AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಮೋದಿ ಸರ್ಕಾರದಿಂದ ಮತ್ತೊಂದು ಗಿಫ್ಟ್: ಬಳ್ಳಾರಿಗೆ ಹೊಸ ನವೋದಯ ವಿದ್ಯಾಲಯ

ಕೇಂದ್ರ ಸರ್ಕಾರವು 28 ಹೊಸ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಬಳ್ಳಾರಿಯಲ್ಲಿ ಒಂದು ಹೊಸ ಶಾಲೆಯನ್ನು ಸ್ಥಾಪಿಸಲಾಗುವುದು. 28 ಹೊಸ ನವೋದಯ ವಿದ್ಯಾಲಯಗಳಿಂದ 1316 ಜನರಿಗೆ ನೇರ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಮತ್ತು ಸುಮಾರು 15680 ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎಂದು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ತಿಳಿಸಿದೆ.

ಕರ್ನಾಟಕಕ್ಕೆ ಮೋದಿ ಸರ್ಕಾರದಿಂದ ಮತ್ತೊಂದು ಗಿಫ್ಟ್: ಬಳ್ಳಾರಿಗೆ ಹೊಸ ನವೋದಯ ವಿದ್ಯಾಲಯ
ನವೋದಯ ವಿದ್ಯಾಲಯ ಕೊಪ್ಪಳ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Dec 07, 2024 | 10:56 AM

Share

ಬೆಂಗಳೂರು, ಡಿಸೆಂಬರ್ 7: ಕರ್ನಾಟಕಕ್ಕೆ ಮೂರು ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಘೋಷಣೆ ಮಾಡಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಉಡುಗೊರೆ ನೀಡಿದೆ. ಬಳ್ಳಾರಿಯಲ್ಲಿ ನವೋದಯ ವಿದ್ಯಾಲಯ ಸ್ಥಾಪಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅನುಮೋದನೆ ನೀಡಿದೆ. ಇದರ ಜತೆಗೆ, ನವೋದಯ ಯೋಜನೆಯ ವ್ಯಾಪ್ತಿಗೆ ಒಳಪಡದ ವಿವಿಧ ಜಿಲ್ಲೆಗಳಲ್ಲಿ 28 ಹೊಸ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

2024-25 ರಿಂದ 2028-29 ರವರೆಗಿನ ಐದು ವರ್ಷಗಳ ಅವಧಿಯಲ್ಲಿ 28 ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಒಟ್ಟು ಅಂದಾಜು ಹಣಕಾಸು ಅವಶ್ಯಕತೆ 2359.82 ಕೋಟಿ ರೂ. ಆಗಿದೆ. ಇದು 1944.19 ಕೋಟಿ ರೂ.ಗಳ ಬಂಡವಾಳ ವೆಚ್ಚ ಮತ್ತು 415.63 ಕೋಟಿರೂ. ಗಳ ಕಾರ್ಯಾಚರಣೆಯ ವೆಚ್ಚವನ್ನು ಒಳಗೊಂಡಿದೆ ಎಂದು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಯೋಜನೆಯ ಅನುಷ್ಠಾನಕ್ಕೆ 560 ವಿದ್ಯಾರ್ಥಿಗಳ ಸಾಮರ್ಥ್ಯದೊಂದಿಗೆ ಪೂರ್ಣ ಪ್ರಮಾಣದ ನವೋದಯ ವಿದ್ಯಾಲಯವನ್ನು ಸ್ಥಾಪಿಸಬೇಕಿದೆ. ಇದಕ್ಕಾಗಿ ಸಮಿತಿಯು ನಿರ್ಧರಿಸಿದ ನಿಯಮಗಳ ಪ್ರಕಾರ, ಆಡಳಿತ ರಚನೆಯಲ್ಲಿ ಹುದ್ದೆಗಳನ್ನು ರಚಿಸುವ ಅಗತ್ಯವಿದೆ. ಇದರಿಂದ 560 x 28 = 15680 ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ.

