AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್ : ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ

ಕೊರೋನಾ ಹಾಟ್​ ಸ್ಪಾಟ್​ ಆಗಿರುವ ಘಾನಾ ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಏರ್​ಪೋರ್ಟ್​ನಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ​

ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್ : ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 17, 2021 | 8:02 PM

Share

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆತಂಕ ಕಡಿಮೆಯಾಗಿಲ್ಲ. ಈ ನಡುವೆ ಒಮಿಕ್ರಾನ್​ ಪ್ರಕರಣಗಳು ದಾಖಲಾಗುತ್ತಿವೆ. ವಿದೇಶಿ ಪ್ರಯಾಣಿಕರ ಆಗಮನದಿಂದ ರಾಜ್ಯದಲ್ಲಿ ಸೋಂಕು ಹರಡುವ ಅತಂಕ ಎದುರಾಗಿದೆ. ಇದೀಗ ಕೊರೋನಾ ಹಾಟ್​ ಸ್ಪಾಟ್​ ಆಗಿರುವ ಘಾನಾ ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಏರ್​ಪೋರ್ಟ್​ನಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ​ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಸೋಂಕಿತ ವ್ಯಕ್ತಿಯನ್ನು ಏರ್​ಪೋರ್ಟ ಸಿಬ್ಬಂದಿ ವೆನ್​ಲಾಕ್​ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಾಸಿಟಿವ್​ ಬಂದ ಪ್ರಯಾಣಿಕನ ಗಂಟಲು ದ್ರವ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಜಿನೋಮಿಕ್​ ಸೀಕ್ವೆನ್ಸಿಂಗ್​ಗಾಗಿ ಬೆಂಗಳೂರಿಗೆ ಸ್ಯಾಂಪಲ್ ರವಾನೆ ಮಾಡಲಾಗಿದೆ. ಜತೆಗೆ ಸೋಂಕಿತನ ಹತ್ತಿರದ ಸೀಟ್​ನಲ್ಲಿದ್ದ 27 ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗಿದೆ. ಮಂಗಳೂರು ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಗೆ ಕೊರೋನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ನೇತೃತ್ವದಲ್ಲಿ ತುರ್ತು ಸಭೆ ನಡೆಸಿದ್ದಾರೆ. ಏರ್​ಪೋರ್ಟ್ ಮುಖ್ಯಸ್ಥರು, ಏರ್​ಪೋರ್ಟ್​ ಆರೋಗ್ಯಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಕೊವಿಡ್​ ನೋಡಲ್​ ಅಧಿಕಾರಿ ಹಾಗೂ ಅಪೋಲೊ ಲ್ಯಾಬ್​ ಮುಖ್ಯಸ್ಥರ ಜತೆ ಡಿಸಿ ಡಾ.ರಾಜೇಂದ್ರ ಸಭೆ ನಡೆಸಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದಲ್ಲಿ ತಪಾಸಣೆ ಬಿಗಿಗೊಳಿಸುವಂತೆ ಡಿಸಿ ಸೂಚನೆ ನೀಡಿದ್ದಾರೆ.

ದೇಶದಲ್ಲಿ ಕೊರೋನಾ ಜೆತೆಗೆ ಒಮಿಕ್ರಾನ್ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ದೇಶದ 11 ರಾಜ್ಯಗಳಿಗೆ ಒಮಿಕ್ರಾನ್​ ಹರಡಿದ್ದು ಒಟ್ಟು 101 ಪ್ರಕರಣಗಳು ಈವರೆಗೆ ದಾಖಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಒಮಿಕ್ರಾನ್​ ಸೋಂಕು ಇದೀಗ ಎಲ್ಲ ರಾಷ್ಟ್ರಗಳಿಗೆ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ. ಇದೀಗ ಮಂಗಳೂರಿನ ವಿಮಾನ ನಿಲ್ದಾಣದಲ್ಲಿಯೂ ಬಿಗಿ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್