗ ಎಲ್ಲ ರಾಷ್ಟ್ರಗಳಿಗೆ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ. ಇದೀಗ ಮಂಗಳೂರಿನ ವಿಮಾನ ನಿಲ್ದಾಣದಲ್ಲಿಯೂ ಬಿಗಿ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್