1316 ಜನರಿಗೆ ನೇರ ಖಾಯಂ ಉದ್ಯೋಗ

ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ, ಪೂರ್ಣ ಪ್ರಮಾಣದ ನವೋದಯ ವಿದ್ಯಾಲಯವು 47 ಜನರಿಗೆ ಉದ್ಯೋಗವನ್ನು ಒದಗಿಸುತ್ತದೆ ಮತ್ತು ಅದರ ಪ್ರಕಾರ ಮಂಜೂರಾದ 28 ನವೋದಯ ವಿದ್ಯಾಲಯಗಳು 1316 ಜನರಿಗೆ ನೇರ ಖಾಯಂ ಉದ್ಯೋಗವನ್ನು ಒದಗಿಸುತ್ತವೆ. ಶಾಲಾ ಮೂಲಸೌಕರ್ಯಗಳನ್ನು ನಿರ್ಮಿಸಲು ನಿರ್ಮಾಣ ಮತ್ತು ಸಂಬಂಧಿತ ಚಟುವಟಿಕೆಗಳು ಅನೇಕ ಕುಶಲ ಮತ್ತು ಕೌಶಲ್ಯರಹಿತ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ. ಅದರ ವಸತಿ ಸ್ವರೂಪದಿಂದಾಗಿ ಪ್ರತಿ ನವೋದಯ ವಿದ್ಯಾಲಯವು ಸ್ಥಳೀಯ ಮಾರಾಟಗಾರರಿಗೆ ಆಹಾರ, ಉಪಭೋಗ್ಯ ವಸ್ತುಗಳು, ಪೀಠೋಪಕರಣಗಳು, ಬೋಧನಾ ಸಾಮಗ್ರಿಗಳು ಇತ್ಯಾದಿಗಳನ್ನು ಪೂರೈಸಲು ಮತ್ತು ಕ್ಷೌರಿಕರು, ಟೈಲರ್‌ ಗಳು, ಚಮ್ಮಾರರು, ಮನೆಗೆಲಸ ಮತ್ತು ಭದ್ರತಾ ಸೇವೆಗಳಿಗೆ ಮಾನವಶಕ್ತಿಯಂತಹ ಸ್ಥಳೀಯ ಸೇವಾ ಪೂರೈಕೆದಾರರಿಗೆ ಅವಕಾಶಗಳನ್ನು ಒದಗಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಯಾವೆಲ್ಲ ರಾಜ್ಯಗಳಲ್ಲಿ ಹೊಸ ನವೋದಯ ಶಾಲೆ?

ಕರ್ನಾಟಕದ ಬಳ್ಳಾರಿಯಲ್ಲಿ 1, ಅರುಣಾಚಲ ಪ್ರದೇಶದಲ್ಲಿ 9, ಅಸ್ಸಾಂ 6, ಮಣಿಪುರ 3, ಮಹಾರಾಷ್ಟ್ರ 3, ತೆಲಂಗಾಣ 5, ಪಶ್ಚಿಮ ಬಂಗಾಳ 2 ನವೋದಯ ಶಾಲೆಗಳನ್ನು ಹೊಂದಲಿವೆ.

ಇದನ್ನೂ ಓದಿ: ಕರ್ನಾಟಕಕ್ಕೆ ಮೋದಿ ಗಿಫ್ಟ್​​: 3 ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ

ನವೋದಯ ವಿದ್ಯಾಲಯಗಳು ಸಂಪೂರ್ಣವಾಗಿ ವಸತಿ, ಸಹ-ಶಿಕ್ಷಣ ಶಾಲೆಗಳಾಗಿದ್ದು, ಅವರ ಕುಟುಂಬದ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಪರಿಗಣಿಸದೆ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳ ಪ್ರತಿಭಾವಂತ ಮಕ್ಕಳಿಗೆ VI ರಿಂದ XII ನೇ ತರಗತಿಯವರೆಗೆ ಉತ್ತಮ ಗುಣಮಟ್ಟದ ಆಧುನಿಕ ಶಿಕ್ಷಣವನ್ನು ಒದಗಿಸುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