AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇತಗಳಿಗೆ ವಿವಾಹನಾ? ಇಂತಹದೊಂದು ವಿಶಿಷ್ಟ ಆಚರಣೆ ಕರ್ನಾಟಕದಲ್ಲಿ ಎಲ್ಲಿ ನಡೆಯುತ್ತೆ? ಇದು ನಿಜನಾ?

ಕರಾವಳಿಯ ಉಡುಪಿ ಜಿಲ್ಲೆಯ ಆಚಾರ ವಿಚಾರ ಮತ್ತು ವಿಶಿಷ್ಟ ಪದ್ದತಿಗಳ ಮೂಲಕ ರಾಜ್ಯದಲ್ಲಿಯೇ ಒಂದು ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಜಿಲ್ಲೆ. ಇಲ್ಲಿ ದೈವ ಮತ್ತು ದೇವರುಗಳ ವಿಚಾರದಲ್ಲಿ ವಿಶೇಷವಾದ ಭಕ್ತಿ ಮತ್ತು ಅದಕ್ಕೆ ಸಂಬಂಧಿಸಿದ ವಿಶೇಷ ಆಚರಣೆಗಳನ್ನು ಕೂಡ ನೋಡಬಹುದು. ಇತ್ತೀಚಿಗೆ ಕರಾವಳಿಯ ಜಿಲ್ಲೆಯಲ್ಲಿ ಪ್ರೇತ ಮದುವೆಯ ಜಾಹೀರಾತು ಸಾಕಷ್ಟು ಸುದ್ದಿ ಮಾಡಿತ್ತು.

ಪ್ರೇತಗಳಿಗೆ ವಿವಾಹನಾ? ಇಂತಹದೊಂದು ವಿಶಿಷ್ಟ ಆಚರಣೆ ಕರ್ನಾಟಕದಲ್ಲಿ ಎಲ್ಲಿ ನಡೆಯುತ್ತೆ? ಇದು ನಿಜನಾ?
ಪ್ರೇತಗಳಿಗೆ ವಿವಾಹನಾ? ಇಂತಹದೊಂದು ವಿಶಿಷ್ಟ ಆಚರಣೆ ಕರ್ನಾಟಕದಲ್ಲಿ ಎಲ್ಲಿ ನಡೆಯುತ್ತೆ? ಇದು ನಿಜನಾ?
ಅಮೀನ್​ ಸಾಬ್​
| Edited By: |

Updated on: Jun 17, 2024 | 7:55 PM

Share

ಉಡುಪಿ, ಜೂನ್ 17: ಹಿಂದೂ ಸಂಪ್ರದಾಯದಲ್ಲಿ ಶೋಡಶ ಸಂಸ್ಕಾರಕ್ಕೆ ಅತ್ಯಂತ ಮಹತ್ವವಿದೆ. ಅದರಲ್ಲೂ ಶೋಡಶ ಸಂಸ್ಕಾರದಲ್ಲಿ ಬರುವ ವಿವಾಹಕ್ಕೆ (marriage) ಹೆಚ್ಚಿನ ಪ್ರಾಶಸ್ತ್ಯವಿದೆ. ಹುಟ್ಟಿನಿಂದ ಸಾಯುವ ದಿನದ ಒಳಗೆ ವಿವಾಹಿತನಾಗಿ ಸಂಸಾರ ಜೀವನ ನಡೆಸಬೇಕು ಎನ್ನುವುದು ಇಂದು ಶಾಸ್ತ್ರದಲ್ಲಿ ತಿಳಿಸಲಾಗಿದೆ. ಇನ್ನು ಈ ಶೋಡಶ ಸಂಸ್ಕಾರದ ಪ್ರಮುಖ ಅಂಗವಾಗಿರುವ ವಿವಾಹವು ಮರಣ ನಂತರವೂ ಕೂಡ ಬೇಕು ಎನ್ನುವುದಕ್ಕೆ ಪ್ರೇತ (Ghost) ಮದುವೆ ಸಾಕ್ಷಿ‌. ಹಾಗಾದರೆ ಏನಿದು ಪ್ರೇತ ಮದುವೆ ಅಂತೀರಾ ಈ ಸ್ಟೋರಿ ಓದಿ.

ಹೌದು ಕರಾವಳಿಯ ಉಡುಪಿ ಜಿಲ್ಲೆಯ ಆಚಾರ ವಿಚಾರ ಮತ್ತು ವಿಶಿಷ್ಟ ಪದ್ದತಿಗಳ ಮೂಲಕ ರಾಜ್ಯದಲ್ಲಿಯೇ ಒಂದು ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಜಿಲ್ಲೆ. ಇಲ್ಲಿ ದೈವ ಮತ್ತು ದೇವರುಗಳ ವಿಚಾರದಲ್ಲಿ ವಿಶೇಷವಾದ ಭಕ್ತಿ ಮತ್ತು ಅದಕ್ಕೆ ಸಂಬಂಧಿಸಿದ ವಿಶೇಷ ಆಚರಣೆಗಳನ್ನು ಕೂಡ ನೋಡಬಹುದು. ಇತ್ತೀಚಿಗೆ ಕರಾವಳಿಯ ಜಿಲ್ಲೆಯಲ್ಲಿ ಪ್ರೇತ ಮದುವೆಯ ಜಾಹೀರಾತು ಸಾಕಷ್ಟು ಸುದ್ದಿ ಮಾಡಿತ್ತು.

ಇದನ್ನೂ ಓದಿ: ನಾಗರ ಪಂಚಮಿಯಂದು ಇಲ್ಲಿ ನಡೆಯಲ್ಲ ಪೂಜೆ; ಮುಗ್ಗೇರ ಜನಾಂಗ ಆರಾಧಿಸುವ ಈ ನಾಗಾರಾಧನೆಯಲ್ಲಿದೆ ವಿಶಿಷ್ಟ ಹರಕೆ

ಪ್ರೇತಗಳ ಮದುವೆ ಮಾಡಿಸುವ ವಿಡಿಯೋ ಒಂದು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿತ್ತು. ಇದು ನಿಜನ? ಅಥವಾ ಸುಮ್ಮನೆ ಲೈಕ್ ಸಬ್‌ಸ್ಕ್ರೈಬರ್​ ಗೋಸ್ಕರ ಮಾಡಿದ ಗಿಮಿಕ್ಕಾ ಎನ್ನುವ ಕುತೂಹಲ ಸಾಕಷ್ಟ ಜನರಲ್ಲಿದೆ. ಇದು ನಿಜ ಎನ್ನಲು ಸಾಕ್ಷಿ ದೇವಾಲಯಗಳ ನಗರಿ ಬಾರಕೂರಿನಲ್ಲಿ ಸಿಗುತ್ತದೆ. ಬಾರಕೂರು ಕೂಡ್ಲಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನೂರಾರು ವರ್ಷದಿಂದ ಪ್ರತೀ ಅಮಾವಾಸ್ಯೆಯ ದಿನ ಪ್ರೇತಗಳ ಮದುವೆ ನಡೆಯುತ್ತದೆ.

ಬಾರಕೂರು ಕೂಡ್ಲಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪ್ರೇತ ವಿವಾಹ ಇಲ್ಲಿನ ಅರ್ಚಕ ಗಣಪತಿ ಉಡುಪ ಮತ್ತು ಬಳಗದವರಿಂದ ನಡೆಯುತ್ತದೆ. ಆಕಸ್ಮಿಕ, ಅಕಾಲ ಮರಣಹೊಂದಿದ ಗಂಡು ಅಥವಾ ಹೆಣ್ಣುಗಳು ಅನೇಕ ಆಸೆ, ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳದೆ ಅಗೋಚರವಾಗಿ ಪ್ರೇತಗಳಾಗಿ ಇರುತ್ತದೆ ಮತ್ತು ಪ್ರಾಯ ಕಳೆದಂತೆ ಆಸೆಯನ್ನು ನೆರವೇರಿಸುವಂತೆ ಕುಟುಂಬವನ್ನು ಕಾಡುತ್ತಾ ಇದ್ದು ಪೀಡನೆ ನೀಡುತ್ತಿರುವುದಕ್ಕೆ ಪ್ರೇತಗಳಿಗೆ ವಿವಾಹ ಶಾಸ್ತ್ರ ಮಾಡಿ ಬಳಿಕ ಸದ್ಗತಿ ಮಾಡಲಾಗುತ್ತದೆ.

