AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ನಡೆಯುತ್ತದೆ ಸತ್ತವರಿಗೂ ಮದುವೆ; ಇದು ತುಳುನಾಡಿನ ಪ್ರೇತ ಕಲ್ಯಾಣ

18 ವರ್ಷಕ್ಕಿಂತ ಮುನ್ನ ಕುಟುಂಬದಲ್ಲಿ ಯಾರಾದರೂ ಮೃತಪಟ್ಟಿದ್ದರೆ ಅವರಿಗೆ ಅವರದ್ದೇ ಜಾತಿಯಲ್ಲಿ ಮೃತ ವರ ಅಥವಾ ವಧುವನ್ನು ಹುಡುಕಿ ಮದುವೆ ಮಾಡಿಸುವ ಸಂಪ್ರದಾ ದಕ್ಷಿಣ ಕನ್ನಡ ಮತ್ತು ಕೇರಳದ ಉತ್ತರ ಜಿಲ್ಲೆಯಾದ ಕಾಸರಗೋಡಿನ ತುಳುಭಾಷಿಗರಲ್ಲಿ ಇದೆ. ಇಲ್ಲಿನ ಕೆಲವು ಜಾತಿಯ ಜನರು ಈ ಸಂಪ್ರದಾಯವನ್ನು ಆಚರಿಸುತ್ತಿದ್ದು ಮೃತರ ಆತ್ಮಕ್ಕೆ ಶಾಂತಿ ಸಿಗಲು ಪ್ರೇತ ಮದುವೆಯನ್ನು ನೆರವೇರಿಸುತ್ತಾರೆ. ಈ ವಿಶಿಷ್ಟ ಆಚರಣೆ ಬಗ್ಗೆ ಬೆಳಕು ಚೆಲ್ಲುವ ಲೇಖನ ಇಲ್ಲಿದೆ.

ಇಲ್ಲಿ ನಡೆಯುತ್ತದೆ ಸತ್ತವರಿಗೂ ಮದುವೆ; ಇದು ತುಳುನಾಡಿನ ಪ್ರೇತ ಕಲ್ಯಾಣ
Image Credit source: X/@anny_arun
ರಶ್ಮಿ ಕಲ್ಲಕಟ್ಟ
|

Updated on:Apr 22, 2024 | 11:28 AM

Share

ಮದುವೆ- ಪ್ರತಿಯೊಂದು ಜಾತಿ, ಸಮುದಾಯ, ವರ್ಗದಲ್ಲಿ ವಿಭಿನ್ನ ಸಂಪ್ರದಾಯಗಳೊಂದಿಗೆ ನಡೆಯುತ್ತದೆ. ಸಾಮಾನ್ಯವಾಗಿ ಶುಭ ಕಾರ್ಯಗಳು ಆಷಾಢ ಮಾಸದಲ್ಲಿ ನಡೆಯುವುದಿಲ್ಲ. ಆದರೆ ದಕ್ಷಿಣ ಕನ್ನಡದ ಕರಾವಳಿ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಆಟಿ ತಿಂಗಳು (ಆಷಾಢ ಮಾಸ)ದಲ್ಲಿ ಮದುವೆ ನಡೆಯುತ್ತದೆ. ಅದು ಅಂತಿಂಥ ಮದುವೆಯಲ್ಲ ಪ್ರೇತಗಳ ಮದುವೆ! . ಅಚ್ಚರಿ ಎಂದೆನಿಸಿದರೂ ಇದು ಸತ್ಯ. ಇಲ್ಲಿ ಸಾಮಾನ್ಯ ಜನರ ಮದುವೆಯಂತೆಯೇ ಇಹಲೋಕ ತ್ಯಜಿಸಿದ ಗಂಡು ಮತ್ತು ಹೆಣ್ಣಿನ ಮದುವೆ ಸಾಂಪ್ರದಾಯಿಕ ರೀತಿಯಲ್ಲಿ ನಡೆಸಲಾಗುತ್ತದೆ. ಮದುವೆ ನಿಶ್ಚಿತಾರ್ಥದಿಂದ ಹಿಡಿದು ಕನ್ಯಾದಾನ, ಮಾಂಗಲ್ಯ ಧಾರಣೆ, ಹೆಣ್ಣಿನ ಗೃಹ ಪ್ರವೇಶ ಎಲ್ಲವನ್ನೂ ತುಂಬಾ ಅಚ್ಚುಕಟ್ಟಾಗಿ ಮಾಡಲಾಗುತ್ತದೆ. ಇತ್ತೀಚಿಗೆ ಇಂಥಾ ಪ್ರೇತ ಮದುವೆಗಳ ಸಂಖ್ಯೆ ಕಡಿಮೆ ಆಗಿದ್ದರೂ, ಗ್ರಾಮ ಪ್ರದೇಶದ ಜನರ ನಂಬಿಕೆಯಂತೆ ಅಲ್ಲೊಂದು ಇಲ್ಲೊಂದು ಮದುವೆಗಳು ನಡೆಯುತ್ತಿವೆ. ಈ ನಂಬಿಕೆ, ವಿಶಿಷ್ಟ ಆಚರಣೆ ಬಗ್ಗೆ ಮತ್ತಷ್ಟು ತಿಳಿಯೋಣ… ಈ ಮೊದಲೇ ಹೇಳಿದಂತೆ ಕೇರಳದ  ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ತುಳು ಭಾಷಿಗರಾಗಿರುವ  ನಲ್ಕೆದಾಯೆ, ಮೊಗೇರ, ಮಾವಿಲನ್ ಜಾತಿಯವರಲ್ಲಿ ಈ ಮದುವೆ ನಡೆಯುತ್ತದೆ. ಮದುವೆ ಆದರೆ ಮಾತ್ರ ಬದುಕು ಪರಿಪೂರ್ಣ. ಅವಿವಾಹಿತರ ಆತ್ಮ ಮೋಕ್ಷ ಸಿಗದೆ ಅಲೆದಾಡುತ್ತದೆ ಎಂಬ ನಂಬಿಕೆ ಇಲ್ಲಿಯ ಜನರದ್ದು. ಹಾಗಾಗಿ ತಮ್ಮ ಕುಟುಂಬದಲ್ಲಿ ಯಾರಾದರೂ 18 ವರ್ಷಕ್ಕಿಂತ ಮೊದಲು ಸತ್ತಿದ್ದರೆ, ಅವರ ಆತ್ಮಕ್ಕೆ ಶಾಂತಿ ಸಿಗಬೇಕು ಎಂಬ ಉದ್ದೇಶದಿಂದ ಈ ಮದುವೆ ಮಾಡಲಾಗುತ್ತದೆ. ..its a serious tradition here. For those who died in child birth, they are usually married off to...

Published On - 10:17 am, Mon, 22 April 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