ಯಡಕುಮಾರಿ–ಶ್ರೀವಾಗಿಲು ರೈಲು ನಿಲ್ದಾಣಗಳ ನಡುವೆ ಭೂಕುಸಿತ: ಕರಾವಳಿ-ಬೆಂಗಳೂರು ಸಂಪರ್ಕಿಸುವ ಹಲವು ರೈಲುಗಳ ಸಂಚಾರ ವ್ಯತ್ಯಯ

ಮೈಸೂರು ವಿಭಾಗದ ಯಡಕುಮಾರಿ–ಶ್ರೀವಾಗಿಲು ನಡುವೆ ಭಾರಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರು-ಕರಾವಳಿ ಸಂಪರ್ಕಿಸುವ ಹಲವು ರೈಲುಗಳ ಸಂಚಾರ ರದ್ದು ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಸಂಚಾರ ಪುನರಾರಂಭಕ್ಕೆ ಅಗತ್ಯ ಕೆಲಸಗಳು ನಡೆಯುತ್ತಿದ್ದು, ಯಾವೆಲ್ಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂಬ ಮಾಹಿತಿ ಇಲ್ಲಿದೆ.

ಯಡಕುಮಾರಿ–ಶ್ರೀವಾಗಿಲು ರೈಲು ನಿಲ್ದಾಣಗಳ ನಡುವೆ ಭೂಕುಸಿತ: ಕರಾವಳಿ-ಬೆಂಗಳೂರು ಸಂಪರ್ಕಿಸುವ ಹಲವು ರೈಲುಗಳ ಸಂಚಾರ ವ್ಯತ್ಯಯ
ರೈಲುಗಳ ಸಂಚಾರದಲ್ಲಿ ವ್ಯತ್ಯಯ
Edited By:

Updated on: Aug 02, 2026 | 6:41 AM

ಬೆಂಗಳೂರು, ಆಗಸ್ಟ್​​ 02: ತೀವ್ರ ಮಳೆಯ ಪರಿಣಾಮ ಮೈಸೂರು ವಿಭಾಗದ ಯಡಕುಮಾರಿ–ಶ್ರೀವಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯಲ್ಲಿ ಶನಿವಾರ ರಾತ್ರಿ ಸುಮಾರು 8.45ರ ವೇಳೆಗೆ ಭೂಕುಸಿತ ಸಂಭವಿಸಿದೆ. ಘಟನೆಯ ಪರಿಣಾಮ ಕರಾವಳಿ ಮತ್ತು ಬೆಂಗಳೂರು ಸಂಪರ್ಕಿಸುವ ಹಲವು ರೈಲುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎಂದು ದಕ್ಷಿಣ ಪಶ್ಚಿಮ ರೈಲ್ವೆ ತಿಳಿಸಿದೆ. ಹಲವು ರೈಲುಗಳ ಸಂಚಾರ ರದ್ದಾಗಿ, ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಯಾವೆಲ್ಲ ರೈಲುಗಳ ಸಂಚಾರ ವ್ಯತ್ಯಯ?

  • ಆಗಸ್ಟ್​​ 01ರಂದು ಬೆಂಗಳೂರಿನಿಂದ ಹೊರಟಿದ್ದ ರೈಲು ಸಂಖ್ಯೆ 16585 SMVT ಬೆಂಗಳೂರು – ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣ ಹಾಸನದಲ್ಲಿ ಭಾಗಶಃ ರದ್ದಾಗಿದೆ.
  • ರೈಲು ಸಂಖ್ಯೆ 16511 KSR ಬೆಂಗಳೂರು – ಕೋಝಿಕ್ಕೋಡ್ ಎಕ್ಸ್‌ಪ್ರೆಸ್ ಪ್ರಯಾಣ ಕೂಡ ಹಾಸನದಲ್ಲಿ ಭಾಗಶಃ ರದ್ದಾಗಿದೆ.ನಿನ್ನೆ ವಿಜಯಪುರದಿಂದ ಆರಂಭವಾಗಿದ್ದ ರೈಲು ಸಂಖ್ಯೆ 17377 ವಿಜಯಪುರ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣದಲ್ಲಿಯೂ ವ್ಯತ್ಯಯವಾಗಿದೆ.
  • ರೈಲು ಸಂಖ್ಯೆ 16595 ಕೆಎಸ್‌ಆರ್ ಬೆಂಗಳೂರು – ಕಾರವಾರ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಸಕಲೇಶಪುರದಿಂದ ಕಾರವಾರ ನಡುವೆ ಭಾಗಶಃ ರದ್ದಾಗಿದೆ.
  • ರೈಲು ಸಂಖ್ಯೆ 16586 ಮುರುಡೇಶ್ವರ – SMVT ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಸಂಚಾರ ಕೂಡ ಸುಬ್ರಹ್ಮಣ್ಯ ರಸ್ತೆ ಮತ್ತು SMVT ಬೆಂಗಳೂರಿನ ನಡುವೆ ಭಾಗಶಃ ರದ್ದಾಗಿದೆ.
  • ಆಗಸ್ಟ್​​ 01ರಂದು ಕೋಝಿಕ್ಕೋಡ್​​ನಿಂದ ಆರಂಭವಾದ ರೈಲು ಸಂಖ್ಯೆ 16512 ಕೋಝಿಕ್ಕೋಡ್ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಪ್ರಯಾಣವು ಬೆಂಗಳೂರು ನಿಲ್ದಾಣದ ಬದಲಿಗೆ ಕಬಕ ಪುತ್ತೂರಿನಲ್ಲಿ ಭಾಗಶಃ ರದ್ದಾಗಿದೆ.
  • ಮಂಗಳೂರು ಸೆಂಟ್ರಲ್ ನಿಂದ ಆರಂಭವಾದ ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್ – ವಿಜಯಪುರ ಎಕ್ಸ್‌ಪ್ರೆಸ್ ಪ್ರಯಾಣವು ವಿಜಯಪುರ ನಿಲ್ದಾಣದ ಬದಲಿಗೆ ಸುಬ್ರಹ್ಮಣ್ಯ ರಸ್ತೆಯಲ್ಲಿ ಭಾಗಶಃ ರದ್ದಾಗಿದೆ.
  • ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ – ಯಶವಂತಪುರ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್​​ನ ಸಂಚಾರ ಕೂಡ ರದ್ದಾಗಿದೆ.

ಇದನ್ನೂ ಓದಿ: ಕೊಡಗಿನಲ್ಲಿ ಭಾರಿ ಮಳೆ: ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ

ಭಾರೀ ಮಳೆಯಿಂದಾಗಿ ಪದೇ ಪದೇ ಭೂಕುಸಿತ ಸಂಭವಿಸಿದ ಸ್ಥಳಗಳಲ್ಲಿ ತೆರವು ಕೆಲಸ ನಡೆಯುತ್ತಿದ್ದು, ಹೆಚ್ಚುವರಿ ಹಿಟಾಚಿ ಯಂತ್ರಗಳನ್ನು ನಿಯೋಜಿಸಲಾಗಿದೆ. ನೈಋತ್ಯ ರೈಲ್ವೆ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿ ಮೇಲ್ವಿಚಾರಣೆ ಮಾಡುತ್ತಿದ್ದು, ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗಿದ್ದಕ್ಕೆ ತೀವ್ರವಾಗಿ ವಿಷಾದಿಸುತ್ತೇವೆ ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us