ದೇವಸ್ಥಾನದ ಎದುರು ಭಾಗದಲ್ಲಿರಿರುವ ಶಂಖ ತೀರ್ಥ ಸರೋವರದಲ್ಲಿ ಪ್ರೇತವನ್ನು ಆಕರ್ಷಿಸಿ ಇರಿಸಲಾದ ತೆಂಗಿನ ಕಾಯಿ ಮೂಲಕ ನಾನಾ ಕರ್ಮಾಂಗ ಮಾಡಿ ಬಳಿಕ ದೇವಸ್ಥಾನದ ಎದುರು ಭಾಗದಲ್ಲಿ 2 ತೆಂಗಿನ ಗಿಡಕ್ಕೆ ಗಂಡು ಹೆಣ್ಣಿಗೆ ಮಧುವಣಗಿತ್ತಿಗೆ ಅಲಂಕಾರ ಮಾಡಿದಂತೆ ಸೀರೆ ಪಂಚೆ ಶಾಲು ಕಾಲುಂಗುರ ಕರಿಯಮಣೆ ನೀಡಿ ಬೇರೆ ಗೋತ್ರ ಅಥವಾ ಬಳಿಯವರೊಂದಿಗೆ ತಾಂಬೂಲ ಬದಲಾವಣೆ ಮಾಡಿ ಬಳಿಕ ಮದುವೆ ಶಾಸ್ತ್ರ ಮಾಡಲಾಗುತ್ತದೆ. ಬಳಿಕ ತೆಂಗಿನಕಾಯಿಯಲ್ಲಿ ಆವಾಹನೆ ಮಾಡಲಾದ ಪ್ರೇತವನ್ನು ಮತ್ತೊಂದು ತೆಂಗಿನ ಕಾಯಿಜೊತೆ ಅವರಿಗೆ ಸಂಭಂದಿಸಿದ ದೈವಸ್ಥಾನದಲ್ಲಿ ಒಡೆಯಲಾಗುತ್ತದೆ.

ಇದನ್ನೂ ಓದಿ: ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ತೆರಳುವವರಿಗೆ ಕಹಿ ಸುದ್ದಿ! ಮಲ್ಪೆ ಬೀಚ್ ಪ್ರವೇಶ ನಿಷೇಧ

ಇದು ನೂರಾರು ವರ್ಷದಿಂದ ನಡೆದುಕೊಂಡು ಬಂದ ಧಾರ್ಮಿಕ ವಿಧಿಯಾಗಿದ್ದು ವಿಜ್ಞಾನಯುಗದಲ್ಲೂ ಮುಂದುವರಿಯುತ್ತಿದೆ. ಇಂದಿಗೂ ಕೂಡ ಸಮಸ್ಯೆಯಿಂದ ಸಂತ್ರಸ್ಥರಾದವರು ಇಲ್ಲಿ ಪ್ರೇತಗಳ ವಿವಾಹಗಳ ಮಾಡುವ ಮೂಲಕ ನೆಮ್ಮದಿ ಕಾಣುತ್ತಿರುವುದು ಆಧುನಿಕ ಜಗತ್ತಿಗೆ ಸವಾಲು ಎಂದರೆ ತಪ್ಪಾಗಲಾರದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?